ತುಮಕೂರು | ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಜಾತಿ ಪ್ರಮಾಣ ಪತ್ರ ನೀಡಿ : ರಾಮಕ್ಕ

Date:

ನಖಲಿ ಜಾತಿ ಪ್ರಮಾಣ ಪತ್ರ ಪಡೆದವರ ಶಿಕ್ಷೆಗೆ ಆಗ್ರಹಿಸಿ ತುಮಕೂರು ಜಿಲ್ಲಾ ಹಂದಿಜೋಗಿ ಸಂಘ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರನ್ನು ಭೇಟಿ ಮಾಡಿ ಒತ್ತಾಯಿಸಿರುವುದು ಇತ್ತೀಚೆಗೆ ಮಧ್ಯಮಗಳಲ್ಲಿ ವರದಿಯಾಗಿದೆ. ಹಾಗಾಗಿ ಹಂದಿಜೋಗಿ ಜಾತಿ ಪ್ರಮಾಣಪತ್ರ ನೀಡಲು ಕುಲಶಾಸ್ತ್ರೀಯ ಅಧ್ಯಯನ ನಡೆಸಬೇಕು ಎಂದು ಅಲೆಮಾರಿ ಬುಡಕಟ್ಟು ಮಹಾಸಭಾದ ಮುಖಂಡರಾದ ರಾಮಕ್ಕ ಒತ್ತಾಯಿಸಿದರು

ತುಮಕೂರು ನಗರದ ಸ್ಲಂ ಭವನದಲ್ಲಿ ಜಿಲ್ಲಾ ಅಲೆಮಾರಿ ಹಂದಿಜೋಗಿಗಳ ಪ್ರತಿಭಟನಾ ಸಭೆಯಲ್ಲಿ  ಮಾತನಾಡಿದ ಅವರು, ಇತ್ತೀಚೆಗೆ ತುಮಕೂರು ತಾಲ್ಲೂಕು ಅಣ್ಣೇನಹಳ್ಳಿ ಸರ್ವೇ ನಂ.44 ರಲ್ಲಿ ಹಾಗೂ ಅಮಲಾಪುರ ಸರ್ವೇ ನಂ, 31 ರಲ್ಲಿ ಮತ್ತು ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಸಾತೇನಹಳ್ಳಿಯ ನಲ್ಲೂರು ಗ್ರಾಮ ಸರ್ವೇ ನಂ, 49 ರಲ್ಲಿ 137ಕ್ಕೂ ಹೆಚ್ಚು ಹಂದಿ ಜೋಗಿ ಹಾಗೂ ಅಲೆಮಾರಿ ಸಮುದಾಯದ ಸುಡುಗಾಡು ಸಿದ್ದರು, ಹಕ್ಕಿಪಿಕ್ಕಿಗಳು, ಶಿಳ್ಳೇಕ್ಯಾತರು, ದಕ್ಕಲಿಗ ಸಮುದಾಯಗಳಿಗೆ ನಿವೇಶನ ಹಾಗೂ ವಸತಿಯನ್ನು ವಿಶೇಷ ವರ್ಗದ ಯೋಜನೆಯಲ್ಲಿ ಜಿಲ್ಲಾಡಳಿತ ಕಳೆದ 20 ವರ್ಷಗಳ ಹೋರಾಟಕ್ಕೆ ಮಣಿದು ನೀಡಲು ಮುಂದಾಗಿರುತ್ತದೆ, ಆದರೆ ಇದನ್ನು ಸಹಿಸದ ಹಂದಿ ಜೋಗಿಗಳಲ್ಲೇ ಮುಂದುವರಿದ ವರಹಾ ಪಂಗಡದವರು ನಮ್ಮನ್ನು ಹಂದಿ ಜೋಗಿಗಳೇ ಅಲ್ಲ ಎಂದು ಆರೋಪ ಮಾಡುತ್ತಿರುವುದು ಸರಿಯಲ್ಲ, ಇದು ಸತ್ಯಕ್ಕೆ ದೂರವಾಗಿದೆ ಎಂದರು

ತಲಾತಲಾಂತರಗಳಿಂದ ನಾವು ಹಂದಿಗಳನ್ನು ಊರೂರಿನಲ್ಲಿ ಸಾಕಾಣಿಕೆ ಮಾಡಿ ಜೀವನೋಪಾಯವನ್ನು ಸಾಗಿಸುತ್ತಿದ್ದೇವೆ, ನಮ್ಮಲ್ಲೇ ಹಂದಿಜೋಗಿ ಸಮುದಾಯದ ವರಹ ಬುಡಕಟ್ಟಿನವರು ಮುಂದುವರಿದ ವರ್ಗದವರಾಗಿದ್ದು ಇವರಿಗೆ ಸಾಕಷ್ಟು ಜಮೀನು ಮತ್ತು ಸ್ವಂತ ಮನೆಗಳು ಹಾಗೂ ಕೋಟ್ಯಂತರೂಪಾಯಿಗಳ ವ್ಯವಹಾರಗಳನ್ನು ಮಾಡುತ್ತಿದ್ದಾರೆ, ನಾವು ಮಡಕಟ್ಟಿ ಬುಡಕಟ್ಟಿಗೆ ಸೇರಿದ್ದು ಊರೂರಿನಲ್ಲಿ ಗುಡಿಸಲುಗಳನ್ನು ಹಾಕಿಕೊಂಡು ಹಂದಿಗಳನ್ನು ಸಾಕಾಣಿಕೆ ಮಾಡುತ್ತಿದ್ದೇವೆ. ನಾವು ಎಳವ ಸಮುದಾಯಕ್ಕೆ ಸೇರಿದವರಲ್ಲ. ನಮ್ಮ ಮಕ್ಕಳು ಮತ್ತು ಹಿರಿಯರು ಹಂದಿಜೋಗಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ, ನಮ್ಮೆಲ್ಲ ಶಾಲಾ ದಾಖಲಾತಿಗಳು ಪ್ರಮಾಣಿಕತೆ ಕೂಡಿವೆ ಎಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರ ಬಗ್ಗೆ ಜಿಲ್ಲಾಡಳಿತ ಅಗತ್ಯ ತನಿಖೆ ನಡೆಸಿ ಆರ್ಥಿಕವಾಗಿ ಮುಂದುವರಿದಿರುವ ಹಂದಿಜೋಗಿ ವರಹ ಬುಡಕಟ್ಟಿನವರನ್ನು ಸರ್ಕಾರಿ ಯೋಜನೆಯಿಂದ ಕೈಬಿಡಬೇಕೆಂದು ಆಗ್ರಹಿಸಿದರು. 

ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪರವಾಗಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸ್ಲಂ ಜನಾಂದೋಲನ ಸಂಘಟನೆಯ ಸಂಚಾಲಕ ಎ.ನರಸಿಂಹಮೂರ್ತಿ,  ಇತ್ತೀಚೆಗೆ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ಸಿದ್ದತೆ ಮಾಡಿಕೊಂಡ ಹಿನ್ನಲೆಯಲ್ಲಿ ಅಲೆಮಾರಿ ಸಮುದಾಯಗಳಲ್ಲಿ ಜಾಗೃತಿ ಹೆಚ್ಚಾಗಿದೆ, ಹಂದಿಜೋಗಿಸ್ ಜಾತಿ ಪರಿಶಿಷ್ಟ ಜಾತಿಯ 98ರ ಪಟ್ಟಿಯಲ್ಲಿ ಸೇರಿದ್ದು ನಾವು ನೋಡಿದಂತೆ ಈ ಸಮುದಾಯ ಹಂದಿ ಜೋಗಿ ಸಾಂಸ್ಕೃತಿಕತೆಯನ್ನು ಆಚರಿಸಕೊಂಡು ಬರುತ್ತಿದೆ ಮುಂದುವರಿದ ಜಾತಿಗಳು ಹಿಂದುಳಿದ ಜಾತಿಗಳನ್ನು ತುಳಿಯುವುದು ಹಿಂದಿನಿಂದಲು ನಡೆದುಕೊಂಡು ಬಂದಿರುವುದೇ ಆಗಿದೆ.

 ಈ ರೀತಿಯ ಜಾತಿ ಗೊಂದಲಗಳಿಗೆ ತಾರ್ಕಿಕ ಅಂತ್ಯಗೊಳಿಸಲು ಜಿಲ್ಲಾಡಳಿಯ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಜಾತಿಯ ಮೂಲವನ್ನು ಗುರುತಿಸಿ ಆ ಜಾತಿಯ ಪ್ರಮಾಣ ಪತ್ರಗಳನ್ನು ನೀಡಬೇಕು ಏಕೆಂದರೇ, ಶಾಲೆಗಳಲ್ಲಿ ಸ್ಕಾಲರ್‌ಷಿಪ್ ಪಡೆಯಲು ಅಥವಾ ಇನ್ನೀತರೆ ಸೌಲ¨sಭ್ಯಗಳನ್ನು ಪಡೆಯಲು ಹಾಗೂ ಸರ್ಕಾರಿ ಯೋಜನೆಗಳನ್ನು ಪಡೆಯಲು ಜಾತಿ ಪ್ರಮಾಣ ಪತ್ರ ಅಗತ್ಯವಾಗಿದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಮದ್ಯಪ್ರವೇಶ ಮಾಡಿ ಕುಲಶಾಸ್ತ್ರೀಯ ಅಧ್ಯಯನ ನಡೆಸಬೇಕು ಈ ಬಗ್ಗೆ ಮನವಿ ನೀಡಲಾಗುವುದು ಎಂದರು

ಇದೇ ಸಂದರ್ಭದಲ್ಲಿ ಅಲೆಮಾರಿ ಹಂದಿಜೋಗಿ ಸಮುದಾಯದ ಮುಕಂಡರಾದ ಚಿಕ್ಕಗಂಗಮ್ಮ, ನಾಗರಾಜು, ವೆಂಕಟೇಶ್, ಗೋವಿಂದ, ಗಣೇಶ್, ಗರ‍್ರಪ್ಪ, ಸಂತೋಷ್, ಅಮಲಾಪುರ ನಾಗರಾಜು, ಗುಬ್ಬೀ ಮಾರಣ್ಣ, ತುಮಕೂರು ಸ್ಲಂ ಸಮಿತಿಯ ಪದಾಧಿಕಾರಿಗಳಾದ ಅರುಣ್, ಕೃಷ್ಣಮೂರ್ತಿ, ಮುಂತಾದವರು ಪಾಲ್ಗೊಂಡಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...