ತುಮಕೂರು | ಹೆತ್ತೇನಹಳ್ಳಿ ಮಾರಮ್ಮ ದೇವಾಲಯದ ಜೀರ್ಣೋದ್ಧಾರಕ್ಕೆ 31 ಲಕ್ಷ ನೀಡಿದ್ದೇನೆ : ಊರುಕೆರೆ ಜಗದೀಶ್

Date:

ಆದಿ ಶಕ್ತಿ ಹೆತ್ತೇನಹಳ್ಳಿ ಮಾರಮ್ಮ ನಮ್ಮ ಮನೆಯ ಮನೆದೇವರಾಗಿದ್ದು,ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರ ಮತ್ತು ಸದಸ್ಯರುಗಳ ಸಲಹೆಯಂತೆ,ದೇವಾಲಯದ ಗರ್ಭಗುಡಿ ಹಾಗೂ ಅದರ ಗೋಪುರ ಕಟ್ಟಿಸಿಕೊಡುವ ಜವಾಬ್ದಾರಿ ನನ್ನದಾಗಿದ್ದು, ಇದುವರೆಗೂ ಸುಮಾರು 31 ಲಕ್ಷರೂಗಳನ್ನು ದೇವಾಲಯದ ಅಭಿವೃದ್ದಿಗೆ ನೀಡಿದ್ದೇನೆ ಎಂದು ಉದ್ಯಮಿ ಊರುಕೆರೆ ಜಗದೀಶ್ ತಿಳಿಸಿದರು

ತುಮಕೂರು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಹೊಸಮನೆಯ ಗೃಹ ಪ್ರವೇಶದ ಸಂದರ್ಭದಲ್ಲಿ ದೇವರನ್ನು ಕರೆಯಿಸಿದ್ದು,ಹರಕೆ ತೀರಿಸುವ ಸಂಬಂಧ ದೇವಾಲಯಕ್ಕೆ ಹೋದಾಗ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ದೇವಾಲಯದ ಗುರ್ಭಗುಡಿ ಮತ್ತು ಗೋಪುರ ಕಟ್ಟಿಸಿಕೊಡುವಂತೆ ಕೋರಿ ಕೊಂಡ ಹಿನ್ನೆಲೆಯಲ್ಲಿ ಒಪ್ಪಿಕೊಂಡು,ಕಾಮಗಾರಿ ಕೈಗೆತ್ತಿಕೊಂಡಿದ್ದೇನೆ.ಶೇ90ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದರು.

ದೇವಾಲಯದ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲಿಸಲು ಹೋದ ಸಂದರ್ಭದಲ್ಲಿ ಕೆಲ ಹಿರಿಯ ಮಾತಿನಿಂದ ದೇವಾಲಯದ ಲೆಕ್ಕಪಕ್ಕದ ಬಳಿ ಅನುಮಾನ ಉಂಟಾದ ಹಿನ್ನೆಲೆಯಲ್ಲಿ ನನ್ನ ಹಿತೈಷಿಗಳಾದ ಮಾಜಿ ಶಾಸಕರಾದ ಡಿ.ಸಿ.ಗೌರಿಶಂಕರ್ ಅವರನ್ನು ಪ್ರಶ್ನಿಸಿದಲ್ಲದೆ,ಅಲ್ಲದೆ ಪತ್ರಿಕೆಗಳಲ್ಲಿ ಬಂದ ಮಾಹಿತಿಯನ್ನು ಆಧರಿಸಿ,ಹೆತ್ತೇನಹಳ್ಳಿ ಮಾರಮ್ಮನ ವರಿಗೆ 5.50 ಗ್ರಾಂ ನ ಹೊಸ ತಾಳಿ ಮಾಡಿಸಿ, ಗೌರಿಶಂಕರ್ ಅವರ ಮೂಲಕ ದೇವಿಯ ಆರ್ಚಕರಿಗೆ ನೀಡಿದ್ದೇ. ಈ ವೇಳೆ ನನ್ನ ಅಭಿವೃದ್ದಿ ಕಾರ್ಯಗಳನ್ನು ಮಾಜಿ ಶಾಸಕರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಪ್ರಶಂಶೆ ವ್ಯಕ್ತಪಡಿಸಿದ್ದರು. ಈ ಘಟನೆ ನಂತರ ನನ್ನನ್ನು ಕೆಲವರು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಕೆಲಸ ಮಾಡುತ್ತಿದ್ದು, ತಾಳಿಯೇ ಕಳೆದು ಹೋಗಿಲ್ಲ, ಜಗದೀಶ್ ನೀಡಿರುವುದು ಕೇವಲ 7.35 ಲಕ್ಷ ಮಾತ್ರ ಎಂದು ಹೇಳುತಿದ್ದಾರೆ. ನಾನು 24 ಲಕ್ಷ ರೂಗಳನ್ನು ನಗದು ರೂಪದಲ್ಲಿ ನೀಡಿರುವುದಕ್ಕೆ ನನ್ನ ಬಳಿ ದಾಖಲೆ ಇದೆ. ಅಲ್ಲದೆ ತಹಶೀಲ್ದಾರರಿಗೆ 2 ಲಕ್ಷ ರೂ ನೀಡಿದ್ದೇನೆ. ಮೂರು ಲಕ್ಷ ರೂಗಳನ್ನು ಗೋಪುರದ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ನೀಡಿದ್ದೇನೆ.ಇದುವರೆಗೂ ಒಟ್ಟು 31 ಲಕ್ಷ ರೂಗಳನ್ನು ನೀಡಿದ್ದೇನೆ ಎಂದು ದಾಖಲೆಗಳನ್ನು ಉದ್ಯಮಿ ಜಗದೀಶ್ ಪ್ರದರ್ಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆತ್ತೇನಹಳ್ಳಿ ಮಾರಮ್ಮ ದೇವಿಯ ದೇವಾಲಯದಲ್ಲಿ ಕಳ್ಳತನ ನಡೆದ ಮಾಹಿತಿ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು, ಒಟ್ಟಾರೆ 46 ಗ್ರಾಂ ಚಿನ್ನದ ವಡವೆ ಕಳ್ಳತನವಾಗಿದೆ. ತದ ನಂತರ 14 ಗ್ರಾಂ ಸಿಕ್ಕಿದೆ ಎಂದು ಹೇಳಿದ್ದಾರೆ. ಅದು ಎಲ್ಲಿತ್ತು,ಹೇಗೆ ಅಲ್ಲಿಗೆ ಬಂತು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ.ದೇವಾಲಯದ ಜೀರ್ಣೋದ್ಧಾರಕ್ಕೆ ಭಕ್ತಾಧಿಗಳಿಂದ ಲಕ್ಷಾಂತರ ರೂ ಧೇಣಿಗೆ ಹರಿದು ಬರುತ್ತಿದೆ.ಅದಕ್ಕೆ ಲೆಕ್ಕಪತ್ರ ಒಂದು ಸಹ ಇಲ್ಲ. ಕೆಲವರು ಸಮಿತಿ ಮಾಡಿಕೊಂಡಿದ್ದೇವೆ ಎನ್ನುತಿದ್ದಾರೆ. ಮುಜರಾಯಿ ಇಲಾಖೆಯ ದೇವಾಲಯಕ್ಕೆ ಸಮಿತಿ ಮಾಡಿಕೊಳ್ಳಲು ಇವರಿಗೆ ಅಧಿಕಾರ ಕೊಟ್ಟವರು ಯಾರು?,ಭಕ್ತರು ಕೊಟ್ಟ ಧೇಣಿಗೆಗೆ ಲೆಕ್ಕಪತ್ರ ಇದೆಯೇ ? ಇವುಗಳನ್ನು ಭಕ್ತರ ಮುಂದೆ ಇಡಬೇಕು.ನಾನು ಈ ವಿಚಾರದಲ್ಲಿ ಯಾರನ್ನು ದೂರುವುದಿಲ್ಲ.ಮಾರಮ್ಮ ದೇವಿಗೆ ಎಲ್ಲವನ್ನು ನೋಡಿಕೊಳ್ಳುವ ಶಕ್ತಿ ಇದೆ. ಆಕೆಯೇ ನೋಡಿಕೊಳ್ಳುತ್ತಾಳೆ ಎಂದು ಜಗದೀಶ್ ಮಾಮೀಕವಾಗಿ ನುಡಿದರು.

ನಾನು ಮತ್ತು ಭಕ್ತರು ಸೇರಿ ದೇವಾಲಯದ ರಾಜಗೋಪರ ನಿರ್ಮಾಣ ಮಾಡಬೇಕು ಎಂಬ ಆಸೆಯಿದೆ.ಆದರೆ ಶಾಸಕರು ಸರಕಾರದ ಅನುದಾನದಲ್ಲಿ ನಿರ್ಮಿಸುವುದಾಗಿ ತಿಳಿಸಿದ್ದಾರೆ.ಒಂದು ವೇಳೆ ಅವರು ನಿರ್ಮಾಣ ಮಾಡಿದರೆ ಸಂತೋಷ, ಅಗತ್ಯವೆನಿಸಿದರೆ ನಾವು ಕೈಜೋಡಿಸಲು ಸಿದ್ದ. ಒಟ್ಟಾರೆ ತಾಯಿಯ ಸೇವೆಗೆ ನಾನು ಮತ್ತು ನನ್ನ ಕುಟುಂಬ ಸದಾ ಸಿದ್ದವಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಹೆತ್ತೇನಹಳ್ಳಿ ಮಂಜುನಾಥ್, ವಕೀಲರಾದ ಸ್ವಾಮಿಗೌಡ, ಮಂಜುನಾಥ್,ಗ್ರಾ.ಪಂ ಸದಸ್ಯ ರಮೇಶ್, ಹರೀಶ್, ನರಸಿಂಹಮೂತಿ”ð ಚಂದ್ರು, ಅಕ್ಷಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...