ತುಮಕೂರು | ʼಒಳಮೀಸಲು ಇಲ್ಲವಾದರೆ ಪ್ರಶಸ್ತಿ ಹಿಂದಕ್ಕೆʼ: ಸಿಎಂಗೆ ಪತ್ರ ಬರೆದ ದಸಂಸ ಸಂಚಾಲಕ ಕುಂದೂರು ತಿಮ್ಮಯ್ಯ

Date:

ಒಳಮೀಸಲಾತಿ ಇಲ್ಲವಾದಲ್ಲಿ ಬಾಬು ಜಗಜೀವನ ರಾಮ್ ಪ್ರಶಸ್ತಿ ಹಿಂದುರುಗಿಸುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತುಮಕೂರು ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಕುಂದೂರು ತಿಮ್ಮಯ್ಯ ಅವರ ಸಾಮಾಜಿಕ ಸೇವೆ ಗುರುತಿಸಿ ಕರ್ನಾಟಕ ಸರ್ಕಾರ 2023ನೇ ಸಾಲಿನಲ್ಲಿ ‘ಬಾಬು ಜಗಜೀವನರಾಮ್ ರಾಜ್ಯ ಪ್ರಶಸ್ತಿ’ಯನ್ನು ನೀಡಿ ಗೌರವಿಸಿತ್ತು. ಪ್ರಸ್ತುತ ಒಳ ಮೀಸಲಾತಿ ಹೋರಾಟ ತೀವ್ರವಾಗುತ್ತಿದೆ. ಇದೇ ತಿಂಗಳ 12ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟವನ್ನು ರೂಪಿಸಲಾಗಿದೆ. ಈ ಸಂದರ್ಭದಲ್ಲಿ ಕುಂದೂರು ತಿಮ್ಮಯ್ಯ ಅವರ ಬಹಿರಂಗ ಪತ್ರ ಹೋರಾಟದ ಕಿಚ್ಚು ಪ್ರಶಸ್ತಿ ಹಿಂದುರುಗಿಸುವವರೆಗೂ ಹೋಗುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಬಹಿರಂಗ ಪತ್ರದಲ್ಲಿ ಏನಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಸಾಮಾಜಿಕ ಸೇವೆ ಗುರುತಿಸಿ 2023ನೇ ಸಾಲಿನಲ್ಲಿ ‘ಬಾಬು ಜಗಜೀವನರಾಮ್ ರಾಜ್ಯ ಪ್ರಶಸ್ತಿ’ಯನ್ನು ನೀಡಿ ಗೌರವಿಸಿರುತ್ತೀರಿ. ನನಗೆ ಇದರಿಂದ ಅತೀವ ಸಂತೋಷವಾಗಿರುತ್ತದೆ. ಐವತ್ತು ವರ್ಷದ ನನ್ನ ಸಂಘರ್ಷದ ಬದುಕು ಸಾರ್ಥಕವೆನಿಸಿತ್ತು. ಪ್ರಶಸ್ತಿ ಪ್ರದಾನ ಮಾಡಿ ಅಂದು ತಾವು “ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವುದಾಗಿ, ಒಳಮೀಸಲಾತಿಯನ್ನು ಜಾರಿಗೊಳಿಸಿಯೇ ತೀರುವುದಾಗಿ” ಆಡಿದ ಮಾತು ಇನ್ನೂ ಕಿವಿಯಲ್ಲಿ ಗುಯ್‌ಗುಡುತ್ತಿದೆ. ಸುಪ್ರೀಮ್ ಕೋರ್ಟ್ ತೀರ್ಪು ಬಂದ ನಂತರವೂ, ತಾವೇ ರಚಿಸಿದ ನ್ಯಾಯಮೂರ್ತಿ ನಾಗಮೋಹನ್ ದಾಸ್‌ರ ವರದಿ ಬಂದು ಒಳಮೀಸಲು ಹಂಚಿಕೆಯ ಶಿಫಾರಸು ಮಾಡಿದ ನಂತರವೂ, ಸಮಿತಿ, ಉಪಸಮಿತಿ, ಕ್ಯಾಬಿನೆಟ್ ತೀರ್ಮಾನ ಎಲ್ಲ ಮುಗಿದರೂ ಒಂದಲ್ಲ ಒಂದು ಅನಗತ್ಯ ಹೊಸ ಸಮಸ್ಯೆ ಸೃಷ್ಟಿಸಿಕೊಂಡು ಒಳಮೀಸಲು ಅನುಷ್ಠಾನ ಮುಂದೂಡುತ್ತಲೇ ಬರುತ್ತಿರುವುದು ಖಂಡನೀಯವಾಗಿರುತ್ತದೆ” ಎಂದು ಪತ್ರದಲ್ಲಿ ವಿವರಿಸಿದ್ದಾರೆ.‌

ಇದನ್ನೂ ಓದಿ: ತುಮಕೂರು | ನೇಮಕಾತಿಯಲ್ಲಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ಸದರಿ ಶೇ.15ರ ಹಳೆ ಮೀಸಲು ನಿಯಮದಂತೆ 56,000 ಹುದ್ದೆಗಳನ್ನು ಒಳಮೀಸಲು ಇಲ್ಲದೆ ಭರ್ತಿ ಮಾಡಿಕೊಳ್ಳಲು ಮುಂದಾಗಿರುವುದು ನೋವಿನ ಸಂಗತಿ ಮಾತ್ರವಾಗಿರದೆ, ನಾವುಗಳೆಲ್ಲ ತಮ್ಮ ಹಾಗೂ ತಮ್ಮ ಸಾಮಾಜಿಕ ನ್ಯಾಯದ ಮೇಲೆ ಇಟ್ಟಿರುವ ನಂಬಿಕೆಯು ಬುಡಮೇಲಾಗುತ್ತಿರುವ ಸಂದರ್ಭ ಇದಾಗಿದೆ. ಆದ್ದರಿಂದ ವೈಜ್ಞಾನಿಕವಾದ ಅಂಕಿ ಅಂಶಗಳೇ ಹೇಳುತ್ತಿರುವಂತೆ ಅತ್ಯಂತ ಹಿಂದುಳಿದ ಅಲೆಮಾರಿ ಮತ್ತು ಮಾದಿಗ ಸಮುದಾಯಕ್ಕೆ ಪ್ರತ್ಯೇಕವಾಗಿ ಶೇಕಡ 1 ಹಾಗೂ 6 ರಷ್ಟು ಒಳಮೀಸಲಾತಿ ನೀಡದೆ ಯಾವುದೇ ನೇಮಕಾತಿಯನ್ನು ಮುಂದುವರೆಸುವುದೇ ಆದರೆ ತಾವು ಆಶ್ವಾಸನೆ ಇಟ್ಟು ನೀಡಿದ ಪ್ರಶಸ್ತಿಯನ್ನು ಮುಡಿಗೇರಿಸಿ ತಿರುಗಾಡುವುದರಲ್ಲಿ ನನಗೆ ಯಾವುದೇ ಅರ್ಥ ಕಾಣುತ್ತಿಲ್ಲ. ಸಮುದಾಯದ ಹಿತವೇ ವೈಯಕ್ತಿಕ ಹಿತವೂ ಆಗಿದೆ. ಇದೇ ಮಾರ್ಚ್ 12ರಂದು ನಡೆಯುವ ತಮ್ಮ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ‘ಬಾಬು ಜಗಜೀವನ ರಾಮ್ ರಾಜ್ಯ ಪ್ರಶಸ್ತಿಯನ್ನು’ ಸರ್ಕಾರಕ್ಕೆ ಹಿಂದಿರುಗಿಸುವುದಾಗಿ ನೋವಿನಿಂದ ಈ ಪತ್ರ ಬರೆಯುತ್ತಿದ್ದೇನೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...