ಇತ್ತೀಚೆಗೆ ಬೆಂಗಳೂರಿನ ಆಚಾರ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಅಂತರ ಕಾಲೇಜು ಉಪನ್ಯಾಸಕರ ವಾಲೀಬಾಲ್ ಪಂದ್ಯಾವಳಿಗಳಲ್ಲಿ ಸಾಹೇ ವಿಶ್ವ ವಿದ್ಯಾನಿಲಯದ ವಾಲಿಬಾಲ್ ತಂಡ ಭಾಗವಹಿಸಿ ಈಸ್ಟ್ ಪಾಯಿಂಟ್ ಇಂಜಿನಿಯರಿಂಗ್ ಕಾಲೇಜಿನ ವಿರುದ್ಧ ಸೆಣಸಾಡಿ 25-18, 25-20ರಲ್ಲಿ ಅಂಕಗಳನ್ನು ಪಡೆಯುವ ಮೂಲಕ ಜಯಗಳಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರುದ್ರೇಶ ಕೆ.ಆರ್ ರವರು ತಂಡವನ್ನು ಮುನ್ನಡೆಸಿದ್ದರು. ಸಾಹೇ ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಶಶಿ ಕುಮಾರ್ ಹಾಗೂ ನಿಖಿಲ್ ಗೌಡ, ಮನೋಜ ಮೆಗಾನಿ ರೆಡ್ಡಿ, ಕಿರಣ್ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.

ವಿಜೇತ ತಂಡಕ್ಕೆ ಸಾಹೇ ವಿಶ್ವ ವಿದ್ಯಾನಿಲಯದ ಕುಲಾಧಿಪತಿಗಳು ಹಾಗೂ ರಾಜ್ಯ ಸರ್ಕಾರದ ಗೃಹ ಸಚಿವರಾದ ಡಾ. ಜಿ ಪರಮೇಶ್ವರ ಹಾಗೂ ಸಾಹೇ ಕುಲಾಧಿಪತಿಗಳ ಸಲಹೆಗಾರರಾದ ಡಾ. ವಿವೇಕ್ ವೀರಯ್ಯ, ಸಾಹೇ ವಿ.ವಿಯ ಉಪಕುಲಪತಿಗಳಾದ ಡಾ. ಕೆ.ಬಿ. ಲಿಂಗೇಗೌಡ ಸಾಹೇ ವಿವಿಯ ಕುಲಸಚಿವರಾದ ಡಾ. ಅಶೋಕ್ ಮೆಹ್ತ, ಸಾಹೇ ವಿವಿಯ ಪರಿಕ್ಷಾಂಗ ನಿಯಂತ್ರಕರಾದ ಡಾ. ಗುರುಶಂಕರ್, ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಹಾಂತೇಶ್ ಎಂ. ನಡಕಟ್ಟಿ ಹಾಗೂ ಎಲ್ಲ ವಿಭಾಗದ ಮುಖ್ಯಸ್ಥರು ಈ ತಂಡಕ್ಕೆ ಅಭಿನಂಧಿಸಿದ್ದಾರೆ.





