ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಶಿರಾ- ತುಮಕೂರು ಮಾರ್ಗ ಮಧ್ಯೆ ಎದೆ ನೋವು ಕಾಣಿಸಿಕೊಂಡಿದ್ದು, ತುಮಕೂರು ನಗರದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಕೊಪ್ಪಳದ ಕನಕಗಿರಿ ತಮ್ಮ ಕ್ಷೇತ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯ ಘಟನೆ ನಡೆದಿದೆ. ಚಿಕಿತ್ಸೆ ಪಡೆದ ಬಳಿಕ ಸಚಿವ ಶಿವರಾಜ್ ತಂಗಡಗಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿ, ನಾನು ಆರೋಗ್ಯವಾಗಿದ್ದೇನೆ. ಆತಂಕ ಪಡುವ ಅಗತ್ಯವಿಲ್ಲ. ಕ್ಷೇತ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದೆ. ಶಿರಾ ಬಳಿ ಎದೆ ನೋವು ಕಾಣಿಸಿಕೊಂಡಿತು. ತಕ್ಷಣ ನಮ್ಮ ಫ್ಯಾಮಿಲಿ ವೈದ್ಯರಿಗೆ ಕರೆ ಮಾಡಿ ಮಾತನಾಡಿದೆ. ಅವರು ಬೆಂಗಳೂರು ಮಾರ್ಗ ತುಂಬಾ ಟ್ರಾಫೀಕ್ ಇದೆ. ಬೆಂಗಳೂರಿಗೆ ತಕ್ಷಣದಲ್ಲಿ ತಲುಪುವುದು ಕಷ್ಟವಾಗಲಿದೆ. ಚಾನ್ಸ್ ತಗೊಳೊದು ಬೇಡ.ಸ್ಥಳೀಯ ಆಸ್ಪತ್ರೆಗೆ ದಾಖಲಾಗಲು ಸಲಹೆ ನೀಡಿದರು. ಹಾಗಾಗಿ ನಾನು ಸಿದ್ದಗಂಗಾ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದೇನೆ. ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು

ಅಸಿಡಿಟಿಯಿಂದ ಎದೆ ನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈಗ ಆರೋಗ್ಯವಾಗಿದ್ದೇನೆ ಆತಂಕ ಪಡುವ ಅಗತ್ಯವಿಲ್ಲ. ಹಿಂದೆ ಯಾವತ್ತು ಈರೀತಿ ಆಗಿರಲಿಲ್ಲ. ನನಗೆ ಯಾವುದೇ ಸಮಸ್ಯೆ ಇರಲಿಲ್ಲ. ನಾನು ಮತ್ತೆ ಬೆಂಗಳೂರಿಗೆ ತೆರಳುತ್ತೇನೆ ಎಂದು ಹೇಳಿದರು.





