ತುಮಕೂರು | ಕವಿತೆ ಗಾಯಕ್ಕೆ ಮದ್ದು, ಬದುಕಿಗೆ ಚೈತನ್ಯ ತುಂಬುವ ಒರತೆ : ಸಾಹಿತಿ ರಂಗಮ್ಮ ಹೊದೇಕಲ್ 

Date:

ದುಃಖಗಳಿಂದ ಮಾತ್ರವೇ ಮತ್ತೊಬ್ಬರನ್ನು ಅರ್ಥ ಮಾಡಿಕೊಳ್ಳಲು, ನಮ್ಮೊಳಗಿನ ಸೃಜನಶೀಲತೆಯನ್ನು ಉದ್ದೀಪಿಸಲು, ಮತ್ತೊಬ್ಬರ ನೋವಿಗೆ ಮಿಡಿಯುವಂತೆ ನಮ್ಮನ್ನು ಅಣಿಗೊಳಿಸಲು ಸಾಧ್ಯ ಎಂದು ಸಾಹಿತಿ ರಂಗಮ್ಮ ಹೊದೇಕಲ್ ಅಭಿಪ್ರಾಯಪಟ್ಟರು

ತುಮಕೂರು ನಗರದ ಎಸ್.ಎಸ್. ಪುರಂನ ಅಂಗಳ ಕಮ್ಯುನಿಟಿ ಟ್ರಸ್ಟ್ ನಲ್ಲಿ ದಾರಿಬುತ್ತಿ ಬಳಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ, ಧನಪಾಲ ನಾಗರಾಜಪ್ಪ ಅವರ ‘ಮಾತಾಡುವ ದೇವರು’ ಮತ್ತು ‘ಅವಳಿಗೆ ಹೇಳಿ’ ಕೃತಿಗಳ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, 

ಈ ಕೃತಿಯಲ್ಲಿಯೂ ದುಃಖವಿದೆ. ದುಃಖದ ಗಾಯಗಳಿವೆ. ಅದರೆ, ಇವು ಕೇವಲ ಗಾಯಗಳಲ್ಲ, ಇವು ನಮಗೆ ಜೀವನ ಪಾಠಗಳನ್ನು ಹೇಳುವ ಅನುಭವಗಳು. ಕವಿತೆ ಗಾಯಕ್ಕೆ ಮದ್ದು, ಬದುಕಿಗೆ ಚೈತನ್ಯ ತುಂಬುವ ಒರತೆ. ಯುವ ಕವಿಗಳಿಗೆ ಇಂಥಹ ಸಾಹಿತ್ಯ ಸಖ್ಯಗಳು ಹೊಸ ಓದುಗಳನ್ನು, ಭಿನ್ನ ಭಿನ್ನ ಜೀವನಾನುಭವಗಳನ್ನು ಕಲಿಸುತ್ತವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಶಿಕ್ಷಕಿ ಕೆ.ವಿ. ವಿವೇಕ ಮಾತನಾಡಿ   “ಮಾತಾಡುವ ದೇವರು” ಕೃತಿಯನ್ನು ಸಾಮಾನ್ಯರಿಗೂ ಅರ್ಥವಾಗುವ ಭಾಷೆಯಲ್ಲಿ, ಮಾನವೀಯ ಮೌಲ್ಯಗಳನ್ನು ಕನ್ನಡದ ಪ್ರಾದೇಶಿಕತೆಗೆ ಹೊಂದಿಸಿ ಅನುವಾದಿಸಲಾಗಿದೆ. ಈ ಕೃತಿ, ಕನ್ನಡದ್ದೇ ಕೃತಿ. ನಮ್ಮದೇ ಬದುಕಿನ ಕಥೆ ಎಂಬಂತೆ ಮೂಡಿಬಂದಿದೆ. ಇದು ಓದುಗರಲ್ಲಿ ವಿಚಾರ ಮಂಥನವನ್ನು ಉಂಟುಮಾಡುವ ಮಹತ್ವದ ಕೃತಿ. ಇಲ್ಲಿನ ಸ್ತ್ರೀಪಾತ್ರಗಳು ತಮ್ಮ ಆತ್ಮಸಾಕ್ಷಿಯಂತೆ ತಮ್ಮ ಬದುಕಿನ ನಿರ್ಧಾರಗಳನ್ನು ತಾವೇ ತೆಗೆದುಕೊಳ್ಳುವುದು ವಿಶೇಷ ಎಂದರು.

“ಅವಳಿಗೆ ಹೇಳಿ” ಕೃತಿಯನ್ನು ಕುರಿತು ಮಾತನಾಡಿದ ದರ್ಶನ್ ಎಸ್.ಆರ್., ಸುತ್ತಲೂ ಕತ್ತಲೆ ಆವರಿಸಿರುವಾಗ, ಕವಿತೆ ಒಂದು ಬೆಳಕು. ನಮ್ಮ ಸುತ್ತ ಇರುವ ಶೋಷಣೆ, ದೌರ್ಜನ್ಯ, ಅಸಮಾನತೆಗಳೇ ಈ ಕತ್ತಲೆ. ಈ ಕತ್ತಲೆ ಇದೆ ಎಂಬುದನ್ನು ಕಾಣಿಸುವುದು ಕವಿತೆ. ಅದೇ ಬೆಳಕು. ಮೌನಕ್ಕೆ ಹೊಸ ಭಾಷ್ಯವನ್ನು ಈ ಕವಿತೆಗಳು ಕಟ್ಟಿ ಕೊಡುತ್ತವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್. ಕಲಾಧರ್, ಧನಪಾಲ್ ನಾಗರಾಜಪ್ಪ, ಮೇಘನ ಸಿ ಎಸ್., ದಾದಾಪೀರ್ ಬಿ. ಕೆ., ಅನೀಸ., ರಜಿನಿ, ರಂಜಿತ ಎಂ.ಎನ್, ಮಾನಸ ಎ.ಪಿ., ನವೀನ್ ಕುಮಾರ್ ಪಿ.ಆರ್., ಧನುಷ್ ಎಚ್ ಶೇಖರ್., ಪಾತಲಿಂಗಯ್ಯ ಡಿ.ಪಿ., ಹರಿಕೃಷ್ಣ ಕೆ.ಎಸ್., ಮಾರುತಿ ಟಿ., ಜ್ಞಾನೇಶ್ ಕೆ., ಸೇರಿದಂತೆ ಜಿಲ್ಲೆಯ ಕವಿಗಳು, ದಾರಿಬುತ್ತಿ ಹಾಗೂ ಅಂಗಳ ಟ್ರಸ್ಟ್ ನ ಸದಸ್ಯರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...