ತುಮಕೂರು | ಎಲ್ಲೆಡೆ ರಂಜಾನ್ ಸಂಭ್ರಮ : ಸಾಮೂಹಿಕ ಪ್ರಾರ್ಥನೆ

Date:

 ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಈದ್ ಉಲ್ ಫಿತರ್ ರಂಜಾನ್ ಹಬ್ಬವನ್ನು ತುಮಕೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ತುಮಕೂರು ಜಿಲ್ಲೆಯಾದ್ಯಂತ ರಂಜಾನ್ ಪ್ರಯುಕ್ತ ಮಸೀದಿಗಳು, ದರ್ಗಾಗಳನ್ನು ವಿದ್ಯುತ್ ದೀಪಾಲಂಕಾರದಿಂದ ವಿಶೇಷವಾಗಿ ಸಿಂಗರಿಸಲಾಗಿತ್ತು.   ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಸಹ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಿದರು.

ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಜಮಾಯಿಸಿದ ಸಾವಿರಾರು ಮುಸ್ಲಿಂ ಬಾಂಧವರು ಈ ಬಾರಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಬೆಳಿಗ್ಗೆ 10ಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಹೊಸ ಉಡುಪುಗಳನ್ನು ಧರಿಸಿ, ಒಬ್ಬರಿಗೊಬ್ಬರು ಆಲಿಂಗನ ಮಾಡಿ ಹಬ್ಬದ ಶುಭಾಶಯ ಕೋರಿದ್ದು ವಿಶೇಷವಾಗಿತ್ತು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಂಜಾನ್ ಹಬ್ಬದ ಸಂಭ್ರಮ ಹಿಂದೂ ಮತ್ತು ಮುಸ್ಲಿಂ ಬಾಂಧವರ ಭಾವೈಕ್ಯತೆಯ ಸಂಕೇತವಾಗಿ ಮಾರ್ಪಟ್ಟಿದ್ದು, ಮುಸ್ಲಿಂ ಬಾಂಧವರಿಗೆ ಹಿಂದೂ ಸಮುದಾಯದವರು ಸಹ ಹಬ್ಬದ ಶುಭಾಶಯ ಕೋರುವ ಮೂಲಕ ಭಾವೈಕ್ಯತೆಯನ್ನು ಸಾರಿದರು.

1003014786

ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಶುಭಾಶಯ ಕೋರಿ ಮಾತನಾಡಿದ ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್, ಪ್ರಪಂಚದಾದ್ಯಂತ ರಂಜಾನ್ ಹಬ್ಬದಲ್ಲಿ 30 ವ್ರತಗಳನ್ನು ಆಚರಿಸಿ, ನಾವೆಲ್ಲರೂ ಅನ್ನ, ಆಹಾರ ಬಿಟು, ಕೆಡಕನ್ನು ಬಿಟ್ಟು ಸಹೋದರತ್ವ, ಸಹಬಾಳ್ವೆಯಿಂದ 30 ದಿನಗಳನ್ನು ಕಳೆದಿದ್ದೇವೆ ಎಂದರು.

1003014785

ನಾವೆಲ್ಲರೂ 30 ದಿನಗಳ ಉಪವಾಸ ಇದ್ದು, ಜಕಾತ್‌ನ್ನು ಕೂಡ ಆಚರಿಸಿದ್ದೇವೆ. ಜಕಾತ್ ಎಂದರೆ ಪ್ರಪಂಚದ ಮಾನವರಲ್ಲಿ ಅಸಮತೋಲನ ಇದೆ, ಬಡವರು, ವಿಧವೆಯವರು, ಸಂಪತ್ತು ಉಳ್ಳವರು. ಉಳ್ಳವರು ಬಡವರಿಗೆ ತಮ್ಮ ದುಡಿಮೆಯ ಒಂದಷ್ಟು ಭಾಗವನ್ನು ಜಕಾತ್ ನೀಡಿ ಅವರಿಗೂ ಕೂಡ ನಮ್ಮ ಜತೆ ಸಮಪಾಲು-ಸಮಬಾಳು ಒದಗಿಸಿಕೊಡುವುದು ರಂಜಾನ್ ಧ್ಯೇಯ ಎಂದರು.

ಪ್ರಪಂಚದಲ್ಲಿ ನಡೆಯುತ್ತಿರುವ ಯುದ್ಧಗಳು ನಿಲ್ಲಲಿ, ಮಾನವೀಯತೆಯ ಸಂದೇಶ ಎಲ್ಲರಿಗೂ ಹೋಗಲಿ. ಶಾಂತಿ ನೆಲೆಸಲಿ, ಮಳೆ-ಬೆಳೆಯಾಗಲಿ. ಯಾರು ಮೇಲಲ್ಲ, ಯಾರೂ ಕೀಳಲ್ಲ, ನಾವೆಲ್ಲರೂ ಒಂದೇ ಎಂಬುದು ರಂಜಾನ್ ಸಂದೇಶವಾಗಿದೆ ಎಂದು ಅವರು ತಿಳಿಸಿದರು.

1003014786 1

ನಗರಸಭೆ ಮಾಜಿ ಅಧ್ಯಕ್ಷ ಅಸ್ಲಾಂಪಾಷ ಮಾತನಾಡಿ, ನಾವೆಲ್ಲಾ 30 ದಿನಗಳ ಕಾಲ ಉಪವಾಸ ವ್ರತ ಮಾಡಿ ರಂಜಾನ್ ಹಬ್ಬವನ್ನು ಆಚರಿಸಿದ್ದೇವೆ. ಹಿಂದೂ-ಮುಸ್ಲಿಂ ಬಾಂಧವರು ಎಲ್ಲರೂ ಒಂದೇ ಎಂಬ ಭಾವೈಕ್ಯತೆಯನ್ನು ಸಾರಿದ್ದೇವೆ ಎಂದು ಹೇಳಿ, ರಂಜಾನ್ ಹಬ್ಬದ ಶುಭಾಶಯ ಕೋರಿದರು. ಹಬ್ಬದ ಪ್ರಯುಕ್ತ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಈದ್ಗಾ ಮೈದಾನಕ್ಕೆ ಮಾಜಿ ಶಾಸಕರಾದ ಡಾ. ರಫೀಕ್ ಅಹಮದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಡಿವೈಎಸ್ಪಿ ಚಂದ್ರಶೇಖರ್, ಸರ್ಕಲ್ ಇನ್ಸ್ಪೆಕ್ಟರ್ ರಾಘವೇಂದ್ರ, ಮುಖಂಡರಾದ ಇಕ್ಬಾಲ್ ಅಹಮದ್, ಅಸ್ಲಾಂಪಾಷ, ನಯಾಜ್ ಅಹಮದ್, ರೇವಣಸಿದ್ದಯ್ಯ, ನಯಾಜ್, ಸೇವಾ ದಳದ ಶಿವಪ್ರಸಾದ್, ಗುರುಪ್ರಸಾದ್, ನಟರಾಜಶೆಟ್ಟಿ, ಮಹಮದ್ ಸೈಫ್, ತೋಸಿಫ್, ಫಯಾಜ್ ಅಹಮದ್, ಇರ್ಫಾನ್ ಮತ್ತಿತರರು ಭೇಟಿ ನೀಡಿ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯ ಕೋರಿದರು.

ಮಾರ್ಗ ಬದಲಾವಣೆ

ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರಿಂದ ಯಾವುದೇ ರೀತಿಯ ಅಡಚಣೆಗಳು ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿತ್ತು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...

ತುಮಕೂರು | ಪಾವನಭೂಮಿ ಆಶಯ ಈಡೇರಿಸಲು ಶ್ರಮಿಸೋಣ : ನುಡಿನಮನ

ತುಮಕೂರು ನಗರದ ವಿಜ್ಞಾನ ಸಭನದಲ್ಲಿ ಪ್ರಗತಿಪರ ಯುವಜನರ ಸ್ನೇಹ ಬಳಗದಿಂದ ಕವಯತ್ರಿ...