ತುಮಕೂರು | ಉಸಿರು ಕೊಟ್ಟವಳ ಉಸಿರು ನಿಲ್ಲಿಸಿದ ಮಗಳು

Date:

ತಾಯಿಯನ್ನು ಕೊಲೆ ಮಾಡಿ, ಸಹಜ ಸಾವು ಎಂದು ಬಿಂಬಿಸಿದ್ದ ಮಗಳನ್ನು ಪೊಲೀಸರು ಬಂಧಿಸಿದ್ದಾರೆ.ಬುಧವಾರ ರಾತ್ರಿ ಪುಷ್ಪಾವತಿ ಮಲಗಿದ್ದಾಗ ಸುಚಿತ್ರಾ ಮುಖದ ಮೇಲೆ ದಿಂಬು ಇಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಗುರುವಾರ ಮಧ್ಯಾಹ್ನ ಅನುಪನಹಳ್ಳಿಯಲ್ಲಿ ಅಂತ್ಯಕ್ರಿಯೆಗೆ ತೆರಳಿ ದಾಗ ಕೊಲೆಯ ರಹಸ್ಯ ಬಯಲಾಗಿದೆ.

ಮುಖದ ಮೇಲೆ ಗಾಯದ ಗುರುತುಗಳು ಕಾಣಿಸಿದ್ದವು. ಅಂತ್ಯಕ್ರಿಯೆ ಸಮಯದಲ್ಲಿ ಪುಷ್ಪಾವತಿ ಸಹೋದರ ಅನಿಲ್ ಕುಮಾರ್ ಇದನ್ನು ಗಮನಿಸಿ, ಅಂತ್ಯಕ್ರಿಯೆಗೆ ಅಡ್ಡಿಪಡಿಸಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದಾಗ ಹತ್ಯೆಯ ವಿಷಯ ಹೊರ ಬಂದಿದೆ. ಅನಿಲ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಕ್ಯಾತ್ಸಂದ್ರ ಠಾಣೆ ಪೊಲೀಸರು ಸುಚಿತ್ರಾರನ್ನು ವಶಕ್ಕೆಪಡೆದು ತನಿಖೆ ನಡೆಸುತ್ತಿದ್ದಾರೆ.

ತುಮಕೂರು ತಾಲ್ಲೂಕಿನ ಅನುಪನಹಳ್ಳಿ ಪುಷ್ಪಾವತಿ (55) ಕೊಲೆಯಾದವರು. ಸುಚಿತ್ರಾ (33) ಕೊಲೆ ಮಾಡಿದ ಆರೋಪಿ, ಪುಷ್ಪಾವತಿ ಮಗಳ ಜತೆಗೆ ತುಮಕೂರು ನಗರದ ಶ್ರೀನಗರದಲ್ಲಿ ವಾಸವಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ತಂದೆಯ ಸಾವಿನ ನಂತರ ಸುಚಿತ್ರಾ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಸುಚಿತ್ರಾ ಮತ್ತು ಪುಷ್ಪಾವತಿ ಮಧ್ಯೆ ಆಸ್ತಿಗಾಗಿ ಆಗಾಗ ಗಲಾಟೆ ನಡೆ ಯುತ್ತಿತ್ತು. ಇದೇ ವಿಚಾರವಾಗಿ ನಡೆದ ಗಲಾಟೆ ಕೊಲೆಗೆ ಕಾರಣ ಆಗಿರಬಹುದು’ ಎಂದು ಪೊಲೀಸರು ಶಂಕಿಸಿದ್ದಾರೆ.

 ಒಂದೂವರೆ ವರ್ಷದ ಹಿಂದೆ ಸುಚಿತ್ರಾ ತಂದೆ ಮರಣ ಹೊಂದಿದ್ದರು. ತಂದೆಯ ಸಾವಿಗೆ ತಾಯಿ ಪುಷ್ಪಾವತಿ ಕಾರಣ, ಮಾಟ- ಮಂತ್ರ ಮಾಡಿಸಿದ್ದರಿಂದ ತಂದೆ ಸಾವನ್ನಪ್ಪಿದ್ದರು ಎಂದು ಸುಚಿತಾಗೆ ಕೋಪ ಇತ್ತು ಇದೇ ಕಾರಣಕ್ಕೆ ತಾಯಿಯನ್ನು ಹತ್ಯೆ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...