ತುಮಕೂರು | 334 ಗ್ರಾಮಗಳಿಗೂ ಸ್ಮಶಾನ ಭೂಮಿ ಮಂಜೂರು: ಶಾಸಕ ಎಸ್ ಆರ್ ಶ್ರೀನಿವಾಸ್

Date:

ಪರಿಶಿಷ್ಟರಿಗೆ ಮೀಸಲಿರುವ ಯಾವುದೇ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಲು ಅವಕಾಶವೇ ಇಲ್ಲ. ಯಾವುದೇ ಅಧಿಕಾರಿ ಮೀಸಲು ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿರುವುದು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು ಎಂದು ತುಮಕೂರು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಹಿತರಕ್ಷಣಾ ಸಮಿತಿಯ ಕುಂದು ಕೊರತೆ ಸಭೆ ನಡೆಸಿ ದಲಿತರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದರು.

“ತಾಲೂಕಿನ 343 ಗ್ರಾಮಗಳಿಗೂ ಸ್ಮಶಾನವನ್ನು ಗುರುತಿಸಿದ್ದು ಹಸ್ತಾಂತರಿಸಲಾಗುವುದು. ಕೊಣನಕೆರೆ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಶಿಥಿಲವಾಗಿದ್ದು, ನೂತನ ಅಂಗನವಾಡಿ ಕೇಂದ್ರವನ್ನು ನಿರ್ಮಿಸಲಾಗುವುದು ಹಾಗೂ ಕೊಣನಕೆರೆ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಮಾಡಲಾಗುವುದು. ತಾಲೂಕಿನಲ್ಲಿ ಸಾರ್ವಜನಿಕ ಸ್ಮಶಾಣ ನಿರ್ಮಾಣ ಮಾಡಲು ಕ್ರಮ ತೆಗೆದು ಕೊಳ್ಳಲಾಗುವುದು” ಎಂದು ತಿಳಿಸಿದ ಅವರು ಅಂಬೇಡ್ಕರ್ ಭವನವನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರದಿಂದ ಬರುವ ಅನುದಾನವನ್ನು ವ್ಯವಸ್ಥಿತವಾಗಿ ಬಳಸಿಕೊಂಡು ದಲಿತರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಎಲ್ಲ ಅಧಿಕಾರಿಗಳಿಗೂ ಸೂಚಿಸಿದರು.

“ದಲಿತರ ಭೂಮಿ ಮಂಜೂರಿಗೆ ಕ್ರಮ ತೆಗೆದುಕೊಳ್ಳಲಾಗುವುದು. ದಲಿತರ ಗ್ರಾಮಗಳಿಗೆ ಅಗತ್ಯವಿರುವ ರಸ್ತೆ, ಚರಂಡಿ, ಕುಡಿಯುವ ನೀರು ಇತ್ಯಾದಿ ಮೂಲ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗುತ್ತಿದೆ. ನಿಮಗೆ ಯಾವುದೇ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತಂದಲ್ಲಿ ಪರಿಹರಿಸಿ ಕೊಡಲಾಗುವುದು. ತಾಲೂಕಿನ ಎಲ್ಲ ಮತದಾರರನ್ನು ಯಾವುದೇ ಜಾತಿ ಭೇದವಿಲ್ಲದೆ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸಿಕೊಡುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ” ಎಂದು ತಿಳಿಸಿದರು.

“ಕೆಲವರು ಡಿಎಸ್ಎಸ್ ಸಂಘಟನೆಯ ಹೆಸರಿನಲ್ಲಿ ಕಾರ್ಯಕ್ರಮಗಳಿಗಾಗಿ ಹಣ ವಸೂಲಿ ಮಾಡುತ್ತಿರುವುದು ಕಂಡುಬರುತ್ತಿದೆ. ಅಧಿಕಾರಿಗಳು ಯಾವುದೇ ಕಾರಣಕ್ಕೂ ಹಣ ನೀಡಬಾರದು. ಇಂತಹ ಪದ್ಧತಿಗೆ ಕಡಿವಾಣ ಹಾಕಬೇಕು” ಎಂದು ಮುಖಂಡರು ಶಾಸಕರ ಸಮ್ಮುಖದಲ್ಲಿ ಒತ್ತಾಯಿಸಿದರು.

“ಅನೇಕ ವರ್ಷಗಳಿಂದಲೂ ಪರಿಶಿಷ್ಟರು ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡುತ್ತಾ ಅನುಭವದಲ್ಲಿದ್ದರೂ, ಬಲಾಢ್ಯರ ಒತ್ತಡದಿಂದಾಗಿ ಜಮೀನು ಮಂಜೂರು ಮಾಡದೇ ಬಲಾಢ್ಯರಿಗೆ ಮಣೆ ಹಾಕುತ್ತಿರುವುದು ವಿಪರ್ಯಾಸ” ಎಂದು ಬೇಸರ ವ್ಯಕ್ತಪಡಿಸಿದರು.

“ಪರಿಶಿಷ್ಟರ ಗ್ರಾಮಗಳಿಗೆ ಅಗತ್ಯವಿರುವ ಚರಂಡಿ, ರಸ್ತೆ ಇತ್ಯಾದಿ ಮೂಲ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳು ಕ್ರಮ ವಹಿಸಲು ಸೂಚಿಸಬೇಕು” ಎಂದು ಮುಖಂಡರು ಶಾಸಕರನ್ನು ಕೋರಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮಹಿಳಾ ವಿರೋಧಿ ಕಲ್ಲಡ್ಕ ಪ್ರಭಾಕರ ಭಟ್ಟ ಬಂಧಿಸಿ; ಅಂಜುಮಾನ್ ಇಸ್ಲಾಂ ಕಮೀಟಿ ಒತ್ತಾಯ

ಈ ಸಭೆಯಲ್ಲಿ ತಹಶೀಲ್ದಾರ್ ಬಿ ಆರತಿ, ತಾ.ಪಂ ಕಾರ್ಯನಿರ್ವಣಾಧಿಕಾರಿ ಪರಮೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾದೇವಿ, ಪೊಲೀಸ್ ಆರಕ್ಷಕ ನಿರೀಕ್ಷಕ ಗೋಪಿನಾಥ್, ಎಲ್ಲ ಇಲಾಖೆಯ ಅಧಿಕಾರಿಗಳು, ಡಿಎಸ್ಎಸ್ ಪದಾಧಿಕಾರಿಗಳು ಹಾಗೂ ಮುಖಂಡರು ಇದ್ದರು.

ವರದಿ – ಸಿಟಿಜನ್ ಜರ್ನಲಿಸ್ಟ್ ರಾಮಾಂಜನೇಯ ಗುಬ್ಬಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...