ತುಮಕೂರು | ಶೇ.80ರಷ್ಟು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ ಖಚಿತ: ಮಾಜಿ ಶಾಸಕ ಡಿ ಸಿ ಗೌರಿಶಂಕರ್

Date:

  • ಕಾಂಗ್ರೆಸ್ ಸದಸ್ಯತ್ವ ಪಡೆದ ಮಾಜಿ ಶಾಸಕ ಗೌರಿಶಂಕರ್
  • ʼಹಿರಿಯರ ಸಹಕಾರ ಪಡೆದು ಪಕ್ಷವನ್ನು ಬಲಪಡಿಸಲಾಗುವುದುʼ

ತುಮಕೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕೊರತೆಯಿಲ್ಲ. ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಪಕ್ಷವನ್ನು ಕಟ್ಟಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳು ಕಾಂಗ್ರೆಸ್ ಪಕ್ಷ ಅಭ್ಯರ್ಥಿಗೆ ಬರುವಂತೆ ಮಾಡುವುದು ನಮ್ಮ ಮುಂದಿರುವ ಗುರಿ ಎಂದು ಮಾಜಿ ಶಾಸಕ ಡಿ ಸಿ ಗೌರಿಶಂಕರ್ ಅಭಿಪ್ರಾಯಪಟ್ಟರು.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ ಸಿ ಗೌರಿಶಂಕರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮೊದಲ ಬಾರಿಗೆ ತಮ್ಮ ಅಪಾರ ಬೆಂಬಲಿಗರೊಂದಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಮಾತನಾಡಿದರು.

“ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸುವ ಗುರಿಯನ್ನು ತಲುಪಲು ಪಕ್ಷದ ಹಿರಿಯ ಮುಖಂಡರುಗಳಾದ ಡಾ. ಜಿ ಪರಮೇಶ್ವರ್, ಕೆ ಎನ್ ರಾಜಣ್ಣ ಹಾಗೂ ಇತರೆ ನಾಯಕರ ಸಲಹೆ ಪಡೆದು ಪಕ್ಷವನ್ನು ಬಲಪಡಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನೊಂದಿಗೆ ಜೆಡಿಎಸ್ ಪಕ್ಷದ ಶೇ.80ರಷ್ಟು ಕಾರ್ಯಕರ್ತರು, ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ನಾವು ಹತ್ತಾರು ವರ್ಷಗಳಿಂದ ಯಾರ ವಿರುದ್ದ ಹೋರಾಟ ನಡೆಸುತ್ತಿದ್ದವೋ, ಅವರೊಂದಿಗೆ ಏಕಾಏಕಿ ರಾಜಕೀಯ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಕಂಗಾಲಾಗಿದ್ದರು. ಅವರಿಗೆ ರಾಜಕೀಯ ನೆಲೆ ಕಲ್ಪಿಸುವುದರ ಜತೆಗೆ, ನನ್ನ ರಾಜಕೀಯ ಅಸ್ಥಿತ್ವವನ್ನು ಅವಲೋಕಸಿ ಕಾರ್ಯಕರ್ತರ ಸಲಹೆಯಂತೆ ಕಾಂಗ್ರೆಸ್ ಸೇರಿದ್ದೇನೆ. ಪಕ್ಷವನ್ನು ಸದೃಢಗೊಳಿಸಿ, ಲೋಕಸಭೆ ಹಾಗೂ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿಯೂ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದು, ಪಕ್ಷಕ್ಕೆ ಭದ್ರ ಬುನಾದಿ ಹಾಕಲಾಗುವುದು” ಎಂದು ಗೌರಿಶಂಕರ್ ನುಡಿದರು.

ಕಾಂಗ್ರೆಸ್ ಮುಖಂಡ ಕಲ್ಲಹಳ್ಳಿ ದೇವರಾಜು ಮಾತನಾಡಿ, “ಗೌರಿಶಂಕರ್ ಆಗಮನದಿಂದ ಗ್ರಾಮಾಂತರದಲ್ಲಿ ಪಕ್ಷಕ್ಕೆ ಬಲ ಬಂದಿದೆ. ಬೇರೆ ಪಕ್ಷದ ನಾಯಕರು ನಮ್ಮ ಪಕ್ಷಕ್ಕೆ ಬಂದಾಗ ಸಣ್ಣ-ಪುಟ್ಟ ಗೊಂದಲಗಳು ಸಹಜ. ಅವೆಲ್ಲವನ್ನೂ ಮರೆತು ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಿಷ್ಠವಾಗಿ ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೌರಿಶಂಕರ್ ನೇತೃತ್ವದಲ್ಲಿ ಬಲಪಡಿಸುತ್ತೇವೆ. ಕ್ಷೇತ್ರದ ಕಾರ್ಯಕರ್ತರ ಸಹಕಾರ ಇರಲಿ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಡಿಸೆಂಬರ್ 29 ರಿಂದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ 

ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮೊದಲ ಬಾರಿಗೆ ಆಗಮಿಸಿದ ಮಾಜಿ ಶಾಸಕ ಡಿ ಸಿ ಗೌರಿಶಂಕರ್ ಅವರನ್ನು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಆರ್ ರಾಮಕೃಷ್ಣ, ಕಾಂಗ್ರೆಸ್ ಮುಖಂಡ ಕಲ್ಲಹಳ್ಳಿ ದೇವರಾಜು, ಗ್ರಾಮಾಂತರದ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರುಗಳಾದ ನರಸಿಂಹಮೂರ್ತಿ, ಕೈದಾಳ ರಮೇಶ್ ಅವರುಗಳು ಬರಮಾಡಿಕೊಂಡು, ಪ್ರಾಥಮಿಕ ಸದಸ್ಯತ್ವದ ಅರ್ಜಿ ತುಂಬಿ, ಶುಲ್ಕು ಪಡೆದು, ಪ್ರಾಥಮಿಕ ಸದಸ್ಯತ್ವ ನೀಡಿದರು.

ಸಭೆಯಲ್ಲಿ ಮಾಜಿ ಕಾಂಗ್ರೆಸ್ ಅಧ್ಯಕ್ಷ ಆರ್ ರಾಮಕೃಷ್ಣ, ಪಾಲಿಕೆ ಸದಸ್ಯರುಗಳಾದ ನಯಾಜ್ ಅಹಮದ್, ಕೆ ಕುಮಾರ್, ಇನಾಯತ್, ಪಾಲನೇತ್ರಯ್ಯ, ವಿಜಯಕುಮಾರ್, ಸುಜಾತ, ನ್ಯಾತೇಗೌಡ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...