ತುಮಕೂರು | ಪ್ರಜಾಪ್ರಭುತ್ವ ನಾಶಕ್ಕೆ ಬಿಜೆಪಿ ಪಿತೂರಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರ ಗೌಡ

Date:

ಸಂಸತ್ತಿನಲ್ಲಿ ಭದ್ರತಾಲೋಪ ಕುರಿತು ಸಂಸದರ ಪ್ರಶ್ನೆಗಳಿಗೆ ಉತ್ತರಿಸುವಂತೆ ಒತ್ತಾಯಿಸಿದ ಸಂಸದರನ್ನು ಅಮಾನತ್ತುಗೊಳಿಸಿರುವ ಬಿಜೆಪಿ ಪಕ್ಷದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬಿ.ಎಚ್. ರಸ್ತೆ ಮೂಲಕ ಟೌನ್ ಹಾಲ್‌ವರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕೆಲಕಾಲ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಗೌಡ ಮಾತನಾಡಿ, ಸಂಸತ್ತಿನ ಮೇಲೆ ನಡೆದ ದಾಳಿಯ ಕುರಿತು ವಿರೋಧ ಪಕ್ಷಗಳ ಪ್ರಶ್ನೆಗೆ ಪ್ರಧಾನಿ ಮತ್ತು ಗೃಹಸಚಿವರು ಉತ್ತರಿಸುವಂತೆ ಒತ್ತಾಯಿಸಿದ ವಿರೋಧ ಪಕ್ಷದ ಸುಮಾರು 146 ಸಂಸದರನ್ನು ಒಂದು ಅಧಿವೇಶನ ಪೂರ್ಣ ಅಮಾನತ್ತು ಮಾಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೊಂದು ರೀತಿಯಲ್ಲಿ ವಿರೋಧ ಪಕ್ಷಗಳೇ ಇಲ್ಲದಂತೆ ಮಾಡುವ ಸರ್ವಾಧಿಕಾರಿ ಧೋರಣೆಯಾಗಿದ್ದು, ಇದರ ವಿರುದ್ದ ರಾಷ್ಟçದಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿದೆ. ಸಂಸತ್ತು ಎಂಬುದು ಇಡೀ ರಾಷ್ಟ್ರದ ಆಸ್ತಿ. ಆದರೆ, ಬಿಜೆಪಿ ಪಕ್ಷ ತನ್ನ ಸ್ವರ್ಯಾಜಿತ ಆಸ್ತಿ ಎಂಬಂತೆ ನಡೆದುಕೊಳ್ಳುತ್ತಿದೆ. ಇದರ ಹಿಂದೆ ಬಿಜೆಪಿ ಪಕ್ಷ ತನಗೆ ಬೇಕಾದ ಕಾಯ್ದೆಗಳನ್ನು ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಿ ಪಾಸು ಮಾಡುವ ಹಿಡನ್ ಅಜೆಂಡಾ ಅಡಗಿದೆ. ಇದರ ವಿರುದ್ಧ ದೇಶದ ಎಲ್ಲಾ ವಿರೋಧ ಪಕ್ಷಗಳು ಒಗ್ಗೂಡಿ ಪ್ರತಿಭಟಿಸುವ ಅಗತ್ಯ ಇದೆ ಎಂದರು.

ಕೆಪಿಸಿಸಿ ವೈದ್ಯಕೀಯ ಘಟಕದ ಉಪಾಧ್ಯಕ್ಷೆ ಡಾ. ಫರ್ಜಾನ ಬೇಗಂ ಮಾತನಾಡಿ, ಸಂಸತ್ತು ಎಂಬುದು ಭಾರತೀಯರ ದೇವಾಲಯವಿದ್ದಂತೆ. ಅಂತಹ ಕೇಂದ್ರದ ಮೇಲೆ ದಾಳಿಯಾದಾಗ ಅದಕ್ಕೆ ಕಾರಣಗಳು ಮತ್ತು ಪರಿಹಾರೋಪಾಯಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಗೃಹಸಚಿವ ಅಮಿತ್ ಶಾ ಮತ್ತು ಪ್ರಧಾನಮಂತ್ರಿ ಉತ್ತರ ನೀಡಬೇಕೆಂಬ ಅಪೇಕ್ಷೆ ಇಡೀ ದೇಶದ ಜನರದ್ದಾಗಿದೆ .ಹಾಗಾಗಿ ಜನರ ಪ್ರತಿನಿಧಿಗಳಾದ ಸಂಸದರು ಉತ್ತರಿಸುವಂತೆ ಸದನದಲ್ಲಿ ಪ್ರಶ್ನಿಸಿದ್ದಾರೆ. ಅದನ್ನು ಹೊರತುಪಡಿಸಿ ಸಂಸದರ ಮೇಲೆ ಯಾವುದೇ ಗುರುತರ ಆರೋಪಗಳಿಲ್ಲ. ಆದರೂ ಇಡೀ ಪ್ರಪಂಚದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಯೇ ಅತಿ ಹೆಚ್ಚು ಸಂಸದರನ್ನು ಅಮಾನತ್ತುಗೊಳಸಿರುವುದು ಖಂಡನೀಯ ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಮಾಜಿ ಅಧ್ಯಕ್ಷ ಆರ್. ರಾಮಕೃಷ್ಣ, ಮಹೇಶ್, ಫಯಾಜ್, ಗಿರೀಶ್,  ಲೋಕೇಶ್, ಮುಖಂಡರಾದ ನಯಾಜ್ ಅಹಮದ್, ನಿಂಗರಾಜು.ಬಿ.ಜಿ, ವಾಲೆಚಂದ್ರಯ್ಯ, ಪುಟ್ಟರಾಜು, ಸುಜಾತ, ನಾಗಮಣಿ, ಭಾಗ್ಯ, ಸವಿತಾ, ಗೀತಾ, ಜ್ವಾಲಾಮಾಲಾ ರಾಜಣ್ಣ, ಕೆಂಪಣ್ಣ, ಶೆಟ್ಟಾಳಯ್ಯ, ಮೆಹಬೂಬ್ ಪಾಷ, ಶಿವಾಜಿ, ನರಸಿಂಹಯ್ಯ, ಕುಂಚ್ಚಂಗಿ ರಮೇಶ್, ಕೆಂಪರಾಜು, ಎಚ್.ಸಿ. ಹನುಮಂತಯ್ಯ, ರೇವಣ್ಣಸಿದ್ದಯ್ಯ, ನ್ಯಾತೇಗೌಡ, ರಾಘವೇಂದ್ರಸ್ವಾಮಿ, ಸಿ. ಭಾನುಪ್ರಕಾಶ್, ನಯಾಜ್ ಅಹಮದ್, ಅಸ್ಲಾಂ ಪಾಷ, ಇನಾಯತ್, ನಟರಾಜು, ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...