ತುಮಕೂರು | ಗೃಹ ಸಚಿವರ ತವರು ಜಿಲ್ಲೆಯ ಆಸ್ಪತ್ರೆಗಳಲ್ಲಿ ಲಂಚಾವತಾರ; ದಂಗಾದ ಮುಖ್ಯ ಜಾಗೃತ ಅಧಿಕಾರಿ

Date:

ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರ ತವರು ಜಿಲ್ಲೆಯಾದ ತುಮಕೂರು ಜಿಲ್ಲೆಯ ತಾಲೂಕು ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಲಂಚಾವತಾರ ನೋಡಿ ಮುಖ್ಯ ಜಾಗೃತ ಅಧಿಕಾರಿ ಕುಪ್ಪೆ ಶ್ರೀನಿವಾಸ್ ದಂಗಾಗಿದ್ದಾರೆ.

ಗೃಹ ಸಚಿವರ ತವರು ಜಿಲ್ಲೆ ಹಾಗೂ ಸಹಕಾರ ಸಚಿವ ರಾಜಣ್ಣನವರ ಕ್ಷೇತ್ರಗಳಲ್ಲಿ ಇರುವ ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸಲು ಮತ್ತು ಇತರೆ ವೈದ್ಯಕೀಯ ಸೇವೆಗೆ ದೀನ ದುರ್ಬಲರು ಬಡವರು ಲಂಚ ನೀಡದೆ ಇದ್ದರೆ ಸೇವೆಯೇ ಇಲ್ಲ ಎಂಬಂತಾಗಿದೆ.

ಬ್ಯಾಲ್ಯ ಪ್ರಾಥಮಿಕ ಆಸ್ಪತ್ರೆಯ ವ್ಯಾಪ್ತಿಯ ವಡ್ಡರಹಟ್ಟಿ ಕಾವೇರಿ ಎಂಬ ಮಹಿಳೆಯಿಂದ ನರ್ಸ್ ಅನುಸೂಯಮ್ಮ ₹5,000ಗಳನ್ನು ಹೆರಿಗೆ ಮಾಡಿಸಲು ಪಡೆದಿದ್ದರು. ಹಾಗೆಯೇ ನಿಹಾರಿಕಾ ಎಂಬ ಮಹಿಳೆಯಿಂದ ಪಡೆದಿದ್ದ ₹1,300 ಮತ್ತು ದೊಡ್ಡೇರಿ ಹೋಬಳಿಯ ವೃದ್ಧೆ ಕಡೆಯ ರಂಗನಾಥ್ ಕಡೆಯಿಂದ ಪಡೆದ ₹3,800 ಲಂಚದ ಹಣವನ್ನು ತುಮಕೂರು ಘಟಕದ ನೈಜ ಹೋರಾಟಗಾರರ ವೇದಿಕೆಯ ಸದಸ್ಯರು ಆಡಳಿತ ವೈದ್ಯಾಧಿಕಾರಿ ಗಂಗಾಧರ್ ಅವರಿಂದ ವಾಪಸ್ ಕೊಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ಆರೋಗ್ಯ ಸೌಧದಿಂದ ಮಧುಗಿರಿ ತಾಲೂಕು ಮತ್ತು ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಪುರವರ ಹೋಬಳಿ ಬ್ಯಾಲ್ಯ ಆಸ್ಪತ್ರೆಗಳಿಗೆ ಮುಖ್ಯ ಜಾಗೃತಾ ಅಧಿಕಾರಿ ಕುಪ್ಪೆ ಶ್ರೀನಿವಾಸ್ ಅವರು ಭೇಟಿ ನೀಡುವ ಮುನ್ಸೂಚನೆ ತಿಳಿದು, ತುಮಕೂರು ಘಟಕದ ನೈಜ ಹೋರಾಟಗಾರರ ವೇದಿಕೆಯ ಸದಸ್ಯ ಹಂದ್ರಾಳ್ ನಾಗಭೂಷಣ್, ಮಧುಗಿರಿ ಮಹೇಶ್, ಸತೀಶ್ ಟಿ ಪಿ ಅರಳಾಪುರ ರಮೇಶ್ ಅವರು ಮಧುಗಿರಿ ಮತ್ತು ಕೊರಟಗೆರೆ ವಿಧಾನಸಭಾ ವ್ಯಾಪ್ತಿಯ ವ್ಯಾಪ್ತಿಯ ಬ್ಯಾಲ್ಯ ಆಸ್ಪತ್ರೆಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮುಖ್ಯ ಜಾಗೃತ ದಳದ ಅಧಿಕಾರಿಗೆ ಲಂಚದ ಹಣದ ಸಹಿತ ವಾಸ್ತವ ಸ್ಥಿತಿಗಳನ್ನು ಕಣ್ಣೆದುರೇ ಬಿಚ್ಚಿಟ್ಟರು.

“ತುಮಕೂರು ಆಸ್ಪತ್ರೆಗಳ ಲಂಚದ ಬಗ್ಗೆ ಹಂದ್ರಾಳ್ ನಾಗಭೂಷಣ್ ಅವರು ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಇದು ತುಮಕೂರಿನ ಜಿಲ್ಲಾಡಳಿತದ ವೈಫಲ್ಯದಿಂದ ತಾಲೂಕಿನ ಆಸ್ಪತ್ರೆಗಳಲ್ಲಿ ಬಡವರು ಮತ್ತು ದೀನ ದುರ್ಬಲರಿಂದ ಲಂಚ ವಸೂಲಿಯಾಗುತ್ತಿದ್ದು, ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ಲಂಚಾವತಾರ ನಡೆಯುತ್ತಿರುವುದು ದುರದೃಷ್ಟಕರ” ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಎಚ್ ಎಂ ವೆಂಕಟೇಶ್ ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಳಮೀಸಲಾತಿಗೆ ಆಗ್ರಹಿಸಿ ಡಿ.17ರಂದು ಮಾದಿಗ ಮುನ್ನಡೆ, ಮಾದಿಗರ ಆತ್ಮಗೌರವ ಸಮಾವೇಶ

“ನೈಜ ಹೋರಾಟಗಾರರ ವೇದಿಕೆಯು ಭ್ರಷ್ಟಾಚಾರದ ವಿರುದ್ಧ ಮತ್ತು ಜನಪರ ಕೆಲಸಗಳಲ್ಲಿ ನಿರಂತರವಾಗಿ ಹೋರಾಟ ಮಾಡುತ್ತಿದ್ದು, ಅವರ ಕಾರ್ಯಗಳು ನಿಜಕ್ಕೂ ಶ್ಲಾಘನೀಯ” ಎಂದು ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...