ತುಮಕೂರು | ಪೋಕ್ಸೊ ಪ್ರಕರಣ ಮರೆಮಾಚಿದ ಪೊಲೀಸರು; ಅಧಿಕಾರಿಗಳ ವಿರುದ್ಧ ಸೇವಾ ಕೇಂದ್ರ ಆಕ್ರೋಶ

Date:

ನಾಲ್ಕು ವರ್ಷದ ಬಾಲಕಿಯ ವಿರುದ್ಧ ಲೈಂಗಿಕ ಕಿರುಕುಳ ನಡೆದಿದೆ ಎಂದು ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಸಂತ್ರಸ್ತ ಬಾಲಕಿಯ ಪೋಷಕರ ದೂರು ಸ್ವೀಕರಿಸಲು ಸಿ ಎಸ್ ಪುರ ಪೊಲೀಸರು ನಿರಾಕರಿಸಿದ್ದಾರೆ. ನಾಲ್ಕೈದು ತಾಸು ವಿಳಂಬ ಮಾಡಿ, ಗ್ರಾಮಸ್ಥರೊಂದಿಗೆ ರಾಜಿ ಸಂಧಾನಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರ ವಿರುದ್ಧ ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಎಸ್ ಸಿದ್ದಲಿಂಗೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಉಚ್ಛನ್ಯಾಯಾಲಯದ ರಿಜಿಸ್ಟ್ರಾರ್ ಜನರಲ್ ಹಾಗೂ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಪತ್ರ ಬರೆದಿದ್ದು, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

ಜನವರಿ 14ರಂದು ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಹೋಬಳಿ ಕೆ ಹರುವೇಸಂದ್ರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ನಾಲ್ಕು ವರ್ಷದ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಘಟನೆ ಬಗ್ಗೆ ದೂರು ನೀಡಲು ಸಿ.ಎಸ್.ಪುರ ಪೊಲೀಸ್ ಠಾಣೆಗೆ ಸಂತ್ರಸ್ತ ಬಾಲಕಿಯ ಪೋಷಕರು ತೆರಳಿದ್ದರು. ಆದರೆ, ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಬೇಕಾದ ಪೊಲೀಸರು, ನಿರ್ಭೀತಿ ವಾತಾವರಣ ಸೃಷ್ಟಿಸಿ ಅವರಿಂದ ಘಟನೆಯ ಪೂರ್ತಿ ವಿವರಣೆ ಪಡೆದಿಲ್ಲ ಎಂದು ಸಿದ್ದಲಿಂಗೇಗೌಡ ಆರೋಪಿಸಿದ್ದಾರೆ.

ಪೋಕ್ಸೊ ಕಾಯಿದೆಯು ಅಪ್ರಾಪ್ತ ಹೆಣ್ಣು ಮಕ್ಕಳ ರಕ್ಷಣೆಗಾಗಿ ಜಾರಿಯಲ್ಲಿದೆ. ಆದರೆ, ಅದರ ಪಾಲನೆ ಮಾಡದ ಪಿಎಸ್‌ಐ ಶಿವಕುಮಾರ್ ಅವರು ಪಟ್ಟಭದ್ರ ಹಿತಾಸಕ್ತಿಗಳ ಮಾತಿಗೆ ಮಣಿದು ಗ್ರಾಮಸ್ಥರೊಂದಿಗೆ ರಾಜಿಸಂಧಾನಕ್ಕೆ ಸಮಯ ನೀಡಿದ್ದಾರೆ. ಆ ಮೂಲಕ, ಸಂಪೂರ್ಣವಾಗಿ ಪೋಕ್ಸೊ ಕಾಯಿದೆ ಉಲ್ಲಂಘನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿರ್ಭಯ ವಾತಾವರಣ ಸೃಷ್ಟಿ ಜೊತೆಗೆ ಮಗುವಿನ ಮತ್ತು ಆಕೆಯ ತಂದೆ ತಾಯಿ ಅಥವಾ ಪೋಷಕರ ಖಾಸಗಿ ಗೌಪ್ಯತೆ ಕಾಪಾಡುವ ಕೆಲಸವನ್ನು ಪೊಲೀಸರು ಮಾಡಬೇಕಿದೆ. ಅಜ್ಞಾತ ಸ್ಥಳದಲ್ಲಿ ಸಂತ್ರಸ್ತರನ್ನಿರಿಸಿ ಕೂಲಂಕುಷ ತನಿಖೆ ಆರಂಭಿಸಬೇಕಿತ್ತು. ಕೂಡಲೇ ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕಿತ್ತು. ಈ ರೀತಿ ಸೂಕ್ಷ್ಮತೆ ಅರಿತು ಕೆಲಸ ಮಾಡುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೂ ಕೈ ಚೆಲ್ಲಿದೆ. ಜತೆಗೆ ದೂರು ಕೇಳಿದ ತಕ್ಷಣ ಆರೋಪಿಯನ್ನು ಕರೆತಂದು ಎರಡು ದಿನ ವಿಚಾರಣೆಗೆ ಒಳಪಡಿಸಿದ್ದಾರೆ. ಇದೆಲ್ಲಾ ನಡವಳಿಕೆ ಅನುಮಾನಕ್ಕೆ ಕಾರಣವಾಗಿದೆ. ಕೂಡಲೇ ಲೈಂಗಿಕ ಕಿರುಕುಳದ ದೂರು ದಾಖಲು, ವೈದ್ಯಕೀಯ ಪರೀಕ್ಷೆ ಹಾಗೂ ಸಂತ್ರಸ್ತ ಕುಟುಂಬಕ್ಕೆ ರಕ್ಷಣೆ, ಪರಿಹಾರ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಸಂಸ ಪ್ರತಿಭಟನೆ

“ಇಡೀ ಘಟನೆ ಬಗ್ಗೆ ದೂರು ಆಧರಿಸಿ ಸಂಬಂಧಪಟ್ಟ ಪೊಲೀಸ್ ಪಿಎಸ್‌ಐ ಹಾಗೂ ಸಿಡಿಪಿಒ ಜೊತೆ ಮಾತನಾಡಿದಾಗ ಘಟನೆಯ ಸ್ಪಷ್ಟತೆ ಕಾಣುತ್ತಿದೆ. ಆದರೆ ಕೌನ್ಸೆಲಿಂಗ್‌ಗಾಗಿ ಸಿಡಿಪಿಒ ಬಳಿ ಬಂದು ವಾಪಸ್ ತೆರಳಿದ್ದಾರೆ. ಈ ಬಗ್ಗೆ ದಾಖಲು ಮಾಡದಿರುವುದೇ ದೊಡ್ಡ ವಿಪರ್ಯಾಸ. ಗಂಭೀರ ಪ್ರಕರಣದಲ್ಲಿ ಆರೋಪಿ ತಪ್ಪಿಸಿಕೊಂಡರೆ ಮತ್ತಷ್ಟು ಇಂತಹ ದುರ್ಘಟನೆಗೆ ಕಾರಣವಾಗುತ್ತದೆ. ಈಗಾಗಲೇ ಜಿಲ್ಲೆಯಲ್ಲಿ ಸುಮಾರು 1,375ರಷ್ಟು ಅಪ್ರಾಪ್ತ ಗರ್ಭಿಣಿಯರು ಇದ್ದರೆ, ರಾಜ್ಯದಲ್ಲಿ 28,657ರಷ್ಟು ಅಪ್ರಾಪ್ತ ಗರ್ಭಿಣಿಯರಿರುವುದು ಇಂತಹ ಸಮಾಜಘಾತುಕರು ಕೃತ್ಯ ನಡೆಸಿರುವುದು ಅರಿವಿಗೆ ಬರುತ್ತದೆ. ಈ ನಿಟ್ಟಿನಲ್ಲಿ ಪೊಲೀಸ್ ಠಾಣೆಗಳು ಸರ್ಕಾರಿ ಕಚೇರಿ ಮಧ್ಯವರ್ತಿಗಳ ತಾಣವಾಗುತ್ತಿದೆ. ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು” ಎಂದು ಪತ್ರದ ಮೂಲಕ ನ್ಯಾಯ ಕೋರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...