ತುಮಕೂರು | ನಿಕೇತ್‌ರಾಜ್‌ಗೆ ಕಾಂಗ್ರೆಸ್‌ ಟಿಕೆಟ್‌ಗಾಗಿ ಒತ್ತಾಯ; ಕುರುಬ ಸಮಾವೇಶಕ್ಕೆ ಸಿದ್ದತೆ

Date:

ಕಾಂಗ್ರೆಸ್ ವಕ್ತಾರ ನಿಕೇತ್‌ರಾಜ್ ಮೌರ್ಯ ಅವರಿಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಕುರುಬ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ. ತಮಕೂರಿನಲ್ಲಿ ಕುರುಬ ಸಮಾವೇಶ ನಡಸಲು ಮುಂದಾಗಿದ್ದಾರೆ.

ತುಮಕೂರಿನಲ್ಲಿ ಶನಿವಾರ ಕುರುಬ ಸಮುದಾಯದ ಮುಖಂಡರು ಸಭೆ ನಡೆಸಿದ್ದಾರೆ. “ತುಮಕೂರು ಕ್ಷೇತ್ರದಿಂದ ಸಮುದಾಯ ಬಾಸ್ಕರಪ್ಪ ಸ್ಪರ್ಧಿಸಿ ಗೆದ್ದಿದ್ದರು. ಈಗ ಸಮುದಾಯದವರೇ ಆಗಿರುವ ನಿಕೇತ್‌ರಾಜ್ ಮೌರ್ಯ ಅವರು ಎಲ್ಲ ವರ್ಗ, ಜನಾಂಗದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಕಾಂಗ್ರೆಸ್‌ ಟಿಕೆಟ್ ನೀಡಬೇಕು” ಎಂದು ಮುಖಂಡರು ಒತ್ತಾಯಿಸಿದ್ದಾರೆ.

“ಸಿದ್ದರಾಮಯ್ಯನವರ ದೂರದೃಷ್ಟಿಯ ಜನಪರ ಚಿಂತನೆಗಳು ನಿಕೇತ್‌ರಾಜ್ ಅವರಲ್ಲಿವೆ. ವಿದ್ಯಾವಂತ ಒಬ್ಬ ಲೋಕಸಭೆ ಪ್ರವೇಶಿಸಿದರೆ, ಬಡವರ ಪರವಾದ ದನಿಯಾಗಲು ಸಾಧ್ಯ. ಬುದ್ಧ, ಬಸವ, ಅಂಬೇಡ್ಕರ್ ಅವರ ಸಮಾನತೆ ಆಶಯ ಈಡೇರಿಸಲು ನಿಕೇತ್‌ರಾಜ್ ಶ್ರಮಿಸುತ್ತಾರೆ ಎಂಬ ನಂಬಿಕೆ ಇದೆ. ಕುರುಬ ಸಮಾವೇಶ ಮಾಡಿ ಟಿಕೆಟ್ ಕೇಳಲಿದ್ದೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಕೇತ್‌ರಾಜ್‌ ಬಗ್ಗೆ ಜಿಲ್ಲೆಯ ಮತದಾರರಲ್ಲೂ ಒಲವಿದೆ. ಅವರು ಕುರುಬ ಸಮುದಾಯಕ್ಕಷ್ಟೇ ಸೀಮಿತವಾಗಿರದೆ ಸರ್ವರ ಹಿತವನ್ನು ಬಯಸುವವರಾಗಿದ್ದಾರೆ. ಅವರು ರಾಜಕಾರಣಕ್ಕೆ ಬಂದರೆ ಅಮೂಲಾಗ್ರ ಬದಲಾವಣೆಯಾಗಲಿದೆ. ಹಿಂದುಳಿದ ಸಮುದಾಯದವನೊಬ್ಬ ಪಾರ್ಲಿಮೆಂಟ್‌ಗೆ ಹೋಗುವುದಾದರೆ ಎಲ್ಲರೂ ಬೆಂಬಲಿಸಲು ಸಿದ್ಧರಿದ್ದೇವೆ” ಎಂದಿದ್ದಾರೆ.

ಸಭೆಯಲ್ಲಿ ರತೇವಣಸಿದ್ದೇಶ್ವರ ಮಠದ ಬಿಂದುಶೇಖರ ಒಡೆಯರ್, ಕುರುಬರ ಸಂಘದ ಅಧ್ಯಕ್ಷ ಟಿ.ಆರ್.ಸುರೇಶ್, ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮೈಲಪ್ಪ, ಕರ್ನಾಟಕ ಯುವ ಪ್ರದೇಶ ಕುರುಬರ ಸಂಘದ ಮಹಾಲಿಂಗಯ್ಯ, ಕಾರ್ಪೊರೇಟರ್ ಆದ ಮಹೇಶ್, ಶಫರ್ಡ್ಸ್ ಇಂಡಿಯಾ ಸಂಘಟನೆಯ ರವೀಶ್, ಮುಖಂಡರಾದ ನರಸಿಂಹರಾಜು, ಚಿ.ನಾ.ಹಳ್ಳಿ ಸಿದ್ದರಾಮಯ್ಯ, ಸಂಘದ ಕಾರ್ಯಾಧ್ಯಕ್ಷ ಆರ್‌ಎಂಸಿ ರಾಜು, ವಕೀಲ ಮಲ್ಲಿಕಾರ್ಜುನ್ ಮತ್ತು ಸಮಾಜದ ಎಲ್ಲಾ ಹಿರಿಯ ನೂರಾರು ಮುಖಂಡರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...