ತುಮಕೂರು | ರೈತ ಭವನ ನಿರ್ಮಾಣಕ್ಕೆ ಆಗ್ರಹ

Date:

ಪಾವಗಡ ನಗರದ ಹಳೇ ಸಂತೆ ಮೈದಾನದಲ್ಲಿ ರೈತ ಭವನ ಕಟ್ಟಿಸಿಕೊಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪೂಜಾರಪ್ಪ ಆಗ್ರಹಿಸಿದ್ದಾರೆ.

ತುಮಕೂರು ಜಿಲ್ಲೆ ಪಾವಗಡ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. “ನಗರದ ಹಳೇ ಸಂತೆ ಮೈದಾನದಲ್ಲಿ ಸುಮಾರು 2 ಎಕರೆಗಳಿಗಿಂತಲೂ ಹೆಚ್ಚು ಜಮೀನಿದೆ. ಈ ಜಮೀನಿನಲ್ಲಿ ಹಲವಾರು ಸಾರ್ವಜನಿಕರು ಶೆಡ್‌ಗಳನ್ನು ಹಾಕಿಕೊಂಡು ಸದರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ಪುರಸಭೆಗೆ ಯಾವುದೇ ಆದಾಯ ಇರುವುದಿಲ್ಲ. ಅಲ್ಲದೆ ಈ ಸ್ಥಳವನ್ನು ಪ್ರಭಾವಶಾಲಿಗಳು ಒತ್ತುವರಿ ಮಾಡಿದ್ದಾರೆ. ಇದನ್ನು ಕೂಡಲೇ ತೆರವುಗೊಳಿಸಬೇಕು” ಎಂದು ಒತ್ತಾಯಿಸಿದರು.

“ರೈತ ಸಂಘ ಈ ಬಗ್ಗೆ 20 ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬಂದರೂ ಕೂಡ ನಮಗೆ ರೈತ ಭವನವಿರುವುದಿಲ್ಲ. ಈಗ ಮೇಲ್ಕಂಡ ಸಂತೆ ಜಮೀನಿನಲ್ಲಿ ನಮಗೆ ಪೂರ್ವ-ಪಶ್ಚಿಮವಾಗಿ 60 ಅಡಿಗಳು, ಉತ್ತರ-ದಕ್ಷಿಣವಾಗಿ 60 ಅಡಿಗಳು ಖಾತೆ ವಗೈರೆ ಲೈಸೆನ್ಸ್ ಮಂಜೂರು ಮಾಡಿಕೊಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪುರಸಭೆ ಮುಖ್ಯಾಧಿಕಾರಿಗಳು, ಪುರಸಭೆ ಅಧ್ಯಕ್ಷರು, ಎಲ್ಲ ಸದಸ್ಯರುಗಳು ಒಮ್ಮತದಿಂದ ರೈತಭವನ ಕಟ್ಟಿಕೊಳ್ಳಲು ಅನುಮತಿ ನೀಡಿ, ಸಹಕರಿಸಿ ಒಂದು ವಾರದೊಳಗೆ ರೈತ ಭವನ ನಿರ್ಮಾಣಕ್ಕೆ  ಅನುಕೂಲ ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಬಳಕೆಯಾಗದೇ ಪಾಳುಬಿದ್ದಿದೆ ʼಕಮಲನಗರ ಬಸ್ ನಿಲ್ದಾಣʼ

ರೈತ ಭವನ ನಿರ್ಮಾಣಕ್ಕೆ ವಿಳಂಬ ಮಾಡಿದರೆ ಮುಂದಿನ ದಿನಗಳಲ್ಲಿ ಪುರಸಭೆ ಕಾರ್ಯಲಯದ ಎದುರು ಕರ್ನಾಟಕ ರೈತ ಸಂಘದ ಅಧ್ಯಕ್ಷರು ಮತ್ತು ರೈತ ಸಂಘದ ಪದಾಧಿಕಾರಿಗಳು  ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ರೈತ ಸಂಘದ ಪದಾದಿಕಾರಿಗಳು, ಸದಸ್ಯರು ಹಾಗೂ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...