ತುಮಕೂರು | ಬದಲಾವಣೆಗೆ ಸಾಮಾಜಿಕ ಮಾಧ್ಯಮಗಳ ಪರಿಣಾಮಕಾರಿ ಬಳಕೆ ಅಗತ್ಯ: ಎ ನರಸಿಂಹಮೂರ್ತಿ

Date:

ಯುವಜನತೆ ಸಮಾಜದ ಪರಿವರ್ತನೆಗೆ ಮತ್ತು ಸಾಮಾಜಿಕ ಬದಲಾವಣೆಗೆ ಸಾಮಾಜಿಕ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಚಾಲಕ ಎ ನರಸಿಂಹಮೂರ್ತಿ ತಿಳಿಸಿದರು.

ತುಮಕೂರು ನಗರದ ಡಾ ಬಿ.ಆರ್‌ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಸಂಯುಕ್ತಾಶ್ರಯದಲ್ಲಿ ಸಮಕಾಲೀನ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ ಕುರಿತು ಅರಿವಿನ ಕಾರ್ಯಾಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಸಮಕಾಲೀನ ಕಾಲಘಟ್ಟದಲ್ಲಿ ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸುವ ಮೂಲಕ ಸಮಾಜದ ಬದಲಾವಣೆಗೆ ಯುವಜನರು ತೊಡಗಿಸಿಕೊಳ್ಳಲು ಅವಕಾಶಗಳಿವೆ. ಅದರ ಬಳಕೆಯ ವಿಧಾನ ಮತ್ತು ಅದರ ಅಪಾಯಗಳ ಅರಿವು ಅಗತ್ಯವಾಗಿದೆ. ಜನಸಾಮಾನ್ಯರ ಸಮಸ್ಯೆಗಳಿಗೆ ಮತ್ತು ಸಂಘಟಿತ ಚಳುವಳಿಯ ಆಯಾಮಕ್ಕೆ ಪೂರಕವಾಗಿ ಯುವಜನರು ಸಾಮಾಜಿಕ ಮಾಧ್ಯಮಗಳ ಬಳಕೆ ಮಾಡಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿವಿಧ ಜಾತಿ, ಧರ್ಮಗಳ ಸಂಸ್ಕೃತಿ, ಆಚಾರ ವಿಚಾರಗಳನ್ನು ಸಂಪರ್ಕ ಮತ್ತು ಸಂವಹನಕ್ಕೆ ವೇದಿಕೆಯಾಗಿ ಜನರ ಮಾಧ್ಯಮವಾಗಿ ಸಾಮಾಜಿಕ ಜಾಲತಾಣ ಅತಿ ಹೆಚ್ಚು ಪ್ರಚಲಿತದಲ್ಲಿದೆ. ಉತ್ತಮ ಸಮಾಜ ನಿರ್ಮಾಣಕ್ಕಾಗಿ ಜನಸಂಪರ್ಕ ಸಾಧನವಾಗಿ ಸೋಷಿಯಲ್ ಮೀಡಿಯಾ ಬಳಕೆಯಾಗಲಿ. ಉತ್ತಮ ಸಂದೇಶ ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಹರಡುವ ಅರಿವನ್ನು ಜನರಿಗೆ ತಲುಪಿಸುವಂತಹ ಗುಣಗಳು ಯುವಜನರಲ್ಲಿ ಬೆಳೆಯಲಿ” ಎಂದರು.

ಈ ದಿನ.ಕಾಮ್ ಸೆಂಟ್ರಲ್ ಕೋಆರ್ಡಿನೇಟರ್ ಅನಿಲ್‌ಕುಮಾರ್ ಚಿಕ್ಕದಾಳವಟ್ಟ ಮಾತನಾಡಿ, “ಯುವಜನರು ಸಮುದಾಯಗಳ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಹೆಚ್ಚು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಬೇಕು. ಸಮಾಜದ ದನಿಯಾಗಿ ಕೆಲಸ ಮಾಡಲು ಯುವಜನರಿಗೆ ಸಾಮಾಜಿಕ ಮಾಧ್ಯಮಗಳು ವೇದಿಕೆಯಾಗಿವೆ. ಹಾಗಾಗಿ ಯುವಜನತೆ ಸಾಮಾಜಿಕ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು” ಎಂದು ಹೇಳಿದರು.

“ಸಮಕಾಲೀನ ರಾಜಕೀಯ, ಆರ್ಥಿಕ, ಸಾಮಾಜಿಕ ಘಟನೆಗಳಿಗೆ ಸಾಮಾನ್ಯ ಜನರು ಪ್ರತಿಕ್ರಿಯಿಸಲು ಸಾಮಾಜಿಕ ಜಾಲತಾಣ ಬಳಕೆಯಾಗುತ್ತಿರುವುದು ಒಂದೆಡೆಯಾದರೆ, ಬಂಡವಾಳ ಶಾಹಿಗಳು ಇದೇ ಸಾಮಾಜಿಕ ಜಾಲತಾಣಗಳನ್ನು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳಲು ಮುಂದಾಗಿದ್ದು, ಜನರ ಸಂಘಟಿತ ಹೋರಾಟದಿಂದ ವಿಫಲವಾಗಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಹಾಗಾಗಿ ಯುವ ಜನರು ಇಂತಹವುಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು” ಎಂದರು.

“ಸಾಮಾಜಿಕ ಜಾಲತಾಣಗಳನ್ನು ಸೌಹಾರ್ದತೆ ಬೆಳೆಸಲು ಬಳಸುವ ಮೂಲಕ ಸರ್ವಜನಾಂಗದ ಶಾಂತಿಯ ತೋಟವಾಗಿರುವ ನಾಡಿನಲ್ಲಿ ದ್ವೇಷ ಹರಡದಂತೆ ನೋಡಿಕೊಳ್ಳಬೇಕು. ಜನರ ನೋವಿಗೆ ಮಿಡಿಯುವ ಅಂತಃಕರಣ ಪ್ರತಿಯೊಬ್ಬರಲ್ಲೂ ಬರಬೇಕು” ಎಂದರು.

“ಸೈಬರ್‌ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಪ್ರತಿಯೊಬ್ಬರು ಈ ವಂಚನೆಗಳ ಬಗ್ಗೆ ಎಚ್ಚರ ವಹಿಸಬೇಕು. ವಂಚನೆ ಬಗ್ಗೆ ನಮ್ಮ ನೆರೆಹೊರೆಯವರಿಗೆ ಜಾಗೃತಿ ಮೂಡಿಸಬೇಕು. ಅನುಮಾನದ ಮಾಹಿತಿಗಳನ್ನು ವಿಶ್ವಾಸಾರ್ಹ ಮೂಲಗಳಿಂದ ಖಚಿತ ಮಾಡಿಕೊಳ್ಳುವುದರಿಂದ ಇಂತಹ ವಂಚನೆಗಳನ್ನು ನಿಯಂತ್ರಣಕ್ಕೆ ತರಬಹುದು” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸ್ಮಶಾನ ಜಾಗ ಕೇಳಿದ ದಲಿತ ನಾಯಕನ ಹೊರದಬ್ಬಲು ಸೂಚಿಸಿದ ತಹಶೀಲ್ದಾರ್; ಅನಿರ್ದಿಷ್ಟಾವಧಿ ಧರಣಿ ಕುಳಿತ ಮುಖಂಡರು

ಕಾರ್ಯಕ್ರಮದಲ್ಲಿ ಸ್ಲಂ ಸಮಿತಿಯ ಉಪಾಧ್ಯಕ್ಷ ಶಂಕ್ರಯ್ಯ, ಕಾರ್ಯದರ್ಶಿ ಅರುಣ್ ಟಿ ಜಿ ಪದಾಧಿಕಾರಿಗಳಾದ ತಿರುಮಲಯ್ಯ, ಜಾಬೀರ್‌ಖಾನ್, ಕೃಷ್ಣಮೂರ್ತಿ, ಶಿವಕುಮಾರ್, ಗುಲ್ನಾಜ್, ಗಣೇಶ್, ಅಶ್ವತ್, ತಿಪ್ಪೇಸ್ವಾಮಿ, ಯುವಪದಾಧಿಕಾರಿಗಳಾದ ಜಯಂತ್, ಮೋಹನ್ ಟಿ ಆರ್,  ಪ್ರಥಮ್, ಸುನಿಲ್, ರಾಜು, ರವಿ, ಶಾಬುದ್ದೀನ್, ಅರವಿಂದ್, ನಿವೇಶನ ಹೋರಾಟ ಸಮಿತಿ ಪದಾಧಿಕಾರಿಗಳಾದ ದೇವರಾಜ್, ರಂಗನಾಥ್, ಸುಧಾ, ರತ್ನಮ್ಮ, ಜಿಜಿವಿ ಎಂಟರ್‌ ಪ್ರೈಸಸ್ ನಾ ದಯಾನಂದ್, ಶಿವಪ್ಪ ಸೇರಿದಂತೆ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...