ತುಮಕೂರು | ಹೊಸ ವರ್ಷಾಚರಣೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

Date:

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕ್ಯಾತ್ಸಂದ್ರ ಠಾಣೆ ಸರಹದ್ದು, ನಾಮದ ಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗ ಪ್ರದೇಶಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ಹಾಗೂ ವಾಹನಗಳ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 31ರ ಬೆಳಿಗ್ಗೆ 8 ಗಂಟೆಯಿಂದ 2024ರ ಜನವರಿ 2ರ ಬೆಳಿಗ್ಗೆ 8ಗಂಟೆಯವರೆಗೆ ಈ ನಿರ್ಬಂಧ ಇರಲಿದೆ. ಕ್ಯಾತ್ಸಂದ್ರ ಠಾಣೆ ಸರಹದ್ದು, ನಾಮದ ಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗ ಬೆಟ್ಟಕ್ಕೆ 2024ರ ಹೊಸ ವರ್ಷಾಚರಣೆ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಪ್ರವಾಸಿಗರು ಭೇಟಿ ನೀಡಲಿದ್ದು, ಸಂಭ್ರಮಾಚರಣೆ ಸಮಯದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವ ಸಂಭವಗಳು ಇರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ.

ಸಾರ್ವಜನಿಕರು ಮದ್ಯಪಾನ ಮಾಡಿ ಹಾಗೂ ಜಾಲಿರೈಡ್ ನೆಪದಲ್ಲಿ ವಾಹನಗಳನ್ನು ಚಾಲನೆ ಮಾಡುವುದರಿಂದ ಮಾರಣಾಂತಿಕ ರಸ್ತೆ ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಈ ಪ್ರದೇಶಗಳು ಸುರಕ್ಷಿತ ಅರಣ್ಯ ಆವೃತ ಪ್ರದೇಶಗಳಾಗಿದ್ದು, ಪ್ರವಾಸಿಗರ ಮೇಲೆ ಕಾಡು ಪ್ರಾಣಿಗಳು ದಾಳಿ ಮಾಡುವ ಸಾಧ್ಯತೆ ಇರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸ ವರ್ಷದ ಆಚರಣೆಯ ಹಿನ್ನೆಲೆಯಲ್ಲಿ ನಾಮದ ಚಿಲುಮೆ, ಬಸದಿ ಬೆಟ್ಟ, ದೇವರಾಯನದುರ್ಗ ಪ್ರದೇಶಗಳಿಗೆ ಸಾರ್ವಜನಿಕರು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿ ಗುಂಪು ಘರ್ಷಣೆಗಳಾಗಿ ಕಾನೂನು ಹಾಗೂ ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಂಭವವಿರುವುದರಿಂದ ಈ ನಿರ್ಬಂಧವನ್ನು ಹೇರಲಾಗಿದೆ. ಆದರೆ, ನಿರ್ಬಂಧಿತ ಅವಧಿಯಲ್ಲಿ ಮೇಲ್ಕಾಣಿಸಿದ ಮಾರ್ಗವಾಗಿ ದೈನಂದಿನ ಚಟುವಟಿಕೆಗಳಿಗೆ ತೆರಳುವ ಸ್ಥಳೀಯರು ಸದರಿ ಮಾರ್ಗ ಮಧ್ಯೆ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸದಂತೆ ತೆರಳಲು ಅನುಮತಿ ನೀಡಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...