ತುಮಕೂರು | ಪರೀಕ್ಷಾ ಕೇಂದ್ರಿತ ಶಿಕ್ಷಣ ವ್ಯವಸ್ಥೆ ತೊಲಗಲಿ: ಪರಿಸರವಾದಿ ಸಿ ಯತಿರಾಜು

Date:

ಪ್ರಸ್ತುತ ಶಿಕ್ಷಣ ಪರೀಕ್ಷಾ ಕೇಂದ್ರಿತ ಶಿಕ್ಷಣವಾಗಿದ್ದು, ಈ ವ್ಯವಸ್ಥೆ ತೊಲಗಬೇಕು ಎಂದು ಪರಿಸರವಾದಿ ಸಿ ಯತಿರಾಜು ತಿಳಿಸಿದರು.

ತುಮಕೂರು ನಗರದ ಕೆಎಸ್‌ಇಎಫ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ‘ನಮ್ ಗೂಡಿನಿಂದ ಗುರಿಯ ಬೆನ್ನತ್ತಿ’ ಎನ್ನುವ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

“ಕೋವಿಡ್ ಸಮಯದಲ್ಲಿ ಮಕ್ಕಳಿಗೆ ಕಲಿಕೆಯಲ್ಲಿ ಬಹು ದೊಡ್ಡ ಹಿನ್ನಡೆಯಾಗಿದೆ. ಆನ್‌ಲೈನ್ ವ್ಯಾಮೋಹ, ಭಾಷೆಯ ಕಲಿಕೆಯಲ್ಲಿನ ದೋಷಗಳನ್ನು ಗಮನಿಸಿ ಸರಿಪಡಿಸುವವರೇ ಇಲ್ಲದಂತಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಕಾಲವನ್ನು ಸತ್ಯೋತ್ತರ ಯುಗವೆಂದು ಕರೆಯುತ್ತಾರೆ. ಸತ್ಯ ಬೇಕಾಗಿಲ್ಲ ಎಂಬುದೇ ಇದರ ಅರ್ಥ. ಸತ್ಯ, ಅಹಿಂಸೆಯನ್ನು ತನ್ನ ಉಸಿರನ್ನಾಗಿಸಿಕೊಂಡಿದ್ದ ಮಹಾತ್ಮ ಗಾಂಧೀಜಿ ಜನಿಸಿದ ಈ ದೇಶದಲ್ಲಿ ಸತ್ಯಕ್ಕೆ ವಿರುದ್ಧವಾಗಿ ತಂತ್ರಜ್ಞಾನಗಳು ಬಳಕೆಯಾಗುತ್ತಿವೆ” ಎಂದು ಹೇಳಿದರು.

“ಅತ್ಯಧಿಕ ಸಂಬಳ ದೊರೆಯುವ ಉದ್ಯೋಗಗಳನ್ನು ನಾಳೆಯ ಹೊತ್ತಿಗೆ ಕೇಳುವವರೇ ಇಲ್ಲದಂತಾಗುತ್ತಿದೆ. ಅತ್ಯಂತ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಗುರಿಯ ಬೆನ್ನತ್ತಿ ಹೋಗುತ್ತಿದ್ದೇವೆ. ಆದರೆ, ಒಂದು ನೂತನ ತಂತ್ರಜ್ಞಾನ ಮತ್ತೊಂದು ಪ್ರಚಲಿತ ತಂತ್ರಜ್ಞಾನವನ್ನು ಹೊಡೆದುರುಳಿಸಿ ತನ್ನನ್ನು ತಾನು ಪ್ರತಿಷ್ಠಾಪಿಸಿಕೊಳ್ಳುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಯುವನಿಧಿ ಯೋಜನೆಯ 2,091 ಅರ್ಜಿ ಸ್ವೀಕಾರ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಕಾಳಿದಾಸ ಪ್ರೌಢ ಶಾಲೆಯ ಉಪಪ್ರಾಂಶುಪಾಲ ಕೆ.ಚಂದ್ರಶೇಖರ್ ಮಾತನಾಡಿ, ತಮ್ಮ ಬಿಎಡ್ ಸಮಯದಲ್ಲಿನ ನೆನಪುಗಳನ್ನು ಮೆಲುಕು ಹಾಕಿದರು. ಅಲೆಗ್ಸ್ಯಾಂಡರ್ ಮತ್ತು ಗುರು ಶಿಷ್ಯರ ನಡುವಿನ ಸಂಬಂಧವನ್ನು ವಿವರಿಸಿದರು.

ಆರ್ಯನ್ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಗೋಪಾಲ್ ಟಿ ಆರ್, ಕೆಎಸ್‌ಇಎಫ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಹರೀಶ್ ಆರ್, ಉಪನ್ಯಾಸಕರುಗಳಾದ ಕುಮಾರ ಸ್ವಾಮಿ ಟಿ ಪಿ, ರಾಮಕೃಷ್ಣಪ್ಪ ಪಿ, ಆರ್ ವೈಜಯಂತಿ ಸೇರಿದಂತೆ ಪ್ರಶಿಕ್ಷಣಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...