ತುಮಕೂರು | ಕೊಬ್ಬರಿಗೆ ಬೆಂಬಲ ಬೆಲೆ, ನಾಫೆಡ್ ಖರೀದಿ ಕೇಂದ್ರ ತೆರೆಯಲು ಆಗ್ರಹ

Date:

ಕೇಂದ್ರ ಸರ್ಕಾರ ಕೊಬ್ಬರಿಗೆ ಬೆಲೆ ನಿಗದಿಪಡಿಸಿರುವ ₹12,000ದ ಜತೆಗೆ ರಾಜ್ಯ ಸರ್ಕಾರ ₹3,000 ಸೇರಿಸಿ ನಾಫೆಡ್ ಮೂಲಕ ಕೊಬ್ಬರಿ ಖರೀದಿ ಕೇಂದ್ರ ತೆರೆಯಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಸೋಮವಾರ ಟೌನ್‌ಹಾಲ್ ವೃತ್ತದಿಂದ ಮೆರವಣಿಗೆಯಲ್ಲಿ ಆಗಮಿಸಿದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಆರಂಭಿಸಿದರು.

ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಂಕೆರೆ ಸತೀಶ್ ಮಾತನಾಡಿ, “ಕೇಂದ್ರ ಸರ್ಕಾರ ನಿಗದಿ ಮಾಡಿರುವ ಬೆಲೆ ಜತೆಗೆ ರಾಜ್ಯ ಸರ್ಕಾರವೂ ₹3,000 ಸೇರಿಸಿ ನಾಫೆಡ್ ಕೇಂದ್ರದ ಮೂಲಕ ಖರೀದಿಸಲು ಕ್ರಮ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ಬಿಡದೆ ಹೋರಾಟ ಮಾಡುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಬ್ಬರಿಗೆ ಬೆಂಬಲ ಬೆಲೆ

“ರೈತರು, ಕಾರ್ಮಿಕರು, ಸೈನಿಕರ ಬದುಕು ಉಳಿದರೆ ಮಾತ್ರ ದೇಶದ ಅಭಿವೃದ್ಧಿ. ಹೀಗಿರುವಾಗ ಸರ್ಕಾರಗಳು ರೈತರನ್ನು ಕಡೆಗಣಿಸುತ್ತಲೇ ಬರುತ್ತಿವೆ. ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚು ಮಾಡಬೇಕೆಂದು ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಸರ್ಕಾರಗಳು ಸಕಾರಾತ್ಮಕವಾಗಿ ಸ್ಪಂದಿಸಲಿಲ್ಲ. ಹಾಗಾಗಿ ಸಮರ್ಪಕ ನಿರ್ಧಾರ ಪ್ರಕಟಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ” ಎಂದರು.

“ವಿದೇಶಗಳಿಂದ ಕೊಬ್ಬರಿ ಎಣ್ಣೆ ಹಾಗೂ ಪೌಡರ್ ಆಮದನ್ನು ಸರ್ಕಾರ ನಿಲ್ಲಿಸದ ಕಾರಣ ಕೊಬ್ಬರಿ ಬೆಲೆ ಕುಸಿಯಲು ಕಾರಣವಾಗಿದೆ. ಸರ್ಕಾರಗಳಿಗೆ ತೆಂಗು ಬೆಳೆಗಾರರ ಹಿತಕಾಯುವ ಕಾಳಜಿಯಿಲ್ಲ. ಅರಸೀಕೆರೆಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿ ತೆಂಗು ಬೆಳೆಗಾರರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಆದರೆ ತೆಂಗು ಬೆಳೆಗಾರರ ಪರವಾಗಿ ಜಿಲ್ಲೆಯ ಯಾವೊಬ್ಬ ಶಾಸಕರೂ ಅಧಿವೇಶನದಲ್ಲಿ ಧ್ವನಿ ಎತ್ತಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕೆ ಎಸ್ ಧನಂಜಯಾರಾಧ್ಯ ಮಾತನಾಡಿ, “ಕೊಬ್ಬರಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ ಸರ್ಕಾರ ಖರೀದಿ ಮಾಡಿ ತೆಂಗು ಬೆಳೆಗಾರರಿಗೆ ನ್ಯಾಯ ಒದಗಿಸದಿದ್ದರೆ ಆಹೋರಾತ್ರಿ ಧರಣಿ ಸತ್ಯಾಗ್ರಹ ಮಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಬೃಹತ್ ಮರಗಳ ರಕ್ಷಣೆಗೆ ಹಸಿರು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆಗ್ರಹ

“ಈ ಮೊದಲಿದ್ದ ಕ್ವಿಂಟಾಲ್ ಕೊಬ್ಬರಿಯ ಬೆಲೆ ₹11,750ರ ದರಕ್ಕೆ ₹250 ಸೇರಿಸಿ, ₹12,000ಕ್ಕೆ ಹೆಚ್ಚಿಸಿದ್ದು ತೆಂಗು ಬೆಳೆಗಾರರಿಗೆ ಯಾವುದೇ ಪ್ರಯೋಜನವಾಗಿಲ್ಲ. ಈಗ ಎಲ್ಲ ದಿನಬಳಕೆ ಪದಾರ್ಥಗಳ ಬೆಲೆ ಶೇ.30ರಷ್ಟು ಹೆಚ್ಚಾಗಿದೆ. ಹೀಗಿರುವಾಗ ಅದೇ ಪ್ರಮಾಣದಲ್ಲಿ ಕೊಬ್ಬರಿಗೂ ಶೇ.30ರಷ್ಟು ಬೆಲೆ ಹೆಚ್ಚಿಸಿದರೆ ಕ್ವಿಂಟಾಲ್‌ಗೆ ₹16,000 ನೀಡಬೇಕಾಗುತ್ತದೆ. ಸಾಲ ಬಾಧೆಯಿಂದ ರೈತರು ಕಷ್ಟಕ್ಕೆ ಸಿಲುಕಿದ್ದಾರೆ. ತೆಂಗು ಬೆಳೆಗಾರರು ಕೊಬ್ಬರಿ ಬೆಲೆ ಕುಸಿತದಿಂದ ನಷ್ಟ ಅನುಭವಿಸುತ್ತಿದ್ದಾರೆ. ಕೇಂದ್ರ ಸರ್ಕಾರ ನಿಗದಿಪಡಿಸಿರುವ ₹12,000ಕ್ಕೆ ರಾಜ್ಯ ಸರ್ಕಾರ ₹3,000 ಸೇರಿಸಿ ತುರ್ತಾಗಿ ನಾಫೆಡ್ ಕೇಂದ್ರ ತೆರೆದು ಖರೀದಿಸಬೇಕು” ಎಂದು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಕೆ ವಿ ಲೋಕೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಿವರತ್ನಮ್ಮ, ಮುಖಂಡರುಗಳಾದ ಸಣ್ಣದ್ಯಾಮೇಗೌಡ, ಮಲ್ಲಿಕಾರ್ಜುನಯ್ಯ, ಸಿದ್ದರಾಜು, ಸರ್ವಮಂಗಳ, ಶಾಂತಕ್ಕ, ದೇವಮ್ಮ, ರೇಣುಕಮ್ಮ, ನಾಗೇಂದ್ರ, ರಾಜಣ್ಣ ಸೇರಿದಂತೆ ಬಹುತೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...