ತುಮಕೂರು | ಗ್ರಾ. ಪಂಚಾಯಿತಿ ಅಭಿವೃದ್ಧಿಗೆ ಒಗ್ಗೂಡಿ ತಂಡವಾಗಿ ಕೆಲಸ ಮಾಡಬೇಕಿದೆ : ಜಿಪಂ ಸಿಇಓ ಜಿ.ಪ್ರಭು

Date:

ಮಾದರಿ ಗ್ರಾಮ ಪಂಚಾಯಿತಿ ನಿರ್ಮಾಣಕ್ಕೆ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಪಿಡಿಓಯಿಂದ ನೀರು ಗಂಟಿ ಸಿಬ್ಬಂದಿಯವರೆಗೆ ಒಗ್ಗೂಡಿ ತಂಡವಾಗಿ ಕೆಲಸ ಮಾಡಿದರೆ ಮಾತ್ರ ಗ್ರಾಮ ಪಂಚಾಯಿತಿಗಳು ಮಾದರಿ ಎನಿಸಿಕೊಳ್ಳುತ್ತದೆ ಎಂದು ತುಮಕೂರು ಜಿಲ್ಲಾ ಪಂಚಾಯತ್ ಸಿಇಓ ಜಿ.ಪ್ರಭು ಅವರು ಸಲಹೆ ನೀಡಿದರು.

ಗುಬ್ಬಿ ಪಟ್ಟಣದ ಎಸ್ ಸಿ ಎಸ್ ಕಲ್ಯಾಣ ಮಂಟಪದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಿಡಿಒಗಳು, ಕಾರ್ಯದರ್ಶಿಗಳ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಚುನಾಯಿತ ಪ್ರತಿನಿಧಿಗಳಿಂದ ನಿತ್ಯ ದೂರುಗಳು ಬರುತ್ತಿರುವ ಹಿನ್ನಲೆ ಕಾರ್ಯಗಾರ ಆಯೋಜನೆ ಮಾಡಬೇಕಾಗಿತ್ತು. ಈ ವೇದಿಕೆಯಲ್ಲಿ ಯಾವ ಭಾಷಣಕ್ಕೆ ಅವಕಾಶ ನೀಡದೆ ಸಮಸ್ಯೆಗಳು, ಪ್ರಶ್ನೆಗಳಿಗೆ ನೇರ ಉತ್ತರ ನೀಡುವ ಪ್ರಯತ್ನ ಹಾಗೂ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನಕ್ಕೆ ಅವಶ್ಯ ಮಾಹಿತಿ ಒದಗಿಸುವ ಕೆಲಸ ಮಾಡಲಾಗಿದೆ ಎಂದರು.

ಜಿಲ್ಲೆಯ 330 ಗ್ರಾಮ ಪಂಚಾಯಿತಿಯ ಸುಮಾರು ಮೂರು ಸಾವಿರ ಪ್ರತಿನಿಧಿಗಳು ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ಸರ್ಕಾರದ ಯಾವುದೇ ಕಾರ್ಯಕ್ರಮ ಅನುಷ್ಠಾನಕ್ಕೆ ಸಹಕಾರ ನೀಡಬೇಕಿದೆ. ನರೇಗಾ ಯೋಜನೆ ಅನುಷ್ಠಾನದಲ್ಲಿ ಗುಬ್ಬಿ ತುಮಕೂರು ತಾಲ್ಲೂಕು ಹಿಂದೆ ಬಿದ್ದಿದೆ. 55 ಕೋಟಿ ಕೆಲಸಕ್ಕೆ ನಾನು ಅನುಮೋದನೆ ಕೊಟ್ಟರೆ ಕೆಲಸ ಮಾತ್ರ ಕೇವಲ 18 ಕೋಟಿ ನಡೆದಿದೆ. ಅಧ್ಯಕ್ಷರಾದಿ ಅಧಿಕಾರಿಗಳು, ನೀರುಗಂಟಿ ಸಿಬ್ಬಂದಿಗಳು ಮಾಡುತ್ತಿರುವುದು ಜವಾಬ್ದಾರಿ ಕೆಲಸ ಅರಿತು ನಡೆದುಕೊಳ್ಳಬೇಕು. ಇಲ್ಲಿ ನನ್ನ ವೈಯಕ್ತಿಕ ಇಲ್ಲ. ಅಭಿವೃದ್ದಿ ಕೆಲಸಕ್ಕೆ ಒತ್ತು ನೀಡಿದ್ದೇನೆ. ನರೇಗಾ ಯೋಜನೆ ಅನುಷ್ಠಾನಕ್ಕೆ 800 ಕೋಟಿ ಅನುಮೋದನೆ ನೀಡಿದರೆ ಕೆಲಸ ಸಾಗಿಲ್ಲ. 5 ಕೋಟಿ ಕೆಲಸ ಮಾಡಿದ್ದು ಎರಡು ಪಂಚಾಯಿತಿ ಮಾತ್ರ. 2 ಕೋಟಿ ಮುಟ್ಟಿದ್ದು ನೂರು ಪಂಚಾಯಿತಿ ಇನ್ನೂ ಕೆಲಸ ಮಾಡಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವರ್ಷಕ್ಕಿಂತ ನರೇಗಾ ಯೋಜನೆ ಕೆಲಸ ಮಾಡಿದೆ. 639 ಕೋಟಿ ರೂಗಳ ಸಾಧನೆ ತೋರಿದ ಜಿಲ್ಲೆಯಲ್ಲಿ ಹಿಂದುಳಿದ ತಾಲ್ಲೂಕುಗಳಲ್ಲಿ ಕಾರ್ಯಾಗಾರ ನಡೆಸಬೇಕಿದೆ. 214 ಕೋಟಿ ರೂಗಳ ಕೆಲಸ ಪ್ರಗತಿಯಲ್ಲಿರುವ ಜಿಲ್ಲೆಗೆ ಮತ್ತಷ್ಟು ಕೆಲಸ ತರುವ ಉದ್ದೇಶದಿಂದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಗ್ಗೂಡಿ ಕೆಲಸ ಮಾಡಬೇಕು ಎಂದ ಅವರು ಶಿಕ್ಷಣಕ್ಕೆ ಒತ್ತು ನೀಡಿ ಪಂಚಾಯಿತಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು. ನರೇಗಾ ಯೋಜನೆ ಬಳಸಿ ಕೆಲಸ ಮಾಡುವಾಗ್ಗೆ ಯಾವ ಕೆಲಸವನ್ನೂ ಬೇಡ ಎನ್ನದೆ ಕಾಮಗಾರಿಗೆ ಅನುಮೋದನೆ ನೀಡಿದ್ದೇನೆ. ಪ್ರಜ್ಞಾವಂತ ನಾಗರೀಕರು ಇರುವ ಗ್ರಾಮೀಣ ಭಾಗದಲ್ಲಿ ನರೇಗಾ ಯೋಜನೆ ಕಳಂಕರಹಿತವಾಗಿ ಅನುಷ್ಠಾನ ಮಾಡಬೇಕು. ಇಲ್ಲವಾದಲ್ಲಿ ಲೋಕಾಯುಕ್ತ ಇಲಾಖೆಯತ್ತ ದೂರುಗಳು ಹೋಗುತ್ತವೆ ಎಂಬ ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ಪ್ರಶ್ನಾವಳಿ ನಡೆಯಿತು. ಸದಸ್ಯರ ನೇರ ಪ್ರಶ್ನೆಗೆ ಉತ್ತರ ನೀಡಿದರು. ಕೆಲವು ಸಮಸ್ಯೆಗೆ ಪಿಡಿಓಗಳನ್ನೇ ಮುಖಾಮುಖಿ ಚರ್ಚಿಸಲು ಅವಕಾಶ ನೀಡಿದರು.

ತಾಪಂ ಇಓ ಶಿವಪ್ರಕಾಶ್, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಇಂದ್ರೇಶ್ ಸೇರಿದಂತೆ ತಾಲ್ಲೂಕಿನ 34 ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಿಡಿಒಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ತೋಟಕ್ಕೆ ತಗುಲಿದ ಬೆಂಕಿ : ತೆಂಗು, ಅಡಿಕೆ, ಬಾಳೆಗಿಡಗಳು ಭಸ್ಮ

ನೀಲಗಿರಿ ತೋಪಿನಲ್ಲಿ ಕಾಣಿಸಿಕೊಂಡ ಬೆಂಕಿ ಗಾಳಿ ರಭಸಕ್ಕೆ ಪಕ್ಕದ ತೋಟಕ್ಕೆ ಹರಡಿ...

ಗುಬ್ಬಿ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

 ಮೀಸಲಾತಿ ಜಾರಿಗೆ ನಿರಂತರ ಹೋರಾಟ ಮಾಡಿದ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ...

ಗುಬ್ಬಿ | ಬೆಸ್ಕಾಂ ನಿಂದ ರೈತರ ಸಭೆ : ಸೂಕ್ತ ಪರಿಹಾರಕ್ಕೆ ರೈತ ಸಂಘ ಆಗ್ರಹ

 ಬೇಸಿಗೆ ಕಾಲದಲ್ಲಿ ವಿದ್ಯುತ್ ಕಡಿತ ರೈತರ ಕೃಷಿ ಚಟುವಟಿಕೆಗೆ ಸಾಕಷ್ಟು ಸಮಸ್ಯೆ...

ತುಮಕೂರು | ಪೌರಕಾರ್ಮಿಕ ಅಯ್ಯಪ್ಪನ ಮನೆ ಬೆಂಕಿಗೆ ಆಹುತಿ : ಪರಿಹಾರಕ್ಕೆ ಸಿಪಿಎಂ ಒತ್ತಾಯ

ತುಮಕೂರು ಮಹಾನಗರದಲ್ಲಿ ವಾಸವಾಗಿರುವ ಪೌರಕಾರ್ಮಿಕರಾದ ಅಯ್ಯಪ್ಪ ಅವರ ಮನೆಯಲ್ಲಿ ಸಂಭವಿಸಿದ ಅಗ್ನಿ...