ತುಮಕೂರು | ಹೇಮಾವತಿ ನಾಲೆ ಕಳಪೆ ಕಾಮಗಾರಿ ಆರೋಪ; ರೈತರ ಪ್ರತಿಭಟನೆ

Date:

ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮೇಲಿನವಳಗೆರೆಹಳ್ಳಿ ಬಳಿ ನಡೆಯುತ್ತಿರುವ ಹೇಮಾವತಿ ನಾಲೆ ಕಾಮಗಾರಿ ಅತ್ಯಂತ ಕಳಪೆಯಾಗಿದೆ ಎಂದು ಆರೋಪಿಸಿ ರೈತರು ಮಾಯಸಂದ್ರ ಹೇಮಾವತಿ ನಾಲಾ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಮೇಲಿನವಳಗೆರೆಹಳ್ಳಿ ಗ್ರಾಮದಿಂದ ಹೇಮಾವತಿ ನಾಲೆಯ ಕಳಪೆ ಕಾಮಗಾರಿ ಬಗ್ಗೆ ದೂರು ನೀಡಲು ಬಂದ ರೈತರ ಅಹವಾಲು ಕೇಳಲು ಎಂಜಿನಿಯರ್‌ಗಳು ಬರಲೇ ಇಲ್ಲ, ಇದರಿಂದ ರೊಚ್ಚಿಗೆದ್ದ ರೈತರು ಎಂಜಿನಿಯರ್‌ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಉದ್ದಟತನದ ಉತ್ತರ ನೀಡಿದ ಎಇಇ: ಹೇಮಾವತಿ ನಾಲಾ ಕಚೇರಿಯ ವ್ಯವಸ್ಥಾಪಕ ಪೆರುಮಾಳ್ ಅವರಿಂದ ಮೊಬೈಲ್ ನಂಬರ್ ಪಡೆದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚರಣ್‌ಸಿಂಗ್ ಚೌಹಾಣ್ ಅವರಿಗೆ ಕರೆ ಮಾಡಿದರೆ, “ನಾನು ಬರುವುದಿಲ್ಲ, ನೀವು ಬೇಕಾದರೆ ಅಲ್ಲಿಯೇ ಮಲಗಿಕೊಳ್ಳಿ, ಏನು ಬೇಕಾದರೂ ಮಾಡಿಕೊಳ್ಳಿ” ಎಂದು ಉದ್ದಟತನದ ಉತ್ತರ ನೀಡಿದ್ದರಿಂದ ರೈತರು ಮತ್ತಷ್ಟು ಆಕ್ರೋಶ ಭರಿತರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೇಮಾವತಿ ಎಇಇ ಚರಣ್‌ಸಿಂಗ್ ಚೌಹಾಣ್ ನೀಡಿದ ಉದ್ದಟತನದ ಉತ್ತರದಿಂದ ಆಕ್ರೋಶ ಭರಿತರಾದ ರೈತರು ಕಚೇರಿಗೆ ಬೀಗ ಜಡಿದ ಪ್ರತಿಭಟನೆ ಮುಂದುವರೆಸುವ ನಿರ್ಧಾರ ಕೈಗೊಂಡರು. ಹೇಮಾವತಿ ಮುಖ್ಯ ಎಂಜಿನಿಯರ್ ವರದಯ್ಯನವರಿಗೆ ದೂರವಾಣಿ ಮೂಲಕ ರೈತರು ತಮ್ಮ ಅಹವಾಲು ಹೇಳಿಕೊಂಡರು. ರೈತರ ಮನವಿಗೆ ಸ್ಪಂದಿಸಿದ ಸಿಇ ಅವರು ಯಡಿಯೂರು ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಶ್ರೀನಿವಾಸ್ ಅವರನ್ನು ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡುವಂತೆ ತಿಳಿಸಿರುವುದಾಗಿ ಹೇಳಿ ರೈತರನ್ನು ಸಮಾಧಾನಪಡಿಸಿದರು.

ಎಇಇ ವಿರುದ್ಧ ಕ್ರಮ: ಸಮಸ್ಯೆ ಹೇಳಲು ಬಂದ ರೈತರೊಂದಿಗೆ ಉದ್ದಟತನದ ಮಾತುಗಳನ್ನಾಡಿದ ಎಇಇ ಚರಣ್‌ಸಿಂಗ್ ಚೌಹಾಣ್ ನಡೆಯ ಬಗ್ಗೆ ಸಿ ಇ ವರದಯ್ಯನವರು ಬೇಸರ ವ್ಯಕ್ತಪಡಿಸಿದರು. ಎಇಇಗೆ ಅಗತ್ಯ ಸೂಚನೆ ನೀಡುವುದಾಗಿ ತಿಳಿಸಿದರು. ಕಾಮಗಾರಿ ನಡೆಯುವ ಸ್ಥಳಕ್ಕೆ ಕಾರ್ಯಪಾಲಕ ಎಂಜಿನಿಯರ್‌ ಕಳುಹಿಸಿಕೊಡುವ ಸಿಇ ಮಾತಿಗೆ ಸಮ್ಮತಿಸಿದ ರೈತರು ಪ್ರತಿಭಟನೆಗೆ ಅಂತ್ಯ ಹಾಡಿ ಗ್ರಾಮದತ್ತ ಹೆಜ್ಜೆ ಹಾಕಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪಿಡಿಒ ಅಕ್ರಮ ಎಸಗಿದರೂ ಅಧಿಕಾರಿಗಳು ಮೌನ; ಗ್ರಾ.ಪಂ ಅಧ್ಯಕ್ಷೆ ಆರೋಪ

ಪ್ರತಿಭಟನೆಯಲ್ಲಿ ರೈತರುಗಳಾದ ಜಗದೀಶ್, ಪುಟ್ಟರಾಜ್, ಛಾಯೇಶ್, ನಾಗರಾಜ್, ಶರತ್, ಆನಂದ್, ನಟರಾಜ್, ಮೋಹನ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...