ತುಮಕೂರು | ಪೊಲೀಸ್ ವಶದಲ್ಲಿ ಆರೋಪಿ ಸಾವು; ತನಿಖೆ ನಡೆಸುವಂತೆ ಅಹೋರಾತ್ರಿ ಧರಣಿ

Date:

ಪೊಲೀಸ್ ವಶದಲ್ಲೇ ಮೃತಪಟ್ಟ ಆರೋಪಿ ಕುಮಾರಾಚಾರ್ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿ ಮಾಜಿ ಶಾಸಕ ಮಸಾಲೆ ಜಯರಾಮ್ ನೇತೃತ್ವದಲ್ಲಿ ತುರುವೇಕೆರೆ ಪಟ್ಟಣದ ಸಿಪಿಐ ಕಚೇರಿ ಎದುರು ಧರಣಿ ನಡೆಸಿದರು.

ಅಕ್ಟೋಬರ್ 23ರಂದು ಕೆ. ಮಾವಿನಹಳ್ಳಿಯಲ್ಲಿ ಇಸ್ಪೀಟ್ ಆಡುತ್ತಿದ್ದ ಆರೋಪದ ಮೇಲೆ ಕುಮಾರಾಚಾರ್‌ನನ್ನು ಪೊಲೀಸರು ಬಂಧಿಸಿದ್ದರು. ಠಾಣೆಗೆ ಕರೆತರುವ ಮಾರ್ಗಮಧ್ಯೆ ಕುಮಾರಾಚಾರ್ ಮೃತಪಟ್ಟಿದ್ದಾಗಿ ಪೋಲೀಸರು ಆತನ ಪತ್ನಿ ಹಾಗೂ ಸಂಬಂಧಿಕರಿಗೆ ತಿಳಿಸಿದ್ದರು. ಕುಮಾರಾಚಾರ್ ಸಾವು ಕುರಿತಂತೆ ಪತ್ನಿ, ಪುತ್ರ ಹಾಗೂ ಸಂಬಂಧಿಕರು ಶಂಕೆ ವ್ಯಕ್ತಪಡಿಸಿ ನ್ಯಾಯ ದೊರಕಿಸುವಂತೆ ಮಾಜಿ ಶಾಸಕ ಮಸಾಲೆ ಜಯರಾಮ್ ಮೊರೆ ಹೋಗಿದ್ದರು. ಈ ಹಿನ್ನಲೆಯಲ್ಲಿ ಕುಮಾರಾಚಾರ್‌ನನ್ನು ಪೋಲೀಸರು ಹತ್ಯೆಗೈದಿದ್ದಾರೆಂದು ಆರೋಪಿಸಿ ನ್ಯಾಯಕ್ಕಾಗಿ ಆಗ್ರಹಿಸಿ ಮಾಜಿ ಶಾಸಕ ಮಸಾಲೆ ಜಯರಾಮ್ ನಾಗರಿಕರೊಂದಿಗೆ ಒಗ್ಗೂಡಿ ಸಿಪಿಐ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಪೊಲೀಸರ ಅಮಾನತಿಗೆ ಒತ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೊಲೀಸರು ಹಲ್ಲೆ ನಡೆಸಿದ್ದರಿಂದ ಕುಮಾರಾಚಾರ್ ಸಾವು ಸಂಭವಿಸಿದೆ. ಕುಮಾರಾಚಾರ್ ಸಾವಿನಿಂದ ಇಡೀ ಕುಟುಂಬ ಬೀದಿಗೆ ಬಿದ್ದಿದೆ. ಕುಮಾರಾಚಾರ್ ಸಾವಿಗೆ ಕಾರಣರಾಗಿರುವ ಪಿಎಸ್‌ಐ ಗಣೇಶ್ ಮತ್ತು ಆತನ ಜೊತೆಯಲ್ಲಿದ್ದ ಸಿಬ್ಬಂದ್ದಿಯನ್ನು ಅಮಾನತುಗೊಳಿಸಿ ತನಿಖೆ ನಡೆಸಬೇಕು. ಕುಮಾರಾಚಾರ್ ಕುಟುಂಬಕ್ಕೆ ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು” ಎಂದು ಮಾಜಿ ಶಾಸಕ ಮಸಾಲೆ ಜಯರಾಮ್ ಆಗ್ರಹಿಸಿದರು.

“ಮೇಲಧಿಕಾರಿಗಳು ಶೀಘ್ರದಲ್ಲಿಯೇ ಅಗತ್ಯ ಕ್ರಮ ವಹಿಸದಿದ್ದರೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ” ಎಂದು ಎಚ್ಚರಿಸಿದರು.

ಫಲಿಸದ ಮಾತುಕತೆ

ಪ್ರತಿಭಟನೆ ನಿರತ ಮಾಜಿ ಶಾಸಕ ಮಸಾಲೆ ಜಯರಾಮ್ ಅವರೊಂದಿಗೆ ಡಿವೈಎಸ್‌ಪಿ ಲಕ್ಷ್ಮೀಕಾಂತ್, ಸಿಪಿಐ ಲೋಹಿತ್ ಅವರು ಮಾತುಕತೆ ನೆಡೆಸಿದರು. ಕುಮಾರಾಚಾರ್ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಕುರಿತಂತೆ ಮೇಲಧಿಕಾರಿಗಳ ಗಮನಕ್ಕೆ ತಂದು ಕ್ರಮ ವಹಿಸುವ ಕುರಿತು ತಿಳಿಸಿದ್ದಾರೆ. ಆದರೂ ಎಸ್‌ಪಿಯವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಕುಮಾರಾಚಾರ್ ಸಾವಿಗೆ ಕಾರಣರಾಗಿರುವ ಎಸ್‌ಐ ಗಣೇಶ್ ಮತ್ತಿತರನ್ನು ಅಮಾನತುಗೊಳಿಸಿ, ಅಗತ್ಯ ಪರಿಹಾರ ಘೊಷಣೆ ಮಾಡುವರೆಗೂ ಪ್ರತಿಭಟನೆ ಮುಂದುವರೆಸುತ್ತೇವೆಂದು ಮಾಜಿ ಶಾಸಕ ಮಸಾಲೆ ಜಯರಾಮ್ ಹಾಗೂ ಅವರ ಬೆಂಬಲಿಗರು ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಅಸಮಾನತೆ ವಿರುದ್ಧ ಜನ ಧಂಗೆ ಏಳುವ ಸಾಧ್ಯತೆಯಿದೆ: ಸಚಿವ ಕೆ ಎನ್ ರಾಜಣ್ಣ

ಧರಣಿಯಲ್ಲಿ ಮುಖಂಡರುಗಳಾದ ಕೊಂಡಜ್ಜಿ ವಿಶ್ವನಾಥ್, ವಿ ಟಿ ವೆಂಕಟರಾಮ್, ಸಿದ್ದಲಿಂಗಪ್ಪ, ನವೀನಬಾಬು, ನಂಜೇಗೌಡ ಗಣೇಶ್‌ಗೌಡ, ಸೋಮಣ್ಣ, ಚಿದಾನಂದ್, ಪ್ರಕಾಶ್, ದಯಾನಂದ್, ಚೂಡಾಮಣಿ, ವಿಶ್ವಕರ್ಮ ಸಮಾಜದ ದೇವರಾಜ್, ಪ್ರೇಮಕುಮಾರ್, ಕುಮಾರಾಚಾರ್ ಪತ್ನಿ ಹಾಗೂ ಕುಟುಂಬದವರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...