ತುಮಕೂರು | ʼಇಂಟಿಗ್ರೆಟೆಡ್ ಟೌನ್ ಶಿಪ್ʼ ವಿರೋಧಿಸಿ ಕುಣಿಗಲ್‌ನಲ್ಲಿ ಬೃಹತ್ ಪ್ರತಿಭಟನೆ

Date:

ಕುಣಿಗಲ್‌ ಕುದುರೆ ಫಾರಂನಲ್ಲಿ ʼಇಂಟಿಗ್ರೆಟೆಡ್ ಟೌನ್ ಶಿಪ್ʼ ನಿರ್ಮಾಣ ಮಾಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ, ಪಾರಂಪರಿಕ ಕುಣಿಗಲ್ ಕುದುರೆ ಫಾರಂ ಉಳಿವಿಗಾಗಿ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ ನಡೆಸಿದೆ. ಸಮಿತಿಯ ಕಾರ್ಯಕರ್ತರು ಕುಣಿಗಲ್ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಕುಣಿಗಲ್ ಸ್ಟಡ್ ಫಾರಂನಲ್ಲಿ ʼಇಂಟಿಗ್ರೆಟೆಡ್ ಟೌನ್ ಶಿಪ್ʼ ನಿರ್ಮಾಣ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈ ಬಿಡಬೇಕೆಂದು ಆಗ್ರಹಿಸಿ, ಪಾರಂಪರಿಕ ಕುಣಿಗಲ್ ಕುದುರೆ ಫಾರಂ ಉಳಿವಿಗಾಗಿ ಹೋರಾಟ ಸಮಿತಿಯ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಪ್ರಗತಿಪರ ಚಿಂತಕರು, ರಾಜಕಾರಣಿಗಳು, ನಾಗರೀಕರು ಪಟ್ಟಣದ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿಯವರೆಗೆ ಕುದುರೆಯೊಂದಿಗೆ ಬೃಹತ್ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ ಮತ್ತು ಸಂಸದರ, ಶಾಸಕರ ವಿರುದ್ಧ ದಿಕ್ಕಾರ ಕೂಗಿದರು. ವಕೀಲರು ಕಾರ್ಯ, ಕಲಾಪವನ್ನು ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಆಮ್ ಆದ್ಮಿ ಪಕ್ಷದ ಮುಖಂಡ ಮುಖ್ಯಮಂತ್ರಿ ಚಂದ್ರು ಮಾತನಾಡಿ, ʼಇಂಟಿಗ್ರೆಟೆಡ್ ಟೌನ್ ಶಿಪ್ʼ ಕುಣಿಗಲ್ ಭಾವನೆಗೆ ದಕ್ಕೆ ಆಗಿದೆ. 421ಎಕರೆ ಭೂಮಿಯಲ್ಲಿ ಕುದುರೆ ಸ್ಟಡ್ ಫಾರಂ ಕುದುರೆಗಳನ್ನು ಬೆಳೆಸುವುದು ನೂರಾರು ವರ್ಷಗಳಿಂದ ಇದೆ. ಈ ಜಾಗವನ್ನು 1992 ರಲ್ಲಿ ಮಲ್ಯ ಅವರಿಗೆ ಗುತ್ತಿಗೆ ಆಧಾರದ ಮೇಲೆ ಕೊಡಲಾಗಿತ್ತು. ಗುತ್ತಿಗೆ ಮುಗಿದ ಮೇಲೆ ಬಸವರಾಜ್ ಬೊಮ್ಮಾಯಿ ಸರ್ಕಾರ ಪೂನಾವಾಲ ಅವರಿಗೆ ಗುತ್ತಿಗೆಗೆ ಕೊಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸರ್ಕಾರ ಬಂದ ಮೇಲೆ ಈ ಗುತ್ತಿಗೆಯನ್ನು ಅವಾನತ್ತಿನಲ್ಲಿಟ್ಟು ʼಇಂಟಿಗ್ರೆಟೆಡ್ ಟೌನ್ ಶಿಪ್ʼ ನಿರ್ಮಾಣ ಮಾಡಲು ಮುಂದಾಗಿದೆ. ಗಂಗರ ಕಾಲದಿಂದಲ್ಲಿ ಯುದ್ದದ ಕುದುರೆಯನ್ನು ವಿಶ್ರಾಂತಿಗೆ ಬಳಸುತಿದ್ದರು. ನಂತರ ಟಿಪ್ಪು ಯುದ್ದದ ಕುದುರೆಗಳನ್ನು ಸಾಕಲು ಬಳಸುತಿದ್ದರು. ನಂತರ ಏಷ್ಯಾದಲ್ಲೆ ಎರಡನೇ ಸ್ಥಾನದಲ್ಲಿ ಕುಣಿಗಲ್ ಸ್ಟಡ್ ಫಾರಂ ಉಳಿದಿದೆ. ಅದನ್ನು ಉಳಿಸಿಕೊಳ್ಳಬೇಕಾದದ್ದು ನಮ್ಮ ಜವಬ್ದಾರಿ ಎಂದರು.

ಸ್ಟಡ್ ಫಾರಂನಲ್ಲಿ 421ಎಕರೆ ಭೂಮಿಯಿದ್ದು, ಈ ಭೂಮಿಯನ್ನು ಕಬಳಿಸಲು ಹುನ್ನಾರ ನಡೆದಿದೆ. ಅದು ಯಾರು ಎಂದು ನಿಮಗೆ ಗೊತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಪ್ರಜಾ ಪ್ರಭುತ್ವದ ಹಿನ್ನಲೆಯಲ್ಲಿ ಬಂದವರು. ಹಾಗಾಗಿ ʼಇಂಟಿಗ್ರೆಟೆಡ್ ಟೌನ್ ಶಿಪ್ʼ ನಿರ್ಮಾಣವನ್ನು ತಡೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕುಣಿಗಲ್ ಕುದುರೆ ಫಾರಂ ಉಳಿವಿಗಾಗಿ ಹೋರಾಟ ಸಮಿತಿಯ ಜಿ.ಕೆ. ನಾಗಣ್ಣ, ಬೇಗೂರು ಹುಚ್ಚೇಗೌಡ, ಕೆಂಪೀರೇಗೌಡ, ವಿ.ಶಿವಶಂಕರ್, ಅಬ್ದುಲ್‌ಮುನಾಫ್, ಆನಂದ್‌ಪಟೇಲ್, ರಘುಜಾಣಗೆರೆ ಇತಿಹಾಸ ತಜ್ಞ ಪ್ರೊ. ಪಿ.ವಿ.ನಂಜರಾಜ ಅರಸು, ಮಾಜಿ ಸಚಿವೆ ಬಿ.ಟಿ. ಲಲಿತಾನಾಯ್ಕ್, ಮಾಜಿ ಶಾಸಕ ಬಿ.ಬಿ. ರಾಮಸ್ವಾಮಿಗೌಡ, ಸಾಹಿತಿ ತಲಕಾಡು ಚಿಕ್ಕರಂಗೇಗೌಡ, ಜಿ.ಪಂ ಮಾಜಿ ಅಧ್ಯಕ್ಷ ವೈ.ಎಚ್. ಹುಚ್ಚಯ್ಯ, ಎನ್.ಆರ್.ಲಕ್ಷ್ಮಣನಾರಾಯಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಚ್.ಡಿ. ರಾಜೇಶ್‌ಗೌಡ, ಮಂಡಲ ಅಧ್ಯಕ್ಷ ಕೆ.ಎಸ್. ಬಲರಾಮ್, ತಾಲೂಕು ಜೆಡಿಎಸ್ ಅಧ್ಯಕ್ಷ ಜಗದೀಶ್, ವಕೀಲ ಸಂಘದ ಅಧ್ಯಕ್ಷ ಬಾಬು, ಪುರಸಭೆ ಮಾಜಿ ಅಧ್ಯಕ್ಷ ಕೆ.ಎಲ್. ಹರೀಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...