ತುಮಕೂರು | ರಾಜಕಾರಣಿಗಳು ಭವಿಷ್ಯದ ಬಗ್ಗೆ ಯೋಚಿಸಬೇಕು: ಜೆಡಿಯು ರಾಜ್ಯಾಧ್ಯಕ್ಷ ಮಹಿಮ ಪಟೇಲ

Date:

ರಾಜಕಾರಣ ಬರೀ ಚುನಾವಣೆಗೆ ಸೀಮಿತವಾಗಬಾರದು. ರಾಜಕಾರಣಿಯಾದವರು ಕಲೆ, ಸಂಸ್ಕೃತಿಯನ್ನು ಪಸರಿಸುವ ಕೆಲಸ ಮಾಡಬೇಕು ಎಂದು ಜೆಡಿಯು ರಾಜ್ಯಾಧ್ಯಕ್ಷ ಮಹಿಮ ಜ ಪಟೇಲ ಅಭಿಪ್ರಾಯಪಟ್ಟರು.

ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಝೆನ್ ಟೀಮ್ ಆಯೋಜಿಸಿದ್ದ ನೀನಾಸಂ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. “ಈಗಿನ ರಾಜಕಾರಣ ಚುನಾವಣೆಯನ್ನು ಕೇಂದ್ರೀಕರಿಸಿದೆ. ನಮ್ಮ ತಂದೆ ಜೆ.ಎಚ್ ಪಟೇಲ್ ಹಾಗೂ ರಾಮಕೃಷ್ಣ ಹೆಗಡೆ ಅವರು 24 ಗಂಟೆ ಚುನಾವಣೆ ಬಗ್ಗೆ ಯೋಚಿಸುತ್ತಿರಲಿಲ್ಲ. ಬದಲಿಗೆ ಸಂಗೀತ, ಸಾಹಿತ್ಯ, ಸಂಸ್ಕೃತಿ ಬಗ್ಗೆ ಒಲವುಳ್ಳವರಾಗಿದ್ದರು. ರಾಜಕಾರಣಿಯಾದವನು ಸಾಮಾಜಿಕ ಕಳಕಳಿ ಉಳ್ಳವನಾಗಿರಬೇಕು” ಎಂದರು.

“ನಮ್ಮ ತಂದೆ ಮುಖ್ಯಮಂತ್ರಿ ಆಗಿದ್ದಾಗ 20 ವರ್ಷ ಸಿನಿಮಾ ಬ್ಯಾನ್ ಮಾಡಬೇಕು. ಆಗ ಮಾತ್ರ ನಾಟಕ ಕಲೆ ಜೀವಂತವಾಗಿರುತ್ತದೆ ಎಂದಿದ್ದರು. ಆದರೆ, ನಾಟಕ ಕಲೆ ಯಾವತ್ತೂ ಸಾಯುವುದಿಲ್ಲ. ಸಾವಿರಾರು ವರ್ಷಗಳಿಂದ ನಾಟಕ ಕಲೆ ಇದೆ. ಮುಂದೆ ಸಾವಿರಾರು ವರ್ಷ ನಾಟಕ ಕಲೆ ಜೀವಂತವಾಗಿರುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೂಡಾ ಮಾಜಿ ಅಧ್ಯಕ್ಷ ಹಾಗೂ ಕೈಗಾರಿಕೋದ್ಯಮಿ ಚಂದ್ರಶೇಖರ್ ಮಾತನಾಡಿ, “ಹೆಗ್ಗೋಡಿನ ನೀನಾಸಂ ಪ್ರತಿ ವರ್ಷ ಪರಿಣಾಮಕಾರಿ ನಾಟಕಗಳನ್ನು ಆಡಿಸುತ್ತಾ ಬಂದಿದೆ. ಸೀರಿಯಲ್ ಗಳ ಹಾವಳಿ ನಡುವೆಯೂ ಇಷ್ಟೊಂದು ಜನರು ನಾಟಕ ನೋಡಲು ಬಂದಿರುವುದು ಖುಷಿಯ ಸಂಗತಿ ಎಂದರು. ನೀನಾಸಂ ನಿಂದ ಕಲಿತು ಬಂದವರು ದೊಡ್ಡ ದೊಡ್ಡ ನಾಟಕ ಮಂಡಳಿಯಲ್ಲಿ ಕೆಲಸ ಮಾಡುತ್ತಿದ್ದರು. ಹಾಗೆಯೇ ಸೀರಿಯಲ್, ಸಿನಿಮಾಗಳಲ್ಲೂ ಕೂಡ ಕೆಲಸ ನಿರ್ವಹಿಸುತ್ತಿದ್ದಾರೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಸದಸ್ಯ ಎಂ.ಆರ್. ಹುಲಿನಾಯ್ಕರ್ ಮಾತನಾಡಿ, “ಸಾಮಾಜಿಕ ಹಾಗೂ ಪೌರಾಣಿಕ ನಾಟಕಗಳ ನಡುವೆ ವಿಭಿನ್ನ ನಾಟಕಗಳನ್ನು ತುಮಕೂರಿನ ಝೆನ್ ಟೀಮ್ ತೋರಿಸುತ್ತಿದೆ. ನೀನಾಸಂ, ರಂಗಾಯಣ, ರಾಷ್ಟ್ರೀಯ ನಾಟಕ ಶಾಲೆಗಳ ನಾಟಕಗಳನ್ನು ತುಮಕೂರಿನಲ್ಲಿ ಝೆನ್ ಟೀಮ್ ಆಯೋಜಿಸುತ್ತಿರುವುದು ಶ್ಲಾಘನೀಯ” ಎಂದರು.

ಕಾರ್ಯಕ್ರಮದಲ್ಲಿ ಝೆನ್ ಟೀಮ್ ನ ಉಗಮ ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್. ಪಲ್ಲವಿ ನಾಗೇಂದ್ರ ಇನ್ನಿತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...