ತುಮಕೂರು | ಗಾಳಿಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Date:

ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ತುಮಕೂರಿನಲ್ಲಿ ಶುಕ್ರವಾರ ಸಂಜೆ ಸುರಿದ ಮಳೆಗೆ ಮರ ಸೇರಿದಂತೆ ಲೈಟ್‌ಕಂಬ್‌ಗಳು ನೆಲಕ್ಕುರುಳಿವೆ.

ತುಮಕೂರಿನ ರೈಲ್ವೆ ನಿಲ್ದಾಣದ ಮುಂಭಾಗ ಹಾಗೂ ನಿಲ್ದಾಣದ ರಸ್ತೆಯಲ್ಲಿ ಮರಗಳು ಬುಡಸಮೇತ ಬಿದ್ದುಹೋಗಿವೆ. ಬಿರುಗಾಳಿ ಸಹಿತ ಮಳೆಗೆ ನಾಲ್ಕು ವಿದ್ಯುತ್ ಕಂಬಗಳು ಕೂಡ ರಸ್ತೆಗೆ ಬಿದ್ದಿವೆ. ಈ ವೇಳೆ, ವಿದ್ಯುತ್ ಪ್ರವಹಿಸುತ್ತಿತ್ತು ಎನ್ನಲಾಗಿದೆ.

ಮಳೆಗೆ ಏಕಾಏಕಿ ವಿದ್ಯುತ್ ಕಂಬಗಳು ಧರೆಗುರುಳಿದ ಕಾರಣ ಅಲ್ಲಿಯೇ ಫುಟ್‌ಪಾತ್‌ಗಳಲ್ಲಿ ವ್ಯಾಪಾರ ಮಾಡುತ್ತಿದ್ದ ಬೀದಿಬದಿ ವರ್ತಕರು ಜೀವ ಬಿಗಿ ಹಿಡಿದು ಅಲ್ಲಿಂದ ಓಡಿ ಹೋಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ, ಅನಾಹುತ ಸಂಭವಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈಲ್ವೆ ನಿಲ್ದಾಣದ ಮುಂಭಾಗದಲ್ಲೇ ವಿದ್ಯುತ್ ಕಂಬಗಳು ಬಿರುಗಾಳಿಗೆ ಅರ್ಧಕ್ಕೆ ಮುರಿದು ಎಲ್‌ಐಸಿ ಕಚೇರಿ ಕಡೆಗೆ ಹೋಗುವ ರಸ್ತೆಗೆ ವಿದ್ಯುತ್ ತಂತಿಗಳ ಸಮೇತ ಅಡ್ಡಲಾಗಿ ಬಿದ್ದಿದ್ದರಿಂದ ಈ ರಸ್ತೆಯನ್ನು ಬಂದ್ ಮಾಡಲಾಗಿತ್ತು. ಪ್ರವಾಸಿ ಮಂದಿರದ ಮುಂಭಾಗದಲ್ಲಿರುವ ವಸತಿಗೃಹಗಳ ಪಕ್ಕದಲ್ಲಿದ್ದ ಮರ ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದರಿಂದ ಸಮೀಪದಲ್ಲೇ ಇದ್ದ 2 ವಿದ್ಯುತ್ ಕಂಬ ಧರೆಗುರುಳಿವೆ. ಈ ಮಾರ್ಗದಲ್ಲಿ ವ್ಯಾಪಾರ ಮಾಡುತ್ತಿದ್ದ ಫುಟ್‌ಪಾತ್ ವ್ಯಾಪಾರಿಗಳು ತಕ್ಷಣ ತಮ್ಮ ಜೀವ ರಕ್ಷಣೆಗಾಗಿ ಅಂಗಡಿಗಳಿಂದ ಹೊರ ಓಡಿ ಬಂದಿದ್ದಾರೆ. ಆದರೆ ಯಾವುದೇ ರೀತಿಯ ಅನಾಹುತ ಸಂಭವಿಸಿಲ್ಲ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 65 ಕೆಜಿಗೂ ಅಧಿಕ ಗಾಂಜಾ ವಶ ; ಇಬ್ಬರ ಬಂಧನ

ಘಟನೆಯ ಸುದ್ದಿ ತಿಳಿದ ಕೂಡಲೇ ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ಬೆಸ್ಕಾಂ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಧರೆಗುರುಳಿರುವ ಮರ ಮತ್ತು ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದು ಕಂಡು ಬಂತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ವಿವಿಧ ಜಯಂತಿ ಆಚರಣೆ ಪೂರ್ವಭಾವಿ ಸಭೆ

ತುಮಕೂರು ಜಿಲ್ಲಾಡಳಿತದಿಂದ ಮಾರ್ಚ್ 23ರಂದು ಶ್ರೀ ದೇವರದಾಸಿಮಯ್ಯ ಜಯಂತಿ, ಮಾರ್ಚ್ 28ರಂದು...