ತುಮಕೂರು | ಎಸ್‌ಸಿ/ಎಸ್‌ಟಿ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳ ಪ್ರತಿಭಟನೆ

Date:

ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಎಸ್‌ಸಿ, ಎಸ್‌ಟಿ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಹಾಸ್ಟೆಲ್ ಅವ್ಯವಸ್ಥೆಗೆ ಬೆಸತ್ತು  ಹಾಸ್ಟೆಲ್‌ಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶನಿವಾರ (ನ.6) ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

ವಿವಿ ಮುಂಭಾಗ ರಾತ್ರೋ ರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಸ್ಟೆಲ್ ಅವ್ಯವಸ್ಥೆ ವಿರುದ್ಧ ಧಿಕ್ಕಾರ ಕೂಗಿದರು. ಸ್ಥಳಕ್ಕೆ ವಿವಿ ಕುಲಪತಿಗಳು ಬಾರದ ಹಿನ್ನೆಲೆ ಬೆಸರಗೊಂಡ ವಿದ್ಯಾರ್ಥಿಗಳು ಡಿಸಿ  ಕಚೇರಿಗೆ ರಾತ್ರಿಯೇ ತೆರಳಲು ಮುಂದಾದರು. ಡಿಸಿ ಕಚೇರಿಗೆ ತೆರಳುವ ಮಧ್ಯೆ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ  ಎಸ್‌ಪಿ ಅಶೋಕ್ ಕೆ.ವಿ ವಿದ್ಯಾರ್ಥಿಗಳನ್ನು ತಡೆದು ಪ್ರತಿಭಟನೆಯನ್ನು ಶಾಂತಗೊಳಿಸಿದರು.

ಡಿಸಿ ಹಾಗೂ ಕುಲಪತಿಗಳೊಂದಿಗೆ ನಾಳೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಈ  ಹಿನ್ನೆಲೆ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟು ನಿಲಯಕ್ಕೆ ವಾಪಾಸ್ ತೆರಳಿದರು. ಪ್ರತಿಭಟನೆ ನಡೆದರೂ ಕಿವಿಗೊಡದ ವಿವಿ ಆಡಳಿತ ಮಂಡಳಿ ವರ್ತನೆಗೆ ಬೇಸತ್ತ ವಿದ್ಯಾರ್ಥಿಗಳು ಡಿಸಿ ಕಚೇರಿಗೆ ತೆರಳಲು ಮುಂದಾದರೂ ಸ್ಥಳೀಯ ಠಾಣೆ ಪೊಲೀಸರಿಗೆ ಮಾಹಿತಿಯೇ ಇರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಸ್ಟೆಲ್‌ನಲ್ಲಿ 250ವಿದ್ಯಾರ್ಥಿಗಳಿದ್ದು ಕೇವಲ 8 ಶೌಚಾಲಯಗಳಿವೆ. ಶೌಚಾಲಯಗಳ ಬಾಗಿಲುಗಳು ಮುರಿದು ಹೋಗಿವೆ. ಅದರ ದುರಸ್ತಿ ಕಾರ್ಯ ಮಾತ್ರ ಆಗಿಲ್ಲ. ಶೌಚದ ಪಿಟ್ ಗುಂಡಿಗಳು ತುಂಬಿ ಉಕ್ಕಿ ವಾಸನೆ ಬೀರುತ್ತಿದೆ. ಇದರಿಂದ ಮೂಗು ಮುಚ್ಚಿಕೊಂಡೇ ಓಡಾಡುವಂತಾಗಿದೆ. ರೋಗದ ಭೀತಿ ಎದುರಾಗಿದೆ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿದಿನ ಮೆನು ಪ್ರಕಾರ ಊಟ ನೀಡುವುದಿಲ್ಲ. ಕಳಪೆ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ಬಳಸಿ ಊಟ  ತಯಾರಿಸುತ್ತಾರೆ. ಕೆಮಿಕಲ್ ಮಿಶ್ರಿತ ಅಡುಗೆ ಎಣ್ಣೆ ಉಪಯೋಗ ಮಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಆರೋಗ್ಯ ಕೆಡುತ್ತಿದೆ. ವಿದ್ಯಾರ್ಥಿಗಳಿಗೆ ಗಂಟಲು ಮತ್ತು ಚರ್ಮ ಸಮಸ್ಯೆ ಕಾಡುತ್ತಿದೆ. ಪೌಷ್ಠಿಕ ಆಹಾರ ಸಿಗದೆ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಲೇಬಲ್ ಇಲ್ಲದ ಅಕ್ಕಿ ಚೀಲ, ಸಣ್ಣ ಗಾತ್ರದ ಕೊಳೆತ ತರಕಾರಿ ಬಳಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಅಪೌಷ್ಠಿಕತೆ ಕಾಡುತ್ತಿದೆ. ನಮ್ಮ ಸಮಸ್ಯೆ ಕೇಳೋರಿಲ್ಲ. ಈ ಕುರಿತು ಹಾಸ್ಟೆಲ್ ವಾರ್ಡನ್‌ಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು.

ಹಾಸ್ಟೆಲ್ ನಿರ್ವಹಣೆ ಹೊತ್ತಿರುವ ಡಾ. ಚಿಕ್ಕಣ್ಣ ಅವರು ಜವಬ್ದಾರಿಯನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಬೆಳಗಿನ ನಿತ್ಯಕರ್ಮಕ್ಕೆ 250ಮಂದಿ ವಿದ್ಯಾರ್ಥಿಗಳಿಗೆ ಕೇವಲ 8 ಶೌಚಾಗೃಹಗಳಿದ್ದೂ ಶೌಚಾಗೃಹ ಇಡೀ ಹಾಸ್ಟೆಲ್ ವ್ಯವಸ್ಥೆಗೆ ಕನ್ನಡಿಹಿಡಿದಂತಿದೆ ಎಂದು ವಿದ್ಯಾರ್ಥಿಗಳು ದೂರಿದರು. ಪ್ರತಿಭಟನೆಯಲ್ಲಿ ವಿವಿ ಹಾಸ್ಟೆಲ್ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...