ತುಮಕೂರು | ಬಾಕಿ ಇರುವ ಎಲ್ಲ ಸಾಲ ಮತ್ತು ಸಬ್ಸಿಡಿ ಅರ್ಜಿಗಳ ಇತ್ಯರ್ಥಕ್ಕೆ ಸೂಚನೆ

Date:

2023ರ ಅಕ್ಟೋಬರ್ ಮಾಹೆಯ ಅಂತ್ಯಕ್ಕೆ ಬಾಕಿ ಇರುವ ಎಲ್ಲ ಸಾಲ ಮತ್ತು ಸಬ್ಸಿಡಿ ಮಂಜೂರಾತಿ ಅರ್ಜಿಗಳನ್ನು ಕಡ್ಡಾಯವಾಗಿ ಇತ್ಯರ್ಥಪಡಿಸಬೇಕು. ಇಲ್ಲದಿದ್ದರೆ ಅಂತಹ ಬ್ಯಾಂಕ್ ಅಧಿಕಾರಿಗಳ ವಿರುದ್ದ ಎಸ್‌ಎಲ್‌ಬಿಸಿ (ರಾಜ್ಯ ಮಟ್ಟದ ಬ್ಯಾಂಕ್‌ಗಳ ಸಮಿತಿ) ಹಾಗೂ ಆರ್‌ಬಿಐಗೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿ ಪ್ರಭು ಹೇಳಿದರು.

ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ನ ಸಹಯೋಗದೊಂದಿಗೆ ಜಿಲ್ಲಾ ಪಂಚಾಯಿತಿಯ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ‘ಜಿಲ್ಲಾ ಮಟ್ಟದ  ಪ್ರಗತಿ ಪರಿಶೀಲನಾ ಸಭೆ ಹಾಗೂ ಜಿಲ್ಲಾ ಸಮಾಲೋಚನೆ ಸಭೆ’ ನಡಸಿದರು. ಪ್ರಧಾನಮಂತ್ರಿ ಮುದ್ರಾ ಯೋಜನೆ(ಪಿಎಂಎಂವೈ), ಎನ್.ಎಲ್.ಎಂ, ಪಿಎಂಇಜಿಪಿ, ಉದ್ಯೋಗಿನಿ, ಪಿಎಂಎವೈ, ಎಪಿವೈ, ಪಿ.ಎಂ ಸ್ವನಿಧಿ ಮತ್ತು ವಸತಿ ಯೋಜನೆ ಮೊದಲಾದ ಯೋಜನೆಗಳಡಿ ವಿವಿಧ ಇಲಾಖೆಗಳಿಂದ ಬ್ಯಾಂಕುಗಳಿಗೆ ಸಲ್ಲಿಸಲಾಗಿರುವ ಅರ್ಜಿಗಳ ಇತ್ಯರ್ಥಕ್ಕೆ ಸಂಬಂಧಿಸಿದ ಮಾಹಿತಿ ಪಡೆದರು.

“ಸಮಾಜದ ಬಡ ಹಾಗೂ ಅಶಕ್ತ ವರ್ಗ, ನಿರುದ್ಯೋಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಕಲ್ಯಾಣಕ್ಕಾಗಿ ಸರ್ಕಾರದಿಂದ ರೂಪಿಸಲ್ಪಟ್ಟಿರುವ ಯೋಜನೆಗಳಡಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಬ್ಯಾಂಕುಗಳು ಅನಗತ್ಯ ವಿಳಂಬ ಮಾಡಬಾರದು. ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ತ್ವರಿತವಾಗಿ ವಿಲೇವಾರಿ ಮಾಡಬೇಕು” ಎಂದು ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯ 330 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಎಲ್ಲ ರ‍್ಯೆತರನ್ನು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಒಳಪಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾಲ ವಿತರಿಸಬೇಕು. ಈಗಾಗಲೇ ಅಂಬೇಡ್ಕರ್ ನಿಗಮ, ಕೈಮಗ್ಗ ಇಲಾಖೆಯ ಯೋಜನೆಗಳಡಿ ಬಾಕಿ ಇರುವ ಅರ್ಜಿಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೆಕು, ಬಡತನ ರೇಖೆಗಿಂತ ಕೆಳಗಿರುವವರು ಆರ್ಥಿಕವಾಗಿ ಸಬಲೀಕರಣ ಹೊಂದಬೇಕೆನ್ನುವುದೇ ಸರ್ಕಾರದ ಉದ್ದೇಶವಾಗಿದ್ದು ಮುದ್ರಾ ಯೋಜನೆ ಮತ್ತು ಸ್ಟಾರ್ಟಪ್ ಗಳಿಗೆ ಸಮರ್ಪಕವಾಗಿ ಸಾಲ ವಿತರಿಸುವ ಮೂಲಕ  ಎಲ್ಲಾ ಬ್ಯಾಂಕ್ ಗಳು ಜಿಲ್ಲೆಯ ಯುವ ಜನತೆಗೆ ಮತ್ತು ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ನೆರವಾಗಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಯೋಜನೆಗಳ  ಅರ್ಹರಿಗೆ ತಲುಪಿಸುವ ಕೆಲಸವನ್ನು ಸೇವಾ ಮನೋಭಾವದಿಂದ ನಿರ್ವಹಿಸಬೇಕು” ಎಂದು ಸೂಚಿಸಿದರು.

ಸಂಸದ ಜಿ.ಎಸ್ ಬಸವರಾಜ್ ಮಾತನಾಡಿ, “ಕೇಂದ್ರ ಸರ್ಕಾರದ ಪ್ರಾಯೋಜಿತ ಸಾಲ ಮತ್ತು ಸಬ್ಸಿಡಿ ಯೋಜನೆಗಳ 2023-24ನೇ ಸಾಲಿನ ಗುರಿಗಳ ಸಾಲಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡುವಲ್ಲಿ ವಿಳಂಬ ಧೋರಣೆ ಅನುಸರಿಸಬಾರದು. ಫಲಾನುಭವಿಗಳಿಗೆ ಸಮರ್ಪಕವಾಗಿ ಸಾಲ ಸಿಗಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ. ಈ ತಿಂಗಳ ಅಂತ್ಯಕ್ಕೆ ಎಲ್ಲವೂ ಸರಿ ಹೋಗಬೇಕು. ಕೆಲವು ಬ್ಯಾಂಕ್ ಅಧಿಕಾರಿಗಳು ಸಾರ್ವಜನಿಕರಿಗೆ ಸಾಲ ಸೌಲಭ್ಯ ನೀಡಲು ಅನವಶ್ಯಕ  ಹೆಚ್ಚಿನ ದಾಖಲಾತಿಗಳನ್ನು ಕೇಳುತ್ತಿರುವುದು ಗಮನಕ್ಕೆ ಬಂದಿದೆ. ಎಲ್ಲಾ ದಾಖಲೆಗಳು ಸರಿಯಾಗಿದ್ದರೂ ತಾಂತ್ರಿಕ ಕಾರಣ ನೀಡಿ ವಿಳಂಬ ಮಾಡಲಾಗುವ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ. ಸಾಮಾಜಿಕ ಸುರಕ್ಷತಾ ಯೋಜನೆಗಳ ಫಲವನ್ನು  ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು” ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ಭಾರತೀಯ ಸ್ಟೇಟ್ ಬ್ಯಾಂಕ್  ಪ್ರಬಂಧಕ ಪ್ರಕಾಶ್ ಮಾತನಾಡಿ, “ಬ್ಯಾಂಕ್‌ಗಳ ಠೇವಣಿಯಲ್ಲಿ 2023 ಜೂನ್ 30ರ ಅಂತ್ಯಕ್ಕೆ 18,280.50 ಕೋಟಿ ಜಮಾ ಆಗಿದೆ. ಮುಂಗಡ ಸಾಲವಾಗಿ 17,702.20 ಕೋಟಿ  ನೀಡಿ ಉತ್ತಮ ಪ್ರಗತಿ  ಸಾಧಿಸಲಾಗಿದ್ದು, ಸಾಲದಲ್ಲಿ ದುರ್ಬಲ ವರ್ಗಗಳಿಗೆ  ಎಸ್‌ಸಿ,ಎಸ್‌ಟಿ ವರ್ಗದವರಿಗೆ ಹಾಗೂ ಅಲ್ಪಸಂಖ್ಯಾತ  ಸಮುದಾಯದವರಿಗೆ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿದ್ದು, ಬ್ಯಾಂಕಿಂಗ್ ಸಾಲ ಸೌಲಭ್ಯ ವಿಸ್ತರಿಸುವ ಕಾರ್ಯ ಚುರುಕುಗೊಳಿಸಲು ಉದ್ದೇಶಿಸಲಾಗಿದೆ” ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಯೋಜನಾ ನಿರ್ದೇಶಕರಾದ ನಾರಯಣಸ್ವಾಮಿ, ನಬಾರ್ಡ್ನ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಭಾ ಹಾಗೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಜಿಲ್ಲಾಧಿಕಾರಿ,  ಕೃಷಿ ಇಲಾಖೆಯ ಜಂಟಿ ನಿದೇಶಕ, ತೋಟಗಾರಿಕೆ ಇಲಾಖೆ ಉಪನಿರ್ದೇಶP, ರೇಷ್ಮೇ ಇಲಾಖೆಯ ಉಪನಿರ್ದೇಶಕರಾದ ರಾಮಕೃಷ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಎನ್‌ಜಿಒಗಳು (ಸರಕಾರೇತರ ಸಂಸ್ಥೆಗಳು)   ಎಲ್ಲಾ ಬ್ಯಾಂಕ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...