ತುಮಕೂರು | ಸಿದ್ದರಾಮಯ್ಯ ಐದು ವರ್ಷ ಅಧಿಕಾರ ಪೂರೈಸುತ್ತಾರೆ: ಸಚಿವ ರಾಜಣ್ಣ

Date:

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಲ್ಲಿಯವರೆಗೆ ಶಾಸಕರ ಬೆಂಬಲ, ಹೈಕಮಾಂಡ್ ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.

ತುಮಕೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷ ಅಧಿಕಾರ ಪೂರೈಸುತ್ತಾರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ರಾಜಣ್ಣ, “ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಕೆ 5 ವರ್ಷ ಪೂರೈಸಬಾರದು” ಎಂದು ಮರು ಪ್ರಶ್ನೆ ಕೇಳಿದರು. ಸಿದ್ದರಾಮಯ್ಯ ಐದು ವರ್ಷ ಅಧಿಕಾರ ಪೂರೈಸುತ್ತಾರೆ ಎಂದು ಹೇಳಿದರು.

ಕೊಬ್ಬರಿ ಬೆಲೆ: ಕೇಂದ್ರ ಹೆಚ್ಚಳ ಮಾಡಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸರ್ಕಾರ ಮೊದಲು ಕ್ವಿಂಟಲ್ ಕೊಬ್ಬರಿಗೆ ₹12,000 ಬೆಲೆ ನೀಡಲಿ. ನಂತರ ರಾಜ್ಯ ಸರ್ಕಾರ ₹3,000 ಸೇರಿಸಿ ಕ್ವಿಂಟಾಲ್‌ಗೆ ₹15,000 ನೀಡುತ್ತದೆ. ನಫೆಡ್ ಮೂಲಕ ₹15,000ಕ್ಕೆ ರೈತರಿಂದ ಕೊಬ್ಬರಿ ಖರೀದಿಸಲು ಕೇಂದ್ರ ಸರ್ಕಾರ ಪ್ರಕ್ಯೂರ್‌ಮೆಂಟ್ ಮಾಡಲು ಅನುಮತಿ ನೀಡಬೇಕು. ಪ್ರಕ್ಯೂರ್‌ಮೆಂಟ್ ಮಾಡಿದರೆ ಕಳೆದ ಬಾರಿಯಂತೆ ₹15,000ಕ್ಕೆ ರೈತರಿಂದ ನಫೆಡ್ ಮೂಲಕ ಕೊಬ್ಬರಿ ಖರೀದಿ ನಡೆಯಲಿದೆ. ನಮ್ಮ ಸರ್ಕಾರ ಸದಾ ರೈತರು, ಬಡವರ ಪರವಾಗಿದೆ” ಎಂದರು.

“ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಕಳೆದ ವರ್ಷವೂ ಟ್ಯಾಬ್ಲೋನಲ್ಲಿ ನಾರಾಯಣ ಗುರುಗಳ ಭಾವಚಿತ್ರ ನಿರಾಕರಣೆ ಮಾಡಲಾಗಿತ್ತು. ಜನರು ಇದಕ್ಕೆ ಪ್ರತಿಕ್ರಿಯೆಯನ್ನೂ ನೀಡಿದ್ದರು. ರಾಷ್ಟ್ರೀಯ ಹಬ್ಬಗಳಲ್ಲಿ ಸಮಾಜ ಸುಧಾರಕರಿಗೆ ಅನ್ಯಾಯ ಮಾಡುತ್ತಿರುವುದನ್ನು ನೋಡುತ್ತಿದ್ದೇವೆ” ಎಂದರು.

ಮುಂದಿನ ವರ್ಷಗಳಲ್ಲಿ ಗೋಡ್ಸೆ, ಟ್ಯಾಬ್ಲೋ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ. ತಳಸಮುದಾಯದಿಂದ ಬಂದಿರುವ ಸಮಾಜ ಸುಧಾರಕ ನಾರಾಯಣಗುರುಗಳ ನಿರಾಕರಣೆ ಮಾಡಿರುವುದು ಕನ್ನಡಿಗರಿಗೆ ಮಾಡಿರುವ ಘೋರ ಅಪಮಾನ” ಎಂದರು.

“ನಮ್ಮ ಕಾಂಗ್ರೆಸ್ ದಲಿತರ ಹೆಸರೇಳಿಕೊಂಡು ರಾಜಕಾರಣ ಮಾಡುತ್ತಿಲ್ಲ. ಎಲ್ಲ ಬಡವರ ಪರವಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಬಡವರು, ದಲಿತರು ಸೇರಿದಂತೆ ಎಲ್ಲ ವರ್ಗದ ಶೋಷಿತರ ಪರವಾಗಿದೆ” ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಕೆ ಎನ್ ರಾಜಣ್ಣ ಅವರು, “ಕುಮಾರಸ್ವಾಮಿ ಯಾರ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ” ಎಂದು ಪ್ರಶ್ನಿಸಿದರು.

“ನಾವು ಇನ್ನೊಬ್ಬರ ಕಡೆ ಒಂದು ಬೊಟ್ಟು ಮಾಡಿ ತೋರಿಸಿ ಟೀಕೆ ಮಾಡಿದರೆ, ಇನ್ನು ಮೂರು ಬೊಟ್ಟುಗಳು ನಮ್ಮ ಕಡೆ ತೋರಿಸುತ್ತವೆ. ಇದನ್ನು ನಾವುಗಳು ಬೇರೆಯವರ ಬಗ್ಗೆ ಮಾತನಾಡುವ ಮುನ್ನ ಅರ್ಥ ಮಾಡಿಕೊಳ್ಳಬೇಕು” ಎಂದರು.

“ಕಾಂಗ್ರೆಸ್ ಸಮುದ್ರ ಇದ್ದಂತೆ. ಸಮುದ್ರಕ್ಕೆ ಶುದ್ಧ ಗಂಗಾ ನದಿಯ ನೀರು ಹರಿದು ಬರುತ್ತದೆ. ಹಾಗೆಯೇ ಚರಂಡಿ ನೀರೂ ಸಹ ಹರಿದು ಬರುತ್ತದೆ. ಹಾಗಾಗಿ ನಮ್ಮ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತಿಸುತ್ತೇವೆ” ಎಂದು ಸಚಿವ ಕೆ ಎನ್ ರಾಜಣ್ಣ ಸುದ್ದಿಗಾರರಿಗೆ ಹೇಳಿದರು.

“ಕಾಂಗ್ರೆಸ್ ಪಕ್ಷಕ್ಕೆ ಮುದ್ದಹನುಮೇಗೌಡ, ಮಾಜಿ ಸಚಿವ ವಿ ಸೋಮಣ್ಣ ಸೇರಿದಂತೆ ಯಾರೇ ಬಂದರೂ ಸ್ವಾಗತಿಸುತ್ತೇವೆ. ಆದರೆ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರ ಅಂತಿಮವಾಗಿ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ನಾಲೆಗೆ ನೀರು ಹರಿಸುವಂತೆ ಆಗ್ರಹ

“ಮುದ್ದಹನುಮೇಗೌಡರು ಯಾವುದೇ ರಾಜಕೀಯ ವಿಚಾರದ ಬಗ್ಗೆ ಚರ್ಚೆ ಮಾಡಲು ನನ್ನನ್ನು ಭೇಟಿ ಮಾಡಿಲ್ಲ. ಬ್ಯಾಂಕ್‌ನಿಂದ ಸಾಲ ಪಡೆಯುವ ವಿಚಾರವಾಗಿ ಚರ್ಚಿಸಲು ಭೇಟಿ ಮಾಡಿದ್ದಾರೆ. ಇದಕ್ಕೆ ಯಾವುದೇ ರೀತಿಯ ರಾಜಕೀಯ ಲೇಪ ಬಳಿಯುವ ಅವಶ್ಯಕತೆ ಇಲ್ಲ” ಎಂದರು.

“ನಾನು ಇಂದು ಸಹಕಾರ ಸಚಿವ ಕೆ ಎನ್ ರಾಜಣ್ಣನವರನ್ನು ಭೇಟಿ ಮಾಡಿರುವುದು ಸಾಲ ಪಡೆಯುವ ವಿಚಾರವಾಗಿ ಚರ್ಚಿಸಲು ಅಷ್ಟೇ. ಯಾವುದೇ ರಾಜಕೀಯ ವಿಷಯಗಳ ಕುರಿತು ಮಾತನಾಡಿಲ್ಲ” ಎಂದು ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ ಸ್ಪಷ್ಟಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಶಾಸಕ ಹೆಚ್. ನಿಂಗಪ್ಪ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...