ತುಮಕೂರು | ಕೊಬ್ಬರಿ ಬೆಳೆಗಾರರ ಹಿತ ಮರೆತ ರಾಜ್ಯ ಸಂಸದರು; ಕೋಡಿಹಳ್ಳಿ ಚಂದ್ರಶೇಖರ್ ಕಿಡಿ

Date:

ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಸಂಸದರ ನಿರ್ಲಕ್ಷದಿಂದಾಗಿ ಕರ್ನಾಟಕದಲ್ಲಿ ಕೇಂದ್ರ ಸರ್ಕಾರವೇ ತಮಿಳುನಾಡು ರೀತಿ ಕೊಬ್ಬರಿ ಖರೀದಿ ಕೇಂದ್ರ ತೆರೆಯಲು ನಿರ್ಲಕ್ಷ್ಯ ತೋರಿದ್ದು, ರಾಜ್ಯದಿಂದ ಆಯ್ಕೆಯಾಗಿ ಹೋಗಿರುವ 28ಜನ ಸಂಸದರು ಕೊಬ್ಬರಿ ಬೆಳೆಗಾರರ ಹಿತ ಮರೆತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ರೈತ ಸಂಘ ಮತ್ತು ಹಸಿರುಸೇನೆ ಕೊಬ್ಬರಿ ಕೊಳ್ಳಲು ನಫೆಡ್ ಕೇಂದ್ರ ತೆರೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಯೋಜಿಸಿರುವ ಅಹೋರಾತ್ರಿ ಧರಣಿಯ 11ನೇ ದಿನ ಪೂರೈಸಿದ್ದು, ಜ.18ರಂದು ನಡೆದ ಟ್ರಾಕ್ಟರ್ ರ್ಯಾಲಿಯಲ್ಲಿ ಅವರು ಭಾಗಿಯಾಗಿದ್ದರು.

ಜಿಲ್ಲಾಧಿಕಾರಿಗಳಿಗೆ ಈ ವಿಷಯವಾಗಿ ಮನವಿ ಸಲ್ಲಿಸಿ ಅವರು ಮಾತನಾಡಿದರು, ತಮಿಳು ನಾಡಿನ ಸಂಸದ ಒತ್ತಾಸೆಯ ಮೇರೆಗೆ ಕೇಂದ್ರ ಸರ್ಕಾರವೇ ನೇರವಾಗಿ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ತೆರೆದು 88 ಸಾವಿರ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಲು ಮುಂದಾಗಿದೆ. ಆದರೆ, ಕರ್ನಾಟಕಕ್ಕೆ ಮಾತ್ರ ಈ ಅವಕಾಶ ದೊರೆತ್ತಿಲ್ಲ. ಕೊಬ್ಬರಿ ಬೆಂಬಲ ಬೆಲೆ ಕುರಿತು ನಮ್ಮ ರಾಜ್ಯದ ಒಬ್ಬನೇ ಒಬ್ಬ ಸಂಸದ ಸಹ ಮಾತನಾಡಿಲ್ಲ. ಇದು ರಾಜ್ಯದ ದುರಂತ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮಿಳುನಾಡಿನಲ್ಲಿ ಶೇ. 30ರಷ್ಟು ಮಿಲ್ಲಿಂಗ್ ಕೊಬ್ಬರಿಯನ್ನು ಖರೀದಿಸಲು ಅವಕಾಶ ನೀಡಿದೆ. ಆದರೆ, ಕರ್ನಾಟಕಕ್ಕೆ ಮಾತ್ರ ಈ ಅವಕಾಶ ಲಭ್ಯವಾಗಿಲ್ಲ. ಈ ನಿಟ್ಟಿನಲ್ಲಿ ರಾಜ್ಯಸರಕಾರವೂ ನಿಷ್ಕ್ರೀಯವಾಗಿದೆ. ಹಾಗೆಯೇ ಸಂಸದರ ಬಾಯಿಗಳು ಬಂದ್ ಆಗಿವೆ. ಹೊಳು ಕೊಬ್ಬರಿ ಖರೀದಿಗೆ ಅವಕಾಶ ನೀಡಿದರೆ, ಕರ್ನಾಟಕದಲ್ಲಿ ಇರುವ ಸಣ್ಣದು ಮತ್ತು ಸುಕ್ಕು ಕೊಬ್ಬರಿ ಎಲ್ಲವೂ ಸಹ ಮಾರಾಟವಾಗುತ್ತದೆ. ಈ ಅವಕಾಶ ಕಲ್ಪಿಸುವುದು ಸಂಸದರ ಜವಾಬ್ದಾರಿ. ಆದರೆ, ನಮ್ಮ ಸಂಸದರೇನು ಕತ್ತೆ ಕಾಯುತ್ತಿದ್ದಾರಾ ಎಂದು ಪ್ರಶ್ನಿಸಿದರು.

ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯ ರಾಜ್ಯ ಉಪಾಧ್ಯಕ್ಷ ಕೆಂಕೆರೆ ಸತೀಶ್ ಮಾತನಾಡಿ, ಇಡೀ ನಾಡಿಗೆ ನಾಡೇ ಸಂಕ್ರಾತಿ ಹಬ್ಬ ಮಾಡುವಾಗ ರೈತ ಸಂಘದ ಸದಸ್ಯರು ಬೀದಿಯಲ್ಲಿ ಹೋರಾಟದಲ್ಲಿ ನಿರತರಾಗಿದ್ದೇವು. ಸೌಜನ್ಯಕ್ಕೂ ಜಿಲ್ಲೆಯ ಶಾಸಕರಾಗಲಿ, ಸಚಿವರಾಗಲಿ ಮಾತನಾಡಿಸಲಿಲ್ಲ .ಅವರಲ್ಲಿ ಮನುಷ್ಯತ್ವ ಅನ್ನುವುದು ಸತ್ತು ಹೋಗಿದೆ. ಜಾತಿವಾರು ಕಾರ್ಯಕ್ರಮಗಳಾದರೆ ದಂಡನ್ನೇ ಕರೆದುಕೊಂಡು ಹೋಗುವ ಸಚಿವರು, ಸಂಸದರು, ಶಾಸಕರುಗಳು ಕಳೆದ 11ದಿನಗಳಿಂದ ರೈತರು ಬೀದಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ತಿರುಗಿಯೂ ನೋಡಿಲ್ಲ. ಇಂತಹವರಿಗೆ ರೈತರು ಸರಿಯಾದ ಪಾಠ ಕಲಿಸಬೇಕು. ಕಳೆದ ಎರಡು ವರ್ಷಗಳ ನಿರಂತರ ಹೋರಾಟದ ಫಲವಾಗಿ ಕೇಂದ್ರ ಸರ್ಕಾರ ಬೆಂಬಲಬೆಲೆಯಲ್ಲಿ ಖರೀದಿಸಲು ಅವಕಾಶ ನೀಡಿದೆ. ರಾಜ್ಯ ಸರ್ಕಾರ ಪ್ರತಿಕ್ವಿಂಟಾಲ್‌ಗೆ 3ಸಾವಿರ ರೂ. ನೀಡಿ ಖರೀದಿ ಮಾಡಲಿ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಧನಂಜಯ್ ಆರಾಧ್ಯ, ತಿಪಟೂರಿನ ಕೆ.ಟಿ.ಶಾಂತಕುಮಾರ್, ಹಾಸನ ಜಿಲ್ಲಾಧ್ಯಕ್ಷ ಬಾಬು, ಆನೆಕೆರೆ ಬಾಬು, ಮಲ್ಲಿಕಾರ್ಜುನಯ್ಯ, ನಾಗೇಂದ್ರ, ಶಿವರತ್ನಮ್ಮ, ಪ್ರಕಾಶ್, ಶಶಿಕಲಾ, ರಾಜಣ್ಣ,ಕೊರಟಗೆರೆ ಸಿದ್ದರಾಜು, ಸೇರಿದಂತೆ ಸಾವಿರಾರು ರೈತರು ತಮ್ಮ ಟ್ರಾಕ್ಟರ್ ಮತ್ತಿತರರ ವಾಹನಗಳ ಮೂಲಕ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ನಗರದ ಸ್ವಾತಂತ್ರ ಚೌಕದಿಂದ ಹೊರಟ ರೈತರ ಮೆರವಣಿಗೆ ಮಂಡಿಪೇಟೆ ರಸ್ತೆ, ಜೆಸಿ ರಸ್ತೆ ಮೂಲಕ ಟೌನ್‌ಹಾಲ್ ತಲುಪಿ, ಕೆಲ ಕಾಲ ಧರಣಿ ನಡೆಸಿದರು. ಶ್ರೀಶಿವಕುಮಾರಸ್ವಾಮೀಜಿ ಸರ್ಕಲ್, ಬಟವಾಡಿ ತಲುಪಿ, ತದನಂತರ ಕೋತಿ ತೋಪು ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸಮಾವೇಷಗೊಂಡು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಮುಕ್ತಾಯಗೊಂಡಿದ್ದು, ಆಹೋರಾತ್ರಿ ಧರಣಿ ಮುಂದುವರಿದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...