ತುಮಕೂರು | ಟಿ-20 ಮಹಿಳೆಯರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ನಾಯಕಿ ಟಿ.ಸಿ.ದೀಪಿಕಾಗೆ ಅದ್ಧೂರಿ ಸ್ವಾಗತ

Date:

ಟಿ-20 ಮಹಿಳೆಯರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ನಾಯಕಿ ಟಿ.ಸಿ.ದೀಪಿಕಾ ಹಾಗೂ ರಾಜ್ಯದ ಇತರೆ ಇಬ್ಬರು ಮಹಿಳಾ ಆಟಗಾರ್ತಿಯರನ್ನು ನಗರದಲ್ಲಿ ಭಾನುವಾರ ಅದ್ಧೂರಿ ಮೆರವಣಿಗೆಯೊಂದಿಗೆ ಸ್ವಾಗತಿಸಿ, ಸನ್ಮಾನಿಸಲಾಯಿತು.

ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದಿಂದ ಆಯೋಜಿಸಿದ್ದ ಈ ಅಭಿನಂದನಾ ಸಮಾರಂಭದ ಅಂಗವಾಗಿ ಬೆಳಗ್ಗೆ ಪುರಭವನ ವೃತ್ತದಿಂದ ತಂಡದ ನಾಯಕಿ ಟಿ.ಸಿ.ದೀಪಿಕ, ಕೊರಟಗೆರೆ ತಾಲ್ಲೂಕಿನ ಕಾವ್ಯ ಹಾಗೂ ಶಿವಮೊಗ್ಗದ ಕಾವ್ಯ ಈ ಮೂವರನ್ನು ಬೆಳ್ಳಿರಥದಲ್ಲಿ ಕೂರಿಸಿ ಬಾಲಭವನದವರೆಗೆ ಮೆರವಣಿಗೆ ಮೂಲಕ ಕರೆತರಲಾಯಿತು. ಜಾನಪದ ಕಲಾತಂಡಗಳ ವೈಭವದೊಂದಿಗೆ ಸಾವಿರಾರು ಜನ ಈ ಸಂಭ್ರಮದಲ್ಲಿ ಭಾಗಿಯಾದರು.

ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಚಿತ್ರದುರ್ಗ ಕ್ಷೇತ್ರ ಸಂಸದರಾದ ಗೋವಿಂದ ಕಾರಜೋಳ ಅವರು ಟಿ.ಸಿ.ದೀಪಿಕ ಅವರ ತಂಡ ಕೊಲಂಬೋದಲ್ಲಿ ನೇಪಾಳದ ಜೊತೆ ಸೆಣಸಾಡಿ ಭಾರತಕ್ಕೆ ಜಯ ತಂದುಕೊಟ್ಟಿದ್ದಾರೆ. ಅಂಧ ಮಕ್ಕಳಾಗಿಯೂ ಇವರ ಸಾಧನೆ ಅಪ್ರತಿಮವಾದುದು. ಈ ಜಿಲ್ಲೆಯ ಮಗಳಾಗಿ ರಾಜ್ಯ ಮತ್ತು ರಾಷ್ಟçವನ್ನು ಪ್ರತಿನಿಧಿಸಿರುವ ದೀಪಿಕ ಈ ದೇಶದ ಹೆಮ್ಮೆಯ ಹೆಣ್ಣು ಮಗಳು ಎಂದು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002660665

ಬಾಲ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ಕಣ್ಣಿನ ತೊಂದರೆ ಇದ್ದರೂ ಈ ಹೆಣ್ಣು ಮಕ್ಕಳ ಸಾಧನೆ ಅನನ್ಯವಾದದ್ದು. ಇವರ ಸಾಧನೆ ಇತರರಿಗೆ ಸ್ಪೂರ್ತಿಯಾಗಬೇಕು. ಇಡೀ ರಾಷ್ಟçವನ್ನು ಪ್ರತಿನಿಧಿಸಿರುವ ಹೆಣ್ಣು ಮಕ್ಕಳಲ್ಲಿ ತಂಡದ ನಾಯಕಿ ಈ ಜಿಲ್ಲೆಯವರು ಎಂಬುದು ನಮ್ಮ ಹೆಮ್ಮೆ. ಕಾಡುಗೊಲ್ಲ ಸಮುದಾಯದ ಬಡ ಕುಟುಂಬದ ಹೆಣ್ಣು ಮಗಳ ಈ ಸಾಧನೆಯನ್ನು ನಾವೆಲ್ಲಾ ಸ್ಮರಿಸಬೇಕು. ಇವರ ಜೊತೆ ಆಟವಾಡಿರುವ ರಾಜ್ಯದ ಇತರರನ್ನೂ ಇಲ್ಲಿ ಕರೆಸಿ ಅಭಿನಂದಿಸುತ್ತಿರುವುದು ಶ್ಲಾಘನೀಯ ಎಂದರು.

ಕರ್ನಾಟಕದಲ್ಲಿ ಕಾಡುಗೊಲ್ಲರು ಅಕ್ಷರಶಃ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹಿಂದೆ 80ರ ದಶಕದಿಂದಲೂ ಈ ಸಮುದಾಯಕ್ಕೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸುವ ಕೆಲಸ ಆಗಬೇಕಿದೆ. ಪರಿಶಿಷ್ಟ ವರ್ಗಕ್ಕೆ ಸೇರ್ಪಡೆ ಮಾಡಬೇಕೆನ್ನುವ ಹಲವು ದಶಕಗಳ ಕೂಗು ಇನ್ನೂ ಹಾಗೆಯೇ ಉಳಿದಿದ್ದು, ಸಂಘಟನಾತ್ಮಕ ಶಕ್ತಿಯಿಂದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಿದೆ. ಸಮುದಾಯದ ಬೇಡಿಕೆಗಳಿಗೆ ನಾವೂ ಸಹ ಸ್ಪಂದಿಸುತ್ತೇವೆ ಎಂದರು.

ತುಮಕೂರು ಗ್ರಾಮಾಂತರ ಶಾಸಕರಾದ ಬಿ.ಸುರೇಶ್ ಗೌಡ ಅವರು ಮಾತನಾಡಿ ಈ ರಾಜ್ಯದ 44 ತಾಲ್ಲೂಕುಗಳಲ್ಲಿ ಕಾಡುಗೊಲ್ಲರು ನಿರ್ಣಾಯಕವಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಈ ಸಮುದಾಯಕ್ಕೆ ನ್ಯಾಯ ಸಿಗಬೇಕಾಗಿದೆ. ಎಸ್ಟಿ ವರ್ಗಕ್ಕೆ ಸೇರ್ಪಡೆ ಮಾಡಬೇಕೆನ್ನುವ ವಿಚಾರವಾಗಿ ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ ಸೇರಿದಂತೆ ಹಲವರು ಈ ಹಿಂದೆ ಚರ್ಚಿಸಿ, ಕೇಂದ್ರದೊAದಿಗೆ ಮಾತನಾಡಿದ್ದಾರೆ. ಎಲ್ಲ ಅರ್ಹತೆಯೂ ಇರುವುದರಿಂದ ಖಂಡಿತವಾಗಿಯೂ ಈ ಸಮುದಾಯ ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಯಾಗುವ ಆಶಾಭಾವನೆ ಇದೆ. ಇದಕ್ಕಾಗಿ ನಾವೂ ಸಹ ಕೆಲಸ ಮಾಡುತ್ತೇವೆ ಎಂದರು.

1002660666

ವನಕಲ್ ಮಠದ ಶ್ರೀ ಬಸವ ರಮಾನಂದ ಸ್ವಾಮಿಗಳು ಆಶೀರ್ವಚನ ನೀಡಿ ಮಾತನಾಡಿ ಕಾಡುಗೊಲ್ಲ ಸಮುದಾಯ ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಜನಾಂಗವಾಗಿದೆ. ಈ ಸಮುದಾಯಕ್ಕೆ ಉನ್ನತ ಶಿಕ್ಷಣ ಬೇಕಾಗಿದೆ. ಸಂಘವು ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದು, ಕೆಲವು ತಾಲ್ಲೂಕುಗಳಲ್ಲಿ ಕೌಶಲ್ಯ ತರಬೇತಿ ಕೇಂದ್ರ ತೆರೆಯಲು ಮುಂದಾಗಿರುವುದು ಸಂತಸದ ವಿಚಾರ. ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಅಭಿವೃದ್ಧಿಯಾದರೆ ಮಾತ್ರ ಈ ಸಮುದಾಯ ಮುಂದೆ ಬರಲು ಸಾಧ್ಯವಿದೆ ಎಂದ ಅವರು, ಕಾಡುಗೊಲ್ಲ ಸಮುದಾಯದಲ್ಲಿ ಒಬ್ಬರೂ ವಿಧಾನ ಪರಿಷತ್ ಸದಸ್ಯರಿಲ್ಲ. ಸರ್ಕಾರ ಈ ಕೊರತೆಯನ್ನು ನೀಗಿಸಬೇಕಾಗಿದೆ ಎಂದರು.

ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ಬಿಬಿಎಂಪಿ ರಾಜಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಕಾಡುಗೊಲ್ಲ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಸಮುದಾಯಕ್ಕೆ ಹಲವು ಸೌಲಭ್ಯಗಳು ಸಿಗಬೇಕಾಗಿದೆ. ಸರ್ಕಾರಗಳು ಈ ನಿಟ್ಟಿನಲ್ಲಿ ಮನಸ್ಸು ಮಾಡಿ ಈ ಜನಾಂಗವನ್ನು ಮುಖ್ಯವಾಹಿನಿಗೆ ತರಬೇಕಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯರಾದ ನಾಗರಾಜ ಯಾದವ್ ಸಂಘದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು. ಇದಕ್ಕೂ ಮುನ್ನ ಮೆರವಣಿಗೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾಜಿ ಸಚಿವರು, ಶಾಸಕರಾದ ಕೆ.ಎನ್.ರಾಜಣ್ಣ ಶುಭ ಕೋರಿ ಮಾತನಾಡಿದರು. 

ಸನ್ಮಾನಿತರಾಗಿ ದೀಪಿಕಾ ಮಾತನಾಡಿದರು. ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ಜಿಲ್ಲಾಧ್ಯಕ್ಷ ದೊಡ್ಡೇಗೌಡ್ರು, ಗೌರವಾಧ್ಯಕ್ಷ ಎಸ್.ಡಿ.ಬಸವರಾಜ್, ರಾಜ್ಯ ಸಂಘದ ಮುಖಂಡರಾದ ಜಿ.ಡಿ.ಪ್ರಭುದೇವ್, ಬಸವರಾಜು, ಜಿಲ್ಲಾ ಸಂಘದ ಗಂಗಾಧರ್, ತಿಪ್ಪಯ್ಯ ಮುಂತಾದವರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಎಡೆಮುರಿ ಕಟ್ಟಿದ ಪೊಲೀಸರು

 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ತಾನು ಹೋದ ಕಡೆಯಲ್ಲೆಲ್ಲ ಉದ್ದೇಶ ಪೂರ್ವಕವಾಗಿ...

ತುಮಕೂರು | ನುಡಿದಂತೆ ನಡೆದ ಜಿಲ್ಲಾಡಳಿತ : ಮೆದುಳು ಕ್ಯಾನ್ಸರ್ ಬಾಲಕಿಗೆ ಆಧಾರ್ ಮತ್ತು ಬಿಪಿಎಲ್ ಕಾರ್ಡ್

 ಆಧಾರ್ ಕಾರ್ಡ್ ತಿದ್ದುಪಡಿ ತಾಂತ್ರಿಕ ಸಮಸ್ಯೆಯಿಂದ ಪರದಾಡಿದ್ದ ಮೆದುಳು ಕ್ಯಾನ್ಸರ್ ಪೀಡಿತ...

ದಾವಣಗೆರೆ | ಕೇಂದ್ರ ಸಚಿವ ವಿ. ಸೋಮಣ್ಣರಿಂದ  ತುಮಕೂರು ಹೊಸ ರೈಲ್ವೆ ಮಾರ್ಗ ಪರಿಶೀಲನೆ

ದಾವಣಗೆರೆ ಸಮೀಪದ ತೋಳಹುಣಸೆ ರೈಲ್ವೆ ನಿಲ್ದಾಣದಿಂದ ದಾವಣಗೆರೆ–ತುಮಕೂರು ಹೊಸ ರೈಲ್ವೆ ಮಾರ್ಗದ ಪರಿಶೀಲನೆಯನ್ನು...

ತುಮಕೂರು | ಕೆರೆಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಶಂಕೆ

ಡಿಪ್ಲಮಾ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು...