ತುಮಕೂರು | ಸ್ಮಶಾನ ಜಾಗ ಕೇಳಿದ ದಲಿತ ನಾಯಕನ ಹೊರದಬ್ಬಲು ಸೂಚಿಸಿದ ತಹಶೀಲ್ದಾರ್; ಅನಿರ್ದಿಷ್ಟಾವಧಿ ಧರಣಿ ಕುಳಿತ ಮುಖಂಡರು

Date:

ಮಂಜೂರಾಗಿರುವ ಸ್ಮಶಾನ ಭೂಮಿ ಹಸ್ತಾಂತರ ಮಾಡಿಕೊಡುವಂತೆ ಮನವಿ ಮಾಡಲು ಮುಂದಾದ ದಲಿತ ಮುಖಂಡರನ್ನು ನಿಂದಿಸಿದ್ದು, ʼಕೆಲಸಕ್ಕೆ ಬಾರದವರನ್ನು ಹೊರದಬ್ಬಿʼ ಎಂದು ಸೂಚಿಸಿ ಅವಮಾನಿಸಿದ್ದಾರೆ. ಅಲ್ಲದೆ ದಲಿತರನ್ನು ನಿರ್ಲಕ್ಷಿಸಿದ ಸಮಾಜ ಕಲ್ಯಾಣಾಧಿಕಾರಿಯನ್ನು ಪ್ರಶ್ನಿಸಿದ ಮುಖಂಡರ ವಿರುದ್ಧವೂ ಪೊಲೀಸ್ ದೂರು ನೀಡಿದ್ದಾರೆ.

ಈ ಎಲ್ಲ ದಲಿತ ವಿರೋಧಿ ಆಡಳಿತ ಧಿಕ್ಕರಿಸಿ ಗುಬ್ಬಿ ಪಟ್ಟಣದ ತಾಲೂಕು ಕಚೇರಿ ಎದುರು ದಲಿತಪರ ಸಂಘಟನೆಗಳ ಒಕ್ಕೂಟ ಅನಿರ್ದಿಷ್ಟಾವಧಿ ಧರಣಿ ನಡೆಸಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿ ತಲುಪಿದ ದಲಿತಪರ ಸಂಘಟನೆಗಳ ಒಕ್ಕೂಟ ಹಾಗೂ ರೈತ ಸಂಘದ ಪದಾಧಿಕಾರಿಗಳು ತಾಲೂಕು ಆಡಳಿತದ ವಿರುದ್ದ ಘೋಷಣೆ ಕೂಗಿ ದಲಿತರನ್ನು ನಿಂದಿಸಿದ ತಹಶೀಲ್ದಾರ್ ಆರತಿ ಅವರ ವಿರುದ್ದ ಕ್ರಮ ಕೈಗೊಳ್ಳಲು ಒತ್ತಾಯಿಸಿ ಸ್ಥಳಕ್ಕೆ ಜಿಲ್ಲಾಧಿಕಾರಿ ಬರಬೇಕು ಎಂದು ಸುದೀರ್ಘ ಎಂಟು ಗಂಟೆಗಳ ಕಾಲ ಧರಣಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿ.ಹೊಸಹಳ್ಳಿ ದಲಿತ ಮುಖಂಡ ರವಿಕುಮಾರ್ ಮಾತನಾಡಿ, “ಸ್ಮಶಾನಕ್ಕೆ ಮಂಜೂರಾದ ಭೂಮಿಯನ್ನು ಸಾರ್ವಜನಿಕರಿಗೆ ಹಸ್ತಾಂತರ ಮಾಡಲು ಕಳೆದ ನಾಲ್ಕು ವರ್ಷಗಳಿಂದ ವಿಳಂಬ ಮಾಡುತ್ತಿದ್ದಾರೆ. ಅಲ್ಲಿ ಆಗಿರುವ ಒತ್ತುವರಿ ತೆರವು ಮಾಡಬೇಕೆಂದು ತಹಶೀಲ್ದಾರ್ ಬಳಿ ಚರ್ಚಿಸಲು ಬಂದ ಸಂದರ್ಭದಲ್ಲಿ ಸ್ಮಶಾನ ಭೂಮಿ ವಿಚಾರವಾಗಿ ಹಾರಿಕೆ ಉತ್ತರ ನೀಡಿದ್ದಾರೆ” ಎಂದು ಆರೋಪಿಸಿದರು.

“ಹೊಸಹಳ್ಳಿ ಉಪಾಧ್ಯಕ್ಷೆ ಪತಿಯಾಗಿ ನನ್ನನ್ನು ಜನರು ಪ್ರಶ್ನಿಸುತ್ತಿದ್ದಾರೆಂದು ಪ್ರಶ್ನಿಸಿದ ವೇಳೆ ತಹಶೀಲ್ದಾರ್ ಆರತಿ ಅವರು ಅಸಡ್ಡೆಯಾಗಿ ವರ್ತಿಸಿ ಅವಹೇಳನವಾಗಿ ಮಾತನಾಡಿದ್ದಾರೆ. ಬಡವನೊಬ್ಬ ಸತ್ತರೆ ಜಾಗವಿಲ್ಲ ಎಂದಾಗ ನಿಮ್ಮ ಮನೆಯಂಗಳದಲ್ಲಿ ಅಂತ್ಯಕ್ರಿಯೆ ಮಾಡಿಕೊಳ್ಳಿ ಎಂದು ಹೇಳಿದ್ದಾರೆ. ಈ ಬಗ್ಗೆ ಕೇಳಿದಾಗ ಹೊರದಬ್ಬಲು ಸೂಚಿಸಿದ್ದಾರೆ” ಎಂದು ತಮ್ಮ ಅಳಲು ತೋಡಿಕೊಂಡರು.

“ನನಗೆ ಆಗಿರುವ ಅವಮಾನಕ್ಕೆ ಕೂಡಲೇ ಉತ್ತರ ನೀಡಬೇಕು. ಜಿಲ್ಲಾಧಿಕಾರಿಯವರು ಬಂದು ಸ್ಮಶಾನ ಭೂಮಿ ಒತ್ತುವರಿ ತೆರವು ಮಾಡಬೇಕು” ಎಂದು ಆಗ್ರಹಿಸಿದರು.

ದಲಿತ ಮುಖಂಡ ಎನ್ ಎ ನಾಗರಾಜು ಮಾತನಾಡಿ, “ಸ್ಮಶಾನ ಜಾಗಕ್ಕೆ ಕಳೆದ ಹಲವು ವರ್ಷಗಳಿಂದ ಬೇಡಿಕೆ ಇಟ್ಟರೂ ಈವರೆಗೆ ಜಮೀನು ನೀಡಿಲ್ಲ. ಜಿ.ಹೊಸಹಳ್ಳಿ ಸ್ಮಶಾನ ಭೂಮಿ ಬಗ್ಗೆ ಮಾತನಾಡಿದ ರವಿಕುಮಾರ್ ಅವರನ್ನು ನಿಂದಿಸಿ ಕೆಲಸಕ್ಕೆ ಬಾರದವರು ಎಂದು ಹೇಳಿರುವುದು ಖಂಡನೀಯ. ದಲಿತ ಸಂಘಟನೆಗಳ ಒಕ್ಕೂಟ ಹೋರಾಟ ಮಾಡುವ ವಿಚಾರ ತಿಳಿದು ತಹಶೀಲ್ದಾರ್ ಉತ್ತರ ನೀಡಲಾಗದ ತಹಶೀಲ್ದಾರ್ ಮೇಡಂ ಫಲಾಯನ ಮಾಡಿದ್ದಾರೆ. ಜತೆಗೆ ಸಮಾಜ ಕಲ್ಯಾಣ ಅಧಿಕಾರಿ ವೀಣಾ ಅವರೂ ಕೂಡ ದಲಿತರ ಬಗ್ಗೆ ಅಸಡ್ಡೆ ತೋರುತ್ತಿದ್ದಾರೆ. ದೀಕ್ಷಾ ಭೂಮಿ ಪ್ರವಾಸ ವೇಳೆ ಪ್ರಶ್ನಿಸಿದ ದಲಿತ ಮುಖಂಡರ ವಿರುದ್ಧ ಪೊಲೀಸ್ ದೂರು ಸಲ್ಲಿಸಿದ್ದಾರೆ. ಇದು ದಲಿತ ವಿರೋಧಿ ನೀತಿಯಾಗಿದೆ” ಎಂದು ಕಿಡಿಕಾರಿದರು.

ಮುಖಂಡ ಚೇಳೂರು ಶಿವನಂಜಪ್ಪ ಹಾಗೂ ರೈತಸಂಘದ ತಾಲೂಕು ಅಧ್ಯಕ್ಷ ವೆಂಕಟೇಗೌಡ ಮಾತನಾಡಿ, “ಹೋರಾಟ ಶಕ್ತಿ ಅರಿತು ಕಚೇರಿಯಿಂದ ಹೊರ ನಡೆದ ತಹಶೀಲ್ದಾರ್ ಉತ್ತರ ನೀಡದೆ, ಪಲಾಯನ ಮಾಡಿದ್ದಾರೆ. ಕೆಲಸ ಮಾಡುವಾಗ ಸಾರ್ವಜನಿಕರನ್ನು ಕಡೆಗಣಿಸುವುದು ಸರಿಯಲ್ಲ. ಸಾರ್ವಜನಿಕ ವಲಯದಲ್ಲಿ ಆಡಳಿತ ಮಾಡಬೇಕಾದ ದಂಡಾಧಿಕಾರಿಗಳು ಅವಹೇಳನ ಮಾತನಾಡಿರುವುದು ವಿಪರ್ಯಾಸ. ದಲಿತರ ಕುಂದು ಕೊರತೆಗಳನ್ನು ಆಲಿಸಬೇಕಾದ ಯಾವುದೇ ಸಭೆ ನಡೆಸಿಲ್ಲ. ಕೇವಲ ಪಹಣಿಯಲ್ಲಿ ಕಾಣುವ ಸ್ಮಶಾನ ವಾಸ್ತವದಲ್ಲಿ ಒತ್ತುವರಿಯಾಗಿದೆ. ತೆರವು ಮಾಡಿ ಹಸ್ತಾಂತರ ಮಾಡುವ ನಿಟ್ಟಿನಲ್ಲಿ ತಹಶೀಲ್ದಾರ್ ವಿಫಲರಾಗಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಆಯಾ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನೂ ನೇರಪಾವತಿಗೆ ಒಳಪಡಿಸುವಂತೆ ಆಗ್ರಹ

ಸಂಜೆ ವೇಳೆ ಪ್ರತಿಭಟನಾ ಸ್ಥಳಕ್ಕೆ ಧಾವಿಸಿದ ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಪ್ರತಿಭಟನಾಕಾರರನ್ನು ಕುರಿತು ಮಾತನಾಡಿ, “ಜಿಲ್ಲಾಧಿಕಾರಿ ಜೊತೆ ಮಾತನಾಡಿ ನಿಮ್ಮ ಸಮಸ್ಯೆ ಬಗ್ಗೆ ಸೂಕ್ತ ಪರಿಹಾರ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದ ಬಳಿಕ ತಾತ್ಕಾಲಿಕವಾಗಿ ಪ್ರತಿಭಟನೆ ಸ್ಥಗಿತಗೊಳಿಸಿದ್ದಾರೆ.

ಧರಣಿಯಲ್ಲಿ ನಾಗರಾಜು, ಬೆಟ್ಟಸ್ವಾಮಿ, ವಿದ್ಯಾಸಾಗರ, ಮಧು ಗುಬ್ಬಿ, ನಾಗಸಂದ್ರ ವಿಜಯಕುಮಾರ್, ಈಶ್ವರಯ್ಯ, ನರಸಿಯಪ್ಪ, ಬಸವರಾಜು, ಶ್ರೀಧರ್ ಸೇರಿದಂತೆ ಹೋಬಳಿ ಮಟ್ಟದ ದಲಿತ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...