ತುಮಕೂರು | ಎಲ್ಲ ಜಾತಿಗಳ ಪರವಾಗಿ ಹೋರಾಟ ಸಾಗಿದೆ: ದಸಂಸ ಸಂಚಾಲಕ

Date:

ಪ್ರೊ‌. ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ 50ವರ್ಷದ ಸಂಭ್ರಮದಲ್ಲಿದೆ. ಬುದ್ಧ, ಬಸವ, ಅಂಬೇಡ್ಕರ್ ರಚಿಸಿ ಸ್ಥಾಪಿಸಿದ ಸಂವಿಧಾನದಡಿಯಲ್ಲಿ ಶೋಷಿತ, ದಮನಿತ, ದಲಿತರ ಪರವಾಗಿ ಸಾಮಾಜಿಕ ನ್ಯಾಯ ಒದಗಿಸಿ ಎಲ್ಲಾ ಜಾತಿಗಳ ಪರವಾಗಿ ಹೋರಾಟ ನಡೆಸುತ್ತಾ ಸಮಿತಿ ಸಾಗಿದೆ ಎಂದು ದಸಂಸ ತುಮಕೂರು ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಹೇಳಿದರು.

ತುಮಕೂರಿನ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ತಿಪಟೂರಿನಲ್ಲಿ ಸ್ಥಾಪಿತವಾಗಿ 46ವರ್ಷ ತುಂಬಿದೆ. ಶೋಷಿತರಾ, ಸಾಮಾಜಿಕ ನ್ಯಾಯಕ್ಕಾಗಿ ಸಾವಿರಾರು ಕಿ.ಮೀ. ಪಾದಯಾತ್ರೆ ನಡೆಸಿ ನ್ಯಾಯ ದೊರಕಿಸಿ ಕೊಟ್ಟಿದ್ದೇವೆ. ಸಮಿತಿಯ ಆದೇಶದಂತೆ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ ಎಂದರು.

ಸಾಮಾಜಿಕ ನ್ಯಾಯಗಳಿಂದ ವಂಚಿತರಾದ ಯಾವುದೇ ಸಮುದಾಯದ ಪರ ಹೋರಾಟ ಮಾಡಲು ಸಮಿತಿ ಸಿದ್ಧವಿದೆ. ಇತ್ತೀಚೆಗೆ ತಮ್ಮ ವೈಯಕ್ತಿಕ ವಿಚಾರಕ್ಕೆ ಧನವಂತರು ದಲಿತರನ್ನು ಜಾತಿನಿಂದನೆ ಪ್ರಕರಣಗಳಿಗೆ ಉಪಯೋಗಿಸಿಕೊಳ್ಳುತ್ತಿದ್ದಾರೆ. ಈ ವಿಚಾರವಾಗಿ ದಲಿತರು ಎಚ್ಚೆತ್ತುಕೊಳ್ಳಬೇಕು, ಸಮಿತಿ ನ್ಯಾಯದ ಪರವಿರುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ದಸಂಸ ಸ್ಥಾಪಿತವಾಗಿ 50ನೇ ವರ್ಷದ ಸಂಭ್ರಮಾಚರಣೆಯಲ್ಲಿದೆ ಈ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಮೊದಲ ಬಾರಿಗೆ ತಾಲೂಕು ಸಂಚಾಲಕನಾಗಿ ಆಯ್ಕೆಯಾದಾಗ ಪಾದಯಾತ್ರೆಯ ಮುಖಾಂತರ, ಹೋರಾಟ ನಡೆಸಿ ಸಾಮಾಜಿಕ ನ್ಯಾಯ ದೊರಕಿಸಿ ಕೊಟ್ಟಿದ್ದೇವು ಎಂದರು.

ತಿಪಟೂರು ತಾಲೂಕು ಸಂಚಾಲಕರಾಗಿ ಮೋಹನ್ ಜಕ್ಕನಹಳ್ಳಿ, ಸಂಘಟನಾ ಸಂಚಾಲಕರಾಗಿ ಮಂಜುನಾಥ್ ಹರಚನಹಳ್ಳಿ, ರಂಗಸ್ವಾಮಿ ಹುಲಿಹಳ್ಳಿ, ಉಗ್ರ ನರಸಿಂಹಯ್ಯ ಯಗಚಿಕಟ್ಟೆ, ಚಂದ್ರಶೇಖರ್ ಗಡಬನಹಳ್ಳಿ, ಚಂದ್ರಶೇಖರ್ ಕರಡಾಳು, ಸುರೇಶ್ ಕರಿಕೆರೆ, ಲೋಕೇಶ್ ಚಿಗ್ಗಾವಿ, ರವೀಶ್ ಮಂಜುನಾಥ್ ಪುರ, ಮೋಹನ್ ಬಾಬು ಬೈರಾಪುರ, ಖಜಾಂಚಿಯಾಗಿ ರಮೇಶ್ ಶಿವಪುರ, ಕಾನೂನು ಸಲಹೆಗಾರರಾಗಿ ವೆಂಕಟೇಶ್, ತಿಪಟೂರು, ಮಹಿಳಾ ಸಂಚಾಲಕಿಯಾಗಿ ಧನಲಕ್ಷ್ಮಿ ಕೊನೇಹಳ್ಳಿ, ಸಂಘಟನಾ ಸಂಚಾಲಕರಾಗಿ ನಂದಿನಿ, ಮಡೆ ನೂರು, ಶಾರದಾ ಕಲ್ಲು ಶೆಟ್ಟಿಹಳ್ಳಿ, ನಗರ ಸಂಚಾಲಕರಾಗಿ ರಮೇಶ್ ಮಾರನಗೆರೆ ನಗರ ಸಂಘಟನಾ ಸಂಚಾಲಕರಾಗಿ, ಮಂಜುನಾಥ್ ಮಾರನಗೆರೆ, ಸಂದೀಪ್ ಮಣಿಕಂಠ ಮುನ್ನು ಕಂಚಾಘಟ್ಟ ಮನೋಜ್ ಲೋಕೇಶ್, ಕಸಬಾ ಹೋಬಳಿ ಸಂಚಾಲಕರಾಗಿ ಗಿರೀಶ್ ಕುಮಾರ್ ನಾಗಹಳ್ಳಿ, ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರುಗಳಾದ ನಾಗತಿಹಳ್ಳಿ ಕೃಷ್ಣಮೂರ್ತಿ, ಶಿವಲಿಂಗಪ್ಪ, ಮುರುಳಿ, ಮಧುಸೂಧನ್, ಧನಲಕ್ಷ್ಮಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...