ತುರುವೇಕೆರೆ | ಚಿರತೆ ದಾಳಿ : ಕುಟುಂಬದವರಿಗೆ ಒಂದು ಲಕ್ಷ ನೀಡಿದ ದೊಡ್ಡಾಘಟ್ಟ ಚಂದ್ರೇಶ್‌

Date:

 ಚಿರತೆ ದಾಳಿಯಿಂದ ಮೃತಪಟ್ಟ ಅರೇಮಲ್ಲೇನಹಳ್ಳಿಯ ಸುಜಾಳ ರವರ ಕುಟುಂಬಕ್ಕೆ ರಾಜ್ಯ ಯುವ ಜೆಡಿಎಸ್‌ ನ ಪ್ರಧಾನ ಕಾರ್ಯದರ್ಶಿ ದೊಡ್ಡಾಘಟ್ಟ ಚಂದ್ರೇಶ್‌ ಒಂದು ಲಕ್ಷ ರೂಗಳ ನೆರವು ನೀಡಿದ್ದಾರೆ.

 ಮೃತಪಟ್ಟ ಸುಜಾತಾರ ಮನೆಗೆ ಧಾವಿಸಿ ಸಾಂತ್ವನ ಹೇಳಿದ ಅವರು ತಾಲೂಕಿನಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಅರೇಮಲ್ಲೆನಹಳ್ಳಿಯಲ್ಲಿ ಆಗಿರುವ ಪ್ರಾಣ ಹಾನಿ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಮೂರ್ನಾಲ್ಕು ಬಾರಿ ಚಿರತೆ ಕಾಟದ ಕುರಿತು ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ಸಲ್ಲಿಸಿದ್ದರೂ ಸಹ ಯಾವುದೇ ಕ್ರಮ ಕೈಗೊಳ್ಳದಿರುವ ಕಾರಣ ಈ ಅನಾಹುತ ಸಂಭವಿಸಿದೆ. ಇದಕ್ಕೆ ಅರಣ್ಯ ಇಲಾಖೆಯೇ ಜವಾಬ್ದಾರಿ ಹೊರಬೇಕು ಎಂದು ದೂರಿದರು. 

 ಸುಜಾತಾ ರವರು ಬಲಿಯಾದ ನಂತರ ಎಚ್ಚೆತ್ತು ಕೊಂಡಿರುವ ಅರಣ್ಯ ಇಲಾಖೆ ಮೊದಲೇ ಜಾಗೃತರಾಗಿದ್ದರೆ ಇಂತಹ ಅನಾಹುತ ಸಂಭವಿಸುತ್ತಿರಲಿಲ್ಲ. ಈಗ ಅರಣ್ಯ ಇಲಾಖೆಯ ಕಾರ್ಯಾಚರಣೆಯಿಂದ ಒಂದು ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಇದು ಸ್ವಾಗತಾರ್ಹವೇ . ಆದರೂ ಸಹ ಇನ್ನೂ ಮೂರ್ನಾಲ್ಕು ಚಿರತೆಗಳು ಇವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಕೂಡಲೇ ಅರಣ್ಯ ಇಲಾಖೆಯವರು ಹೆಚ್ಚು ಬೋನುಗಳನ್ನು ಇಟ್ಟು ಚಿರತೆಗಳನ್ನು ಸೆರೆಹಿಡಿಯಬೇಕೆಂದು ದೊಡ್ಡಾಘಟ್ಟ ಚಂದ್ರೇಶ್‌ ಆಗ್ರಹಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಸರ್ಕಾರದಿಂದ 20 ಲಕ್ಷ ಪರಿಹಾರ ಘೋಷಣೆಯಾಗಿದೆ. ಇದರಲ್ಲಿ 5 ಲಕ್ಷದ ಚೆಕ್‌ ನೀಡಲಾಗಿದೆ. ಉಳಿದ 15 ಲಕ್ಷದ ಪರಿಹಾರವನ್ನು ತಡಮಾಡದೇ ವಿತರಿಸಬೇಕು. ಸುಜಾತಾರ ಕುಟುಂಬ ಅತ್ಯಂತ ಕಡುಬಡತನದಲ್ಲಿದೆ. ಅಲ್ಲದೇ ಇಬ್ಬರು ಮಕ್ಕಳು ಇದ್ದಾರೆ. ಹಾಗಾಗಿ ಮುಖ್ಯಮಂತ್ರಿಗಳು ಇನ್ನೂ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. 

 ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎ.ಬಿ.ಜಗದೀಶ್‌, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸ್ವಾಮಿ, ಪಿ ಎಲ್‌ ಡಿ ಬ್ಯಾಂಕ್‌ ನಿರ್ದೇಶಕ ಜಗದೀಶ್‌, ಮಾಜಿ ಅಧ್ಯಕ್ಷ ಹೇಮಚಂದ್ರು, ಗ್ರಾಮದ ಮುಖಂಡರಾದ ಕೃಷ್ಣೇಗೌಡ, ಲಕ್ಷ್ಮಣ ಗೌಡ, ರವಿಗೌಡ ಸೇರಿದಂತೆ ಹಲವರು ಇದ್ದರು. 

ವರದಿ – ಎಸ್ ನಾಗಭೂಷಣ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುರುವೇಕೆರೆ | ಹೊಣಕೆರೆ ಗೊಲ್ಲರಹಟ್ಟಿಯಲ್ಲಿ ಚಿರತೆ ಪ್ರತ್ಯಕ್ಷ

ತುರುವೇಕೆರೆ ತಾಲೂಕಿನ ಹೊಣಕೆರೆ ಗೊಲ್ಲರಹಟ್ಟಿಯ ತೋಟದ ಸಾಲಿನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಇದರಿಂದಾಗಿ...

ತುರುವೇಕೆರೆ | ಬೋನಿಗೆ ಬಿದ್ದ ಚಿರತೆ : ಜನ ನಿರಾತಂಕ

ತುರುವೇಕೆರೆ  ತಾಲೂಕಿನ ಅರೇಮಲ್ಲೇನಹಳ್ಳಿಯಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ. ಭಾನುವಾರವಷ್ಠೇ ಮಹಿಳೆಯೋರ್ವರನ್ನು ಚಿರತೆ...

ತುರುವೇಕೆರೆ | ಚಿರತೆ ದಾಳಿಗೆ ಮಹಿಳೆ ಬಲಿ ; ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ ರೂ. ತಾತ್ಕಾಲಿಕ ಪರಿಹಾರ ಚೆಕ್ ವಿತರಣೆ : ಎಂ.ಟಿ ಕೃಷ್ಣಪ್ಪ

 ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಚಿರತೆ...

ತುರುವೇಕೆರೆ | ನರೇಗಾ ತಿದ್ದುಪಡಿ ಮಸೂದೆ ಹಿಂಪಡೆಯಲು ಕೆಆರ್‌ಎಸ್‌ ಪಕ್ಷದ ಎಲ್ ಜೀವನ್‌ ಆಗ್ರಹ

ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ(ನರೇಗಾ) ಹೆಸರನ್ನು ತಿದ್ದುಪಡಿ ಮಾಡಿರುವ...