ನಾವೂ ಹಿಂದುಗಳೇ, ಹಿಂದುತ್ವ ವಾದಿಗಳೇ: ಸಚಿವ ಕೆ.ಎನ್ ರಾಜಣ್ಣ

Date:

ಶ್ರೀರಾಮ ಮಂದಿರ ಉದ್ಘಾಟನೆಯ ಆಹ್ವಾನ ನೀಡುವುದರಲ್ಲಿ ತಾರತಮ್ಯ ಆಗಿದೆ. ನಿಜಕ್ಕೂ ಇದನ್ನು ಯಾರೂ ಸಹಿಸಲು ಸಾಧ್ಯವಿಲ್ಲ. ಶ್ರೀರಾಮನನ್ನು ಬಿಜೆಪಿಯವರು ಗುತ್ತಿಗೆ ತೆಗೆದುಕೊಂಡಿಲ್ಲ. ನಾವೂ ಹಿಂದುಗಳೇ, ಹಿಂದುತ್ವ ವಾದಿಗಳೇ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಿಂದೆ ಅಂಬೇಡ್ಕರ್ ಹಿಂದು ಧರ್ಮ ತ್ಯಜಿಸುವಂತೆ ಮಾಡಲಾಗಿತ್ತು. ಈಗ ದೇಶದಲ್ಲಿ ಆದೇ ರೀತಿಯ ವಾತಾವರಣ ಸೃಷ್ಟಿ ಮಾಡಲಾಗುತ್ತಿದೆ. ಬಿಜೆಪಿಯವರಿಗೆ ಯಾರು ಹಿಂದುತ್ವದ ಪವರ್ ಆಫ್ ಅಟಾರ್ನಿ ಕೊಟ್ಟಿಲ್ಲ. ಆದರೆ, ಬಿಜೆಪಿ ಅನಗತ್ಯವಾಗಿ ಈ ವಿಚಾರವಾಗಿ ಗೊಂದಲ ಸೃಷ್ಟಿಯಾಗುತ್ತಿದೆ” ಎಂದು ಆರೋಪಿಸಿದರು.

“ರಾಜಕಾರಣಕೋಸ್ಕರ, ಓಟಿಗೋಸ್ಕರ ಕಾಂಗ್ರೆಸ್ ಸರ್ಕಾರವನ್ನು ಹಿಂದು ವಿರೋಧಿ ಸರ್ಕಾರವೆಂದು ಹೇಳುವುದನ್ನು ನಾವು ಖಂಡಿಸಬೇಕು. ಹಿಂದುತ್ವವನ್ನು ಬಂಡವಾಳ ಮಾಡಿಕೊಂಡು ಬೇರೆ ಹಿಂದುಗಳಿಗೆ ಅವಮಾನ ಮಾಡುತ್ತಿರುವುದು ಸರಿಯಲ್ಲ. ಈ ರೀತಿಯ ಹಿಂದುತ್ವದ ದುರುಪಯೋಗವನ್ನು ನೋಡಿಯೇ ಅಂಬೇಡ್ಕರ್ ಬೌದ್ಧ ಧರ್ಮಕ್ಕೆ ಹೋಗಿದ್ದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹುಬ್ಬಳ್ಳಿ ಕರಸೇವಕನ ಬಂಧಿಸಲು ಆತನ ಮೇಲಿನ ಪ್ರಕರಣಗಳು ಕಾರಣ. ಹದಿಮೂರು ಕೇಸ್‌ಗಳು ಆತನ ಮೇಲಿದೆ. ಅವನೊಬ್ಬನನ್ನು ಬಂಧಿಸಿದ ತಕ್ಷಣ ಎಲ್ಲ ಕರಾಸೇವಕರನ್ನು ಬಂಧಿಸುತ್ತಾರೆ ಎನ್ನುವುದು ಸರಿ ಅಲ್ಲ. ಪೆಂಡಿಂಗ್ ಕೇಸುಗಳನ್ನು ಪರಿಶೀಲನೆ ಮಾಡುವ ವೇಳೆ ಅವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಹಿಂದೂಗಳೊಬ್ಬರಿಂದಲೇ ದೇಶ ಕಟ್ಟಲು ಆಗುವುದಿಲ್ಲ. ಎಲ್ಲ ಧರ್ಮದ ಜನರನ್ನ ಸೇರಿಸಿಕೊಂಡು ದೇಶ ಕಟ್ಟಿರುವುದು. ಈಗ ಪ್ರಸ್ತುತ ಇರುವ ರಾಕೇಟ್ ಟೆಕ್ನಾಲಜಿ ಟಿಪ್ಪು ಟೆಕ್ನಾಲಜಿ ಅಂತಾನೆ ಫೇಮಸ್ ಆಗಿದೆ. ಟಿಪ್ಪುವಿನಿಂದಾಗಿ ರಾಕೇಟ್ ಟೆಕ್ನಾಲಜಿ ಅಭಿವೃದ್ಧಿಪಡಿಸಿದ್ದೇವೆ. ಅಬ್ದುಲ್ ಕಲಾಂ ಕೂಡ ರಾಕೇಟ್ ಟೆಕ್ನಾಲಜಿ ಅಭಿವೃದ್ಧಿಪಡಿಸಿದ್ದಾರೆ” ಎಂದರು.

“ಗಾಂಧೀಜಿ ಕೊಂದ ಗೋಡ್ಸೆನೂ ಕೂಡ ಹಿಂದುನೇ. ಶ್ರೀರಾಮನ ಜಪ ಮಾಡುತ್ತಿದ್ದ ಗಾಂಧಿನ ಗೋಡ್ಸೆ ಕೊಂದ.
ಮೋದಿ ಹೋಗಿ ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠಾಪನೆ ಮಾಡಿದ ತಕ್ಷಣ ನಾವೆಲ್ಲ ನಮ್ಮ ಊರಿನ ರಾಮನನ್ನು ಬಿಟ್ಟು ಅಲ್ಲಿಗೆ ಹೋಗಲ್ಲ. ಬಿಜೆಪಿಯವರ ಶ್ರೀರಾಮ ಎಂದು ಬರೆದುಕೊಳ್ಳಲಿ ನಮಗೇನೂ ಅಡ್ಡಿಯಿಲ್ಲ.
ಶ್ರೀ ರಾಮನನ್ನು ಪರಿಚಯಿಸಿದಂತಹ ವಾಲ್ಮೀಕಿಯ ದೇವಸ್ಥಾನ ಕಟ್ಟಬೇಕೆಂದು ಒತ್ತಾಯ ಮಾಡುತ್ತೇವೆ.
ಈ ಒತ್ತಾಯಕ್ಕೆ ಮೋದಿ ಅವರು ಸ್ಪಂದಿಸಬೇಕು. ಇಲ್ಲದಿದ್ದರೆ ಇಡೀ ದೇಶದಲ್ಲಿ ಹೋರಾಟ ಮಾಡುತ್ತೇವೆ” ಎಂದರು.

“ಗೋಡ್ಸೆ ಹಿಂದೂಗಳು ಮತ್ತು ಮಹಾತ್ಮ ಗಾಂಧಿ ಹಿಂದೂಗಳು ಎಂದು ನಾವು ಬದಲಾವಣೆ ಮಾಡಬೇಕಾಗುತ್ತದೆ.
ಮಹಾತ್ಮ ಗಾಂಧಿ ಅವರ ಪ್ರತಿಪಾದನೆಯ ಹಿಂದುತ್ವ ಬೇರೆ. ಗೋಡ್ಸೆ ಹಿಂದುತ್ವ ಬೇರೆ. ನಾವೆಲ್ಲ ಮಹಾತ್ಮ ಗಾಂಧಿ ಅವರ ಹಿಂದುತ್ವದ ಪ್ರತಿಪಾದಕರು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...