ತುಮುಲ್ ಖುರ್ಚಿ ಪ್ರಕರಣ | ಕೊನೆಗೂ ದಲಿತ ಅಧಿಕಾರಿಗೆ ಚೇರ್ ವ್ಯವಸ್ಥೆ

Date:

ತುಮಕೂರು ಹಾಲು ಒಕ್ಕೂಟದಲ್ಲಿ ಹಣಕಾಸು ವಿಭಾಗದ ಅಧಿಕಾರಿ ವಿನಯ್ ಎಂಬುವವರಿಗೆ  ಚೇರ್ ನೀಡಿಲ್ಲ ಎಂದು ಚೀಲದ ಮೇಲೆ ಕುಳಿತು ಕೆಲಸ ಮಾಡುವುತ್ತಿರುವುದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ವಿನಯ್ ಅವರಿಗೆ ಸೂಕ್ತ ಚೇರು, ಟೆಬಲ್, ಕ್ಯಾಬಿನ್ ವ್ಯವಸ್ಥೆ ಮಾಡಿಕೊಡಲಾಗಿದೆ.

ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸನ್ ಮುಂದೆ ನಿಂತು ವಿನಯ್ ಅವರಿಗೆ ಸುಸಜ್ಜಿತ ಚೇಂಬರ್ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ವಿನಯ್ ಪರಿಸ್ಥಿತಿಯನ್ನರಿತ ತುಮುಲ್ ಎಂಡಿ ಇವತ್ತು ತಾನೇ ವಿನಯ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನರಿತು ವಿನಯ್ ಗೆ ಚೆನ್ನಾಗಿರುವ ಚೇಂಬರ್ ವ್ಯವಸ್ಥೆ ಮಾಡಿಸಿಕೊಟ್ಟಿದ್ದಾರೆ. ಅಲ್ಲದೇ ಬೇರೆ ಏನಾದರು ಸಮಸ್ಯೆ ಇದ್ಯಾ ಎಂದು ವಿಚಾರಿಸಿಕೊಂಡಿದ್ದಾರೆ.   ಇದೊಂದು ಸಣ್ಣ ವಿಚಾರ, ಕೂತು ಬಗೆಹರಿಸಿಕೊಳ್ಳಬಹುದಿತ್ತು,  ನಡೆದೋಗಿದೆ‌ ಇನ್ನು ಮುಂದೆ  ಈ ರೀತಿಯ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತೇವೆ ಜೊತೆಗೆ ವಿನಯ್ ಗೆ ಕಿರುಕುಳ ನೀಡುತ್ತಿದ್ದಾರೆ ಎನ್ನಲಾದ ಮಂಜುನಾಥ್ ಎಂಬ ಅಧಿಕಾರಿ ವಿರುದ್ಧ ಆಡಳಿತ ಮಂಡಳಿ ಗಮನಕ್ಕೆ ತಂದು  ಕ್ರಮ ಕೈಗೊಳ್ಳಲಾಗುವುದು ಎಂದು ತುಮುಲ್ ಎಂಡಿ ಶ್ರೀನಿವಾಸನ್ ಈದಿನ ಡಾಟ್ ಕಾಮ್ ಗೆ ಮಾಹಿತಿ ನೀಡಿದರು.

1002115385

 ಈಗಾಗಲೆ ಎಂಡಿಯವರು ನನ್ನನ್ನ ಕರೆಸಿ ಮಾತನಾಡಿದ್ದಾರೆ. ನಡೆದಿದ್ದೆಲ್ಲಾ ನಮ್ಮ ಎಂಡಿ ಆವರ ಬಳಿ ಹೇಳಿದ್ದೇನೆ, ಈಗ ತಾತ್ಕಾಲಿಕವಾಗಿ ಚೇಂಬರ್ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ನಾಳೆ ಸಂಪೂರ್ಣವಾಗಿ ದೊಡ್ಡ ಟೇಬಲ್ ಹಾಗೂ,‌ ಕುರ್ಚಿಗಳನ್ನು ಕೊಡುತ್ತಾರೆ ಎಂದು ವಿನಯ್ ಹೇಳಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...