ತುಂಗಭದ್ರಾ | ಯಶಸ್ವಿಯಾದ 3ನೇ ಸ್ಟಾಪ್‌ ಗೇಟ್​ ಅಳವಡಿಕೆ ಕಾರ್ಯ; ನಿಟ್ಟುಸಿರು ಬಿಟ್ಟ ರೈತರು

Date:

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್​ಗೇಟ್ ತುಂಡಾಗಿ ನೀರುಪಾಲಾಗಿತ್ತು. ಈ ಬಗ್ಗೆ ಕೂಡಲೇ ಎಚ್ಚೆತ್ತಿದ್ದ ರಾಜ್ಯ ಸರ್ಕಾರ, ಹೊಸ ಸ್ಟಾಪ್​​ಲ್ಯಾಗ್ ಗೇಟ್​ ಅಳವಡಿಸಲು ಸೂಚಿಸಿತ್ತು. ಅದರಂತೆ ಡ್ಯಾಂ​​​ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಮೂರನೇ ಎಲಿಮೆಂಟ್​ ಅನ್ನು ಯಶಸ್ವಿಯಾಗಿ ಅಳವಡಿಸಿದ್ದಾರೆ. ಈ ಮೂಲಕ ಹರಿಯುವ ನೀರನ್ನು ತಡೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಆಗಸ್ಟ್ 10ರಿಂದ ನಿರಂತರವಾಗಿ ನೀರು ಹರಿದು ವ್ಯರ್ಥವಾಗಿ ನದಿಗೆ ಹೋಗುತ್ತಿತ್ತು. ಕ್ರಸ್ಟ್‌ಗೇಟ್ 19 ಕೊಚ್ಚಿಕೊಂಡು ಹೋಗಿದ್ದರಿಂದ ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗಿತ್ತು. ಇದೀಗ ಮೂರನೇ ಎಲಿಮೆಂಟ್ ಕೂಡ ಅಳವಡಿಕೆ ಮಾಡಲಾಗಿದ್ದು, ನೀರನ್ನು ಬಂದ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ರೈತರು ಹಾಗೂ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ರಭಸವಾಗಿ ಹರಿಯುತ್ತಿರುವ ನೀರಿನ ನಡುವೆಯೂ ಶನಿವಾರ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಎರಡು ಬೃಹತ್ ಕ್ರೇನ್‌ಗಳ ನೆರವಿನಿಂದ ಮೂರನೇ ಎಲಿಮೆಂಟ್ ಅಳವಡಿಕೆ ಮಾಡಿದರು. ನಾಲ್ಕು ಅಡಿ ಎತ್ತರದ ಒಟ್ಟು ಐದು ಎಲಿಮೆಂಟ್ ಅಳವಡಿಕೆ ಮಾಡಲಾಗುತ್ತಿದ್ದು, ಶುಕ್ರವಾರ ರಾತ್ರಿ ಮೊದಲ ಎಲಿಮೆಂಟ್ ಅಳವಡಿಕೆಯಾಗಿತ್ತು. ಜಲಾಶಯ ಗೇಟ್ ಹಾಗೂ ಸುರಕ್ಷತಾ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ಮೊದಲ ಕಾರ್ಯಾಚರಣೆ ನಡೆದಿತ್ತು. ಇನ್ನು ಕೂಡ ಎರಡು ಎಲಿಮೆಂಟ್ ಅಳವಡಿಕೆ ಕಾರ್ಯ ಬಾಕಿ ಉಳಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಂಗಭದ್ರಾ ಜಲಾಶಯಕ್ಕೆ ಒಟ್ಟು 32 ಕ್ರಸ್ಟ್ ಗೇಟ್‌ಗಳಿದ್ದು, ಎಲಿಮೆಂಟ್ ಅಳವಡಿಸುವಾಗ 24 ಗೇಟ್ ಮೂಲಕ ನೀರು ಹರಿಸಲಾಗುತ್ತಿತ್ತು. ಹಂತಹಂತವಾಗಿ ಒಂದೊಂದೇ ಗೇಟ್ ಬಂದ್ ಮಾಡಿ ಹೊಸ ಎಲಿಮೆಂಟ್ ಮೇಲೆ ಹೆಚ್ಚು ನೀರು ಹರಿಸಲಾಯಿತು.

WhatsApp Image 2024 08 17 at 5.50.31 PM

ಕೊಚ್ಚಿ ಹೋಗಿದ್ದ ಹಳೆಯ ಗೇಟ್ ಪತ್ತೆ

ನೀರನ್ನು ಬಂದ್ ಮಾಡುವಲ್ಲಿ ಯಶಸ್ವಿಯಾದ ಬಳಿಕ, ಕಳೆದ ಶನಿವಾರ ನೀರಿನ ರಭಸಕ್ಕೆ ನಾಪತ್ತೆಯಾಗಿದ್ದ ಗೇಟ್ ನಂ. 19ರ ಹಳೆಯ ಗೇಟ್ ಅಂತಿಮವಾಗಿ ನೀರಿನ ಕೆಳಭಾಗದಲ್ಲಿ ಪತ್ತೆಯಾಗಿದೆ. ಈ ಗೇಟ್ ಸದ್ಯ ಮೂರು ಭಾಗಗಳಾಗಿ ತುಂಡಾಗಿ ಬಿದ್ದಿರುವುದಾಗಿ ವರದಿಯಾಗಿದೆ.

ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಶನಿವಾರ ಬೆಳಗ್ಗೆ ತುಂಗಭದ್ರಾ ಆಣೆಕಟ್ಟು ಬಳಿ ಸ್ಟಾಪ್ ಗೇಟ್ ಅಳವಡಿಕೆ ಮುಂದುವರಿದ ಕಾಮಗಾರಿ ಪರಿಶೀಲನೆ ನಡೆಸಿದರು. ಶಾಸಕ ಕಂಪ್ಲಿ ಗಣೇಶ್, ಜಿಲ್ಲಾಧಿಕಾರಿ ದಿವಾಕರ್ ಈ ವೇಳೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...