ತುಂಗಭದ್ರಾ ಕ್ರಸ್ಟ್‌ಗೇಟ್ | ಕಳಪೆ ನಿರ್ವಹಣೆಗೈದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಿ: ರೈತ ಮುಖಂಡ ಬಸವರಾಜಪ್ಪ

Date:

ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19ನೇ ಗೇಟನ್ನು ತಕ್ಷಣವೇ ದುರಸ್ತಿ ಮಾಡಬೇಕು, ಕ್ರಸ್ಟ್‌ಗೇಟ್ ಕಳಪೆ ನಿರ್ವಹಣೆ ಮಾಡಿರುವ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯಾಧ್ಯಕ್ಷ ಹೆಚ್.ಆರ್ ಬಸವರಾಜಪ್ಪ ಆಗ್ರಹಿಸಿದ್ದಾರೆ.

ಈ ಸಂಬಂಧ ಹೇಳಿಕೆ ಬಿಡುಗಡೆಗೊಳಿಸಿರುವ ಅವರು, ಕೂಡಲೆ ಗೇಟ್ ಸರಿಪಡಿಸಲು ಮತ್ತು ಮೇಲುಗಡೆ ನೀರು ನಿಲುಗಡೆಗೆ ಕ್ರಮ ವಹಿಸಲು ಸರ್ಕಾರ ಮುತುವರ್ಜಿ ವಹಿಸಬೇಕು. ಕ್ರಸ್ಟ್‌ ಗೇಟ್‌ಗಳ ನಿರಂತರ ಪರಿಶೀಲನೆ ಮತ್ತು ಅಗತ್ಯ ಕ್ರಮವಹಿಸುವಲ್ಲಿ ಆದ ಲೋಪದಿಂದಾಗಿಯೇ ತುಂಗಭದ್ರಾ ಆಣೆಕಟ್ಟೆಯ 19ನೇ ಗೇಟ್ ಚೈನ್ ಲಿಂಕ್ ಮುರಿದು ಬಿದ್ದಿದೆ. ಅಣೆಕಟ್ಟಿನಲ್ಲಿನ ನೀರು ಬರಿದು ಮಾಡುವ ಅವಘಡಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ಕಳೆದ 2019 ರಲ್ಲಿ ಇದೇ ಅಣೆಕಟ್ಟಿನ ಎಡದಂಡೆ ಮೇಲ್ಮಟ್ಟದ ಕಾಲುವೆಯ ಬಳಿ ಗೇಟ್ ಮುರಿದು ಸಣ್ಣ ಪ್ರಮಾಣದ ಅವಘಡ ಉಂಟಾಗಿ ಅಪಾರ ಪ್ರಮಾಣದ ನೀರು ಪೋಲಾದ ಅನುಭವ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳಲ್ಲಿದ್ದರೂ ಕೂಡ ಸೂಕ್ತ ನಿರ್ವಹಣೆಯ ಲೋಪ ಮರಳಿ ಉಂಟಾಗಿರುವುದು ಅವರುಗಳ ಬೇಜವಾಬ್ದಾರಿ ನಡೆಯಾಗಿದೆ. ಇದನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕರ್ನಾಟಕ ರಾಜ್ಯ ಸಮಿತಿ ಕಟುವಾಗಿ ಟೀಕಿಸುತ್ತದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಅವಘಡವನ್ನು ಸರಿಪಡಿಸಲು ಅಣೆಕಟ್ಟೆಯಲ್ಲಿ ಸಂಗ್ರಹವಾದ ಶೇ 60 ಪ್ರಮಾಣದ 65 ಟಿಎಂಸಿ ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ. ಇದರಿಂದಾಗಿ, ಈ ಅಣೆಕಟ್ಟೆಯ ಫಲಾನುಭವಿಗಳಾದ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಸುಮಾರು 30 ಲಕ್ಷ ಎಕರೆ ನೀರಾವರಿ ಪ್ರದೇಶದ ರೈತರ ಭವಿಷ್ಯಕ್ಕೆ ತೀವ್ರ ಆತಂಕ ಉಂಟು ಮಾಡಿದೆ. ತಕ್ಷಣವೇ ಅವಘಡವನ್ನು ಸರಿ ಪಡಿಸಲು ಮತ್ತು ನೀರನ್ನು ಉಳಿಸಿಕೊಳ್ಳಲು ತೀವ್ರ ಕ್ರಮಗಳಾಗದಿದ್ದಲ್ಲಿ ಈ ಮೂರು ರಾಜ್ಯಗಳ ರೈತರು ತಲಾ ಎಕರೆಗೆ ಲಕ್ಷಾಂತರ ರೂ ಬೆಳೆ ನಷ್ಟ ಮಾಡಿಕೊಳ್ಳಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ ನೀರು ಸಂಗ್ರಹವಾಗುವ ಭರವಸೆಯೂ ಇಲ್ಲ. ಹೀಗಾಗಿ, ಒಟ್ಟಾಗಿ ಗಮನಿಸುವಾಗ ನಷ್ಠದ ಪ್ರಮಾಣ 30,000 ಕೋಟಿ ರೂ. ಗಳಷ್ಟಾಗಲಿದೆ ಎಂದು ರೈತ ಮುಖಂಡ ಹೆಚ್ ಆರ್ ಬಸವರಾಜಪ್ಪ ತಿಳಿಸಿದ್ದಾರೆ.

ಕಳೆದ ವರ್ಷದ ಬರಗಾಲದಿಂದಾಗಿ ಕರ್ನಾಟಕದ ಈ ಭಾಗದ ರೈತರು ನೀರಿನ ಕೊರತೆಯಿಂದ ಬೆಳೆ ನಷ್ಠ ಅನುಭವಿಸಿದ್ದಾರೆ. ಒಕ್ಕೂಟ ಹಾಗೂ ರಾಜ್ಯ ಸರಕಾರಗಳು ಸೂಕ್ತ ಪರಿಹಾರಗಳನ್ನು ನೀಡಿಲ್ಲ. ಮಾತ್ರವಲ್ಲ, ಬೆಳೆ ವಿಮೆಯನ್ನು ಸಮರ್ಪಕವಾಗಿ ಸಿಗುವಂತೆ ಕ್ರಮವಹಿಸಿಲ್ಲ. ಹೀಗಾಗಿ, ಈ ಬೆಳೆ ನಷ್ಟವು ಈ ಭಾಗದಲ್ಲಿ ರೈತರ ಆತ್ಮಹತ್ಯೆಗಳನ್ನು ತೀವ್ರವಾಗಿ ಹೆಚ್ಚಿಸಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ, ರಾಜ್ಯ ಸರ್ಕಾರ ಸಾಲದ ಬಾಧೆಯನ್ನು ತಡೆಯಲು ಅಗತ್ಯ ಕ್ರಮವಹಿಸಬೇಕು. ಮತ್ತು
ಪರಿಸ್ಥಿತಿಯನ್ನು ಸಮರ್ಪಕವಾಗಿ ಅವಲೋಕಿಸಿ, ನದಿಯ ಮೇಲು ಭಾಗದಲ್ಲಿ ನೀರನ್ನು ಸಂರಕ್ಷಿಸಲು ಅಗತ್ಯ ಕ್ರಮವಹಿಸಬೇಕು. ಸಮರೋಪಾದಿಯಲ್ಲಿ ಪರಣಿತರೊಂದಿಗೆ ಗೇಟ್ ನಿರ್ವಹಿಸಲು ಮುಂದಾಗುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಬಲವಾಗಿ ಒತ್ತಾಯಿಸುವುದಾಗಿ ರಾಜ್ಯಾಧ್ಯಕ್ಷ ಹೆಚ್.ಆರ್ ಬಸವರಾಜಪ್ಪ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...