ತುರುವೇಕೆರೆ | ನನ್ನ ಮಗನನ್ನು ಸಾಯಿಸಲು ಅನುಮತಿ‌ಕೊಡಿ : ಡ್ರಗ್ಸ್ ನಿಯಂತ್ರಿಸದ ಪೊಲೀಸರ ವಿರುದ್ಧ ಹೆತ್ತ ತಾಯಿಯ ಆಕ್ರೋಶ

Date:

“ನನ್ನ ಮಗನನ್ನು ದಯಮಾಡಿ ಜೈಲಿಗೆ ಹಾಕಿ ಇಲ್ಲಾ ನಂಗೆ ಸಾಯಿಸಲು ಪರ್ಮಿಷನ್ ಕೊಡಿ”…

ಹೀಗಂತ ಡ್ರಗ್ಸ್ ನಿಯಂತ್ರಣ ಮಾಡದ ಪೊಲೀಸರ ವಿರುದ್ದ ಡ್ರಗ್ಸ್‌ ವ್ಯಸನಿಯಾದ ಹುಡುಗನ ಹೆತ್ತ ತಾಯಿಯೋರ್ವರು ಮಗನನ್ನು ಸರಿದಾರಿಗೆ ತರಲು ಸಾಧ್ಯವಾಗುತ್ತಿಲ್ಲ ಎಂದು ಅಸಹಾಯಕತೆಯಿಂದ ಒಡಲಾಳದ ನೋವನ್ನು ತೋಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ನಡೆದಿದೆ.

“ಸಾರ್ , ನನ್ ಮಗ ಸರಿಯಿಲ್ಲ. ಗಾಂಜಾ ಹೊಡೀತಾನೆ, ಡ್ರಗ್ಸ್ ತಗೋತಾನೆ, ಸಿಕ್ಕ ಸಿಕ್ಕವರ ಮೇಲೆ ಹೊಡೆದಾಟಕ್ಕೆ ಹೋಗ್ತಾನೆ. ಹೆಣ್ಣು ಮಕ್ಕಳ ಬಗ್ಗೆ ಲಘುವಾಗಿ ಮಾತಾಡ್ತಾನೆ. ಕೀಟಲೆ ಮಾಡ್ತಾನೆ. ಜನರ ಕೈಲಿ ಒದೆ ತಿಂತಾನೆ. ಅದನ್ನು ನಾನು ನೋಡಕ್ಕೆ ಆಗಲ್ಲ. ಕೈ ಕಾಲು ಮುರಿದು ಹಾಕ್ತಾರೆ. ಜನಗಳು ನಮ್ ಮನೆ ಮುಂದೆ ಬಂದು ಗಲಾಟೆ ಮಾಡ್ತಾರೆ. ಮರ್ಯಾದೆ ಹೋಗ್ತಾ ಇದೆ. ದಯಮಾಡಿ ನನ್ ಮಗನ್ನ ಜೈಲಿಗೆ ಹಾಕಿ. ಇಲ್ಲಾಂದ್ರೆ ನನಗೆ ಅವನನ್ನು ಸಾಯಿಸಕ್ಕೆ ಪರ್ಮಿಷನ್ ಕೊಡಿ” ಇದು ಹೆತ್ತೊಡಲಿನ ಒಡಲಾಳದ ಮಾತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೌದು. ನಂಬಿದರೆ ನಂಬಿ.ಬಿಟ್ಟರೆ ಬಿಡಿ. ಇದು ತುರುವೇಕೆರೆ ಪಟ್ಟಣದಲ್ಲಿ ಸಣ್ಣ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿರುವ ರೇಣುಕಮ್ಮರ ನೋವು. ತಮ್ಮ 20 ವರ್ಷ ವಯೋಮಾನದ ಮಗ ಅಭಿ ಕೆಟ್ಟ ಸ್ನೇಹಿತರ ಸಹವಾಸಕ್ಕೆ ಬಿದ್ದು ಕಲಿಯಬಾರದ ಚಟಗಳನ್ನೆಲ್ಲಾ ಕಲಿತಿದ್ದಾನೆ. ಚಟಗಳಿಂದ ಮುಕ್ತಗೊಳಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದೇನೆ. ಆದರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಅಮ್ಮ.

ಪಟ್ಟಣದಲ್ಲಿ ಗಾಂಜಾ ಸೇರಿದಂತೆ ಹಲವಾರು ಮಾದಕ ವಸ್ತುಗಳು ಮಾರಾಟವಾಗುತ್ತಿವೆ. ಇದು ಯುವಕರನ್ನು ಹಾಳು ಮಾಡುತ್ತಿದೆ. ನನ್ನ ಮಗನೂ ಇಂತಹ ಜಾಲಕ್ಕೆ ಬಿದ್ದು ತನ್ನ ಜೀವನವನ್ನು ಹಾಳು ಮಾಡಿಕೊಂಡಿದ್ದಾನೆ. ಹೀಗೇ ಪಟ್ಟಣದಲ್ಲಿ ಸಾಕಷ್ಟು ಯುವಕರಿದ್ದಾರೆ. ಇವರಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿರುವವರು ಯಾರು ಎಂಬುದನ್ನು ದಯಮಾಡಿ ಪತ್ತೆ ಹಚ್ಚಿ ಅಮಾಯಕರನ್ನು ಕಾಪಾಡಿ ಎಂದು ರೇಣುಕಮ್ಮ ಪೋಲಿಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಅಭಿ ಅಲ್ಲಿದ್ದ ಕೆಲವು ಬಾಲಕಿಯರನ್ನು ಚುಡಾಯಿಸಿದ್ದಾನೆ. ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಗಮನಿಸಿದ ಅಲ್ಲೇ ಇದ್ದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅಭಿಯನ್ನು ಹಿಡಿದು ಚೆನ್ನಾಗಿ ಥಳಿಸಿ ಸ್ಥಳೀಯ ಪೋಲಿಸರ ವಶಕ್ಕೆ ಒಪ್ಪಿಸಿದ್ದಾರೆ.

ಈ ನಡುವೆ ಇದೇ ಅಭಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಪಟ್ಟಣದಲ್ಲಿ ಯುವತಿಯೋರ್ವಳಿಗೆ ಜೀವ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿತ್ತು. ಪೊಲೀಸರು ಅಭಿಯನ್ನು ಹುಡುಕುತ್ತಿದ್ದರು. ಈ ಮಧ್ಯೆ ಕಾಲೇಜಿನ ಕ್ರೀಡಾಂಗಣದಲ್ಲಿ ಮಾದಕ ವಸ್ತು ಸೇವಿಸಿದ್ದ ಅಭಿ ಕುಚೇಷ್ಠೆ ಮಾಡಿ ಜನರ ಕೈಗೆ ಸಿಕ್ಕಿ ಹಣ್ಣುಗಾಯಿ ನೀರುಗಾಯಿ ಆಗಿ ಪೊಲೀಸರ ಅತಿಥಿಯಾಗಿದ್ದ

ಅಭಿಯ ತಾಯಿ ರೇಣುಕಮ್ಮ, ತನ್ನ ಮಗ ಮಾದಕ ವಸ್ತುಗಳಿಗೆ ದಾಸನಾಗಿದ್ದಾನೆ. ಮನೆಯಲ್ಲಿ ಕೊಡಬಾರದ ಕಿರುಕುಳ ಕೊಡ್ತಾ ಇದ್ದಾನೆ. ಬೈಕ್ ಮತ್ತು ಮೊಬೈಲ್ ಬೇಕು ಅಂದ. ಕೊಡಿಸಲ್ಲ ಅಂದರೆ ಎಲ್ಲಿ ಕಳ್ಳತನ ಮಾಡ್ತಾನೋ?. ಏನು ಸಮಸ್ಯೆ ಮಾಡಿಕೊಳ್ತೋನೋ ಅಂತ ಹೆದರಿ ಸಾಲ ಮಾಡಿ ಬೈಕ್ ಮತ್ತು ಮೊಬೈಲ್ ಕೊಡಿಸಿದೆ. ಆದರೆ ಈಗ ಈ ಸಂಕಟ ತಂದಿಟ್ಟಿದ್ದಾನೆ ಎಂದು ರೇಣುಕಮ್ಮ ನೋವನ್ನು ತೋಡಿಕೊಂಡಿದ್ದಾರೆ.

ದಯಮಾಡಿ ನನ್ನ ಮಗನನ್ನು ಜೈಲಿಗೆ ಹಾಕಿಯಾದರೂ ಈ ದುಷ್ಚಟಗಳಿಂದ ದೂರ ಮಾಡಬೇಕು. ನನ್ನ ಮಗ ಹಾಳಾದ ರೀತಿಯಲ್ಲಿ ಇನ್ನೂ ಹಲವಾರು ಮಕ್ಕಳಿದ್ದಾರೆ. ಅವರನ್ನು ಈ ಪಾಪದ ಕೂಪದಿಂದ ಪಾರು ಮಾಡಬೇಕು ಎಂಬುದು ನನ್ನ ಆಸೆ. ಇಲ್ಲವೇ ನನ್ನ ಮಗನನ್ನು ಸಾಯಿಸಕ್ಕೆ ಪರ್ಮಿಷನ್ ಕೊಡಿ ನಾನು ಅವನನ್ನು ಸಾಯಿಸಿ ನಾನೂ ಸಾಯ್ತೀನಿ ಎಂದು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಪೋಲಿಸ್ ಠಾಣೆಗೆ ತೆರಳಿದ್ದ ತಾಯಿ ರೇಣುಕಮ್ಮಳಿಗೆ ಧೈರ್ಯ ತುಂಬಿದ ಸಬ್ ಇನ್ಸ್ ಪೆಕ್ಟರ್ ಪಾಂಡು, ಅಭಿ ಕೆಟ್ಟ ಸ್ನೇಹಿತರ ಸಹವಾಸದಿಂದ ಹಾಳಾಗಿದ್ದಾನೆ. ಅವನನ್ನು ಸರಿದಾರಿಗೆ ತರುವ ಪ್ರಯತ್ನಕ್ಕೆ ತಾವು ಕೈ ಜೋಡಿಸುವುದಾಗಿ ಹೇಳಿದ್ದಾರೆ. ನಿಮ್ಹಾನ್ಸ್ ನಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಲು ತಾವು ನೆರವು ನೀಡುವುದಾಗಿ ರೇಣುಕಮ್ಮರಿಗೆ ಧೈರ್ಯ ತುಂಬಿದ್ದಾರೆ. ಸದ್ಯ, ತುರುವೇಕೆರೆ ಪೋಲಿಸರು ಅಭಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವರದಿ: ಎಸ್. ನಾಗಭೂಷಣ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...