ತುರುವೇಕೆರೆ | ಪತ್ರಿಕೋದ್ಯಮದಲ್ಲಿ ವ್ಯಾಪಾರಿ ಮನೋಭಾವ ಹೆಚ್ಚಿದೆ : ಶಾಸಕ ಎಂ.ಟಿ.ಕೃಷ್ಣಪ್ಪ

Date:

ಪತ್ರಿಕೋದ್ಯಮವೆಂದರೆ ಅದೊಂದು ಪವಿತ್ರವಾದ ಸೇವೆ ಎಂಬ ಭಾವನೆ ಇತ್ತು. ಜನರನ್ನು ಜಾಗೃತಿ ಮಾಡುವ ಸಾಧನ ಎಂದು ಬಿಂಬಸಲಾಗುತ್ತಿತ್ತು. ಆದರೆ ಪ್ರಸ್ತುತ ಪತ್ರಿಕೋದ್ಯಮದ ಮೌಲ್ಯ ಜಾರಿ ಹೋಗುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ವಿಷಾದಿಸಿದರು.

ತುರುವೇಕೆರೆ ಪಟ್ಟಣದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಲಯನ್ಸ್ ಕ್ಲಬ್ ಹಾಗೂ ರೋಟರಿ ಇನ್ನರ್ ವೀಲ್ ಕ್ಲಬ್ ಆಫ್ ಸಂಕಲ್ಪದ ಸಂಯುಕ್ತ ಆಶ್ರಯದಲ್ಲಿ ನಡೆದ ಪತ್ರಕರ್ತರ ದಿನಾಚರಣೆ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆನಿಸಿಕೊಂಡಿರುವ ಪತ್ರಿಕಾರಂಗ ಇತ್ತೀಚೆಗೆ ಕಲುಷಿತಗೊಂಡಿದೆ. ವ್ಯಾಪಾರೀ ಮನೋಭಾವ ಹೆಚ್ಚಿದೆ. ಹಲವಾರು ಮಂದಿ ಈ ಪವಿತ್ರವಾದ ಕ್ಷೇತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಮೌಲ್ಯಯುತ ಪತ್ರಿಕೋದ್ಯಮವನ್ನು ಕಾಪಾಡಿಕೊಂಡು ಹೋಗುವುದು ಪ್ರತಿಯೊಬ್ಬ ಕಾರ್ಯನಿರತ ಪತ್ರಕರ್ತರ ಜವಾಬ್ದಾರಿ ಆಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.

ಸಮಾಜದಲ್ಲಿ ಕಾರ್ಯಾಂಗ, ನ್ಯಾಯಾಂಗ ಹಾಗೂ ಶಾಸಕಾಂಗದ ರೀತಿಯಲ್ಲಿ ಪತ್ರಿಕಾರಂಗ ಕೂಡ ಕಾರ್ಯನಿರ್ವಹಿಸುತ್ತಿದೆ. ಸಮಾಜವನ್ನು ಸರಿದಾರಿಗೆ ತರುವ ಪತ್ರಕರ್ತರು ಮಾದರಿಯಾಗಿ ಬದುಕಬೇಕು. ಆಗ ಮಾತ್ರ ಸಮಾಜ ಅವರನ್ನು ಹಿಂಬಾಲಿಸುತ್ತದೆ. ಪ್ರಾಮಾಣಿಕವಾಗಿ ದುಡಿಯುವ ಪತ್ರಕರ್ತರಿಗೆ ಸರ್ಕಾರ ತಿಂಗಳಿಗೆ ಕನಿಷ್ಟ ಐದು ಸಾವಿರ ರೂಪಾಯಿಗಳ ಗೌರವ ಧನ ನೀಡಬೇಕು. ಪ್ರತಿ ತಾಲ್ಲೂಕಿನಲ್ಲಿ ಪತ್ರಕರ್ತರಿಗೆ ನಿವೇಶನ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಈ ಕುರಿತು ತಾವು ಸದನದಲ್ಲಿ ಪ್ರಸ್ಥಾಪಿಸುವುದಾಗಿ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಮಾತನಾಡಿ ಗ್ರಾಮೀಣ ಪತ್ರಕರ್ತರಿಗೆ ಸರ್ಕಾರ ಸೇವಾ ಭದ್ರತೆ ನೀಡಬೇಕು. ಸರ್ಕಾರ ವತಿಯಿಂದ ಕನಿಷ್ಟ ಗೌರವ ಧನದ ಜೊತೆಗೆ ಆರೋಗ್ಯ ವಿಮೆ ನೀಡಬೇಕಿದೆ. ಇತ್ತೀಚಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಪಾಸ್ ನೀಡುವ ವಿಚಾರ ಸಂಪೂರ್ಣ ಗೊಂದಲಗಳಿಂದ ಕೂಡಿದೆ. ಈ ನಿಯಮಾವಳಿಯನ್ನು ಸಡಿಲಿಸಿದರೆ ಮಾತ್ರ ಗ್ರಾಮಾಂತರ ಪ್ರದೇಶದ ಪತ್ರಕರ್ತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಅಮ್ಮಸಂದ್ರ ಸುರೇಶ್ ಮಾತನಾಡಿ ಪತ್ರಿಕೋದ್ಯಮಕ್ಕೆ 150 ವರ್ಷಗಳ ಇತಿಹಾಸವಿದೆ. ಸತತವಾಗಿ ಮುದ್ರಣ ಮಾಧ್ಯಮ ನಿರಂತರವಾಗಿ ಬೆಳೆಯುತ್ತಲೇ ಇದೇ ಹೊರತು ತನ್ನ ತನವನ್ನು ಎಂದಿಗೂ ಕಳೆದು ಕೊಂಡಿಲ್ಲ. ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಸರ್ಕಾರ ನಿವಾರಿಸಲೇಬೇಕಿದೆ. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ದ ರೀತಿಯಲ್ಲೇ ಕಾರ್ಯನಿರ್ವಹಿಸುವ ಪತ್ರಿಕಾರಂಗ ನಿರ್ಲಕ್ಷಕ್ಕೊಳಗಾಗಿರುವುದು ದುರಂತವೇ ಸರಿ ಎಂದರು.

ಸಂಘದ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ದುಂಡಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಹಶಿಲ್ದಾರ್ ಎನ್.ಎ.ಅಹಮ್ಮದ್, ಬಿ.ಇ.ಒ.ಸೋಮಶೇಖರ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಆಶಾರಾಜಶೇಖರ್, ಕಾಂಗ್ರೆಸ್ ಮುಖಂಡ ಎನ್.ಆರ್.ಜಯರಾಮ್, ಲಯನ್ಸ್ ಕ್ಲಬ್ ಅಧ್ಯಕ್ಷ ರಂಗನಾಥ್, ಇನ್ನರ್ ವೀಲ್ ಅಧ್ಯಕ್ಷರಾದ ನೇತ್ರಾವತಿ ಸಿದ್ದಲಿಂಗಸ್ವಾಮಿ, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯ ಸಿದ್ದಲಿಂಗಸ್ವಾಮಿ, ಜಿಲ್ಲಾ ನಿರ್ದೇಶಕರಾದ ಬೊಮ್ಮೇನಹಳ್ಳಿ ನಂದೀಶ್, ತಾಲ್ಲೂಕು ಸಂಘದ ಪದಾಧಿಕಾರಿಗಳಾದ, ಎಸ್.ನಾಗಭೂಷಣ, ಎಂ.ಬಿ.ಹರೀಶ್, ದೇವರಾಜ್, ಧರಣೀಶ್, ಸಚ್ಚಿನ್, ಪತ್ರಕರ್ತರಾದ ಸ್ವರ್ಣಕುಮಾರ್, ಮನೋಹರ್ ರಾಮ್ ಪ್ರಸಾದ್, ಕೊಂಡಜ್ಜಿ ಸುರೇಶ್ ಬಾಬು, ಧರಣೀಶ್, ಮಂಜುನಾಥ್ ಇತರರು ಇದ್ದರು.

ಈ ಸಂಧರ್ಭದಲ್ಲಿ ಪತ್ರಿಕೋದ್ಯಮದಲ್ಲಿ ಸೇವೆ ಮಾಡುತ್ತಿರುವ ತುರುವೇಕೆರೆ ತಾಲೂಕಿನ ಪ್ರತಿಭಾನ್ವಿತ ಪತ್ರಕರ್ತರನ್ನು ಗೌರವಿಸಲಾಯಿತು. ಹಾಗೂ ಪತ್ರಿಕಾ ವಿತರಕರನ್ನು ಸನ್ಮಾಸಿ ಗೌರವಿಸಲಾಯಿತು.

ವರದಿ – ನಾಗಭೂಷಣ್ ತುರುವೇಕೆರೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...