ತುರುವೇಕೆರೆ | ದಂಡಿನಶಿವರ ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಎತ್ತಂಗಡಿಗೆ ಹುನ್ನಾರ : ದಸಂಸದಿಂದ ಪ್ರತಿಭಟನೆ ಎಚ್ಚರಿಕೆ

Date:

 ದಂಡಿನಶಿವರ ಪೋಲಿಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಚಿತ್ತರಂಜನ್ ರವರನ್ನು ಈ ಠಾಣೆಯಿಂದ ಎತ್ತಂಗಡಿ ಮಾಡಲು ಕೆಲವು ಪಟ್ಟಭದ್ರಹಿತಾಸಕ್ತಿಗಳು ಮುಂದಾಗಿವೆ. ಖಡಕ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ರಿರುವ ಚಿತ್ತರಂಜನ್ ರವರನ್ನು ಇಲ್ಲಿಂದ ಎತ್ತಂಗಡಿ ಮಾಡಿದಲ್ಲಿ ತುರುವೇಕೆರೆ ಸರ್ಕಲ್ ಇನ್ಸ್ ಪೆಕ್ಟರ್ ಕಛೇರಿಯ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ತಾಲೂಕು ದಲಿತ ಸಂಘರ್ಷ ಸಮಿತಿಯ ಸಂಚಾಲಕ ದಂಡಿನಶಿವರ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

 ದಂಡಿನಶಿವರದ ಅಂಬೇಡ್ಕರ್ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ ಐ ಚಿತ್ತರಂಜನ್ ರವರು ಈ ಠಾಣೆಗೆ ಆಗಮಿಸಿದ ನಂತರ ಇಡೀ ದಂಡಿನಶಿವರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳಕಾಕರ ಕಾಟವಿಲ್ಲದಂತಾಗಿದೆ. ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟ ಮಾಡುತ್ತಿದ್ದವರಿಗೆ ಸಿಂಹಸ್ವಪ್ನವಾಗಿದ್ದಾರೆ. ಮಾದಕ ವಸ್ತುಗಳನ್ನು ಸೇವಿಸುತ್ತಿದ್ದ ಹಲವಾರು ಮಂದಿಗೆ ತಕ್ಕ ಶಾಸ್ತಿ ಮಾಡಿದ್ದಾರೆ. ಸಮಾಜದ್ರೋಹಿಗಳಿಗೆ ಕಾನೂನು ಕ್ರಮ ಜರುಗಿಸುವ ಮೂಲಕ ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ. ಮದ್ಯದಂಗಡಿಗಳು ಬೆಳಗ್ಗೆ 6 ಗಂಟೆಗೇ ತೆರೆಯುತ್ತಿದ್ದವು. ಇದರಿಂದಾಗಿ ಕುಡುಕರ ಹಾವಳಿ ಬೆಳಗ್ಗೆಯೇ ಪ್ರಾರಂಭವಾಗುತ್ತಿತ್ತು. ಮದ್ಯದಂಗಡಿಗಳ ಮಾಲೀಕರನ್ನು ಕರೆದು ಎಚ್ಚರಿಕೆ ನೀಡಿ ಸಮಯ ಪಾಲನೆ ಮಾಡುವಂತೆ ಸೂಚನೆ ನೀಡಿದ್ದಾರೆ.

 ಕಾನೂನು ಪರಿಪಾಲನೆ ಮಾಡುತ್ತಿರುವ ಇಂತಹ ಖಡಕ್ ಅಧಿಕಾರಿಯನ್ನು ಕೆಲವು ಪಟ್ಟಭದ್ರಹಿತಾಸಕ್ತಿಗಳು ಈ ಠಾಣೆಯಿಂದ ವರ್ಗಾಯಿಸಲು ಮುಂದಾಗಿವೆ. ಇದಕ್ಕೆ ಜನಪ್ರತಿನಿಧಿಗಳೂ ಸಹ ಕೈ ಜೋಡಿಸಿದ್ದಾರೆ. ಈ ಎಸೈ ಚಿತ್ತರಂಜನ್ ರವರು ಜನ ಸಾಮಾನ್ಯರಿಗೆ ಪೋಲಿಸ್ ಠಾಣೆಯಲ್ಲಿ ಗೌರವ ನೀಡುತ್ತಿದ್ದಾರೆ. ಪೋಲಿಸ್ ಠಾಣೆಯನ್ನು ಜನಸ್ನೇಹಿಯಾಗಿ ಪರಿವರ್ತಿಸಿದ್ದಾರೆ. ಇಂತಹ ಜನಪರ ಅಧಿಕಾರಿಯನ್ನು ಎತ್ತಂಗಡಿ ಮಾಡಲು ಪ್ರಯತ್ನಿಸಿದಲ್ಲಿ ತಾಲೂಕು ಕೇಂದ್ರದಲ್ಲಿ ಪ್ರಗತಿಪರ ಸಂಘಟನೆಗಳ ಸಹಕಾರದೊಂದಿಗೆ ಪ್ರತಿಭಟನೆ ಮಾಡಲಾಗುವುದು ಎಂದು ದಲಿತ ಸಂಘರ್ಷ ಸಮಿತಿಯ ಸಂಚಾಲಕ ದಂಡಿನಶಿವರ ಕುಮಾರ್ ಎಚ್ಚರಿಸಿದ್ದಾರೆ. ಕಾಣದ ಕೈಗಳು ವರ್ಗಾವಣೆಗೆ ಪ್ರಯತ್ನಿಸಿದಲ್ಲಿ ಅಂತಹವರ ಮನೆ ಮುಂದೆಯೂ ಧರಣಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಪತ್ರಿಕಾಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ಡಿ.ಆರ್.ಲಕ್ಷ್ಮೀಶ್, ಪದಾದಿಕಾರಿಗಳಾದ ಶೇಖರ್, ದಂಡಿನ ಶಿವರ ಹೋಬಳಿ ಸಂಚಾಲಕ ಶಂಕರ್ ಉಪಸ್ಥಿತರಿದ್ದರು.

ವರದಿ – ಎಸ್. ನಾಗಭೂಷಣ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...