ತುರುವೇಕೆರೆ | ಸಿಡಿಲಿಗೆ ಬಲಿಯಾದ ಜಾನುವಾರುಗಳಿಗೆ ಪರಿಹಾರ ವಿತರಣೆ

Date:

 ತುರುವೇಕೆರೆ ತಾಲೂಕಿನಲ್ಲಿ ಕಳೆದ ಐದಾರು ದಿನಗಳ ಹಿಂದೆಯಷ್ಟೇ ಸಿಡಿಲಿಗೆ ಬಲಿಯಾಗಿದ್ದ 14 ಕುರಿ ಮತ್ತು ಮೇಕೆ ಹಾಗೂ ಒಂದು ಹಸುವಿನ ಮಾಲೀಕರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ನೀಡಲಾದ ಪರಿಹಾರ ಆದೇಶ ಪತ್ರವನ್ನು ವಿತರಣೆ ಮಾಡಿದರು.

 ತುರುವೇಕೆರೆ ತಾಲೂಕಿನ ರಾಮಸಾಗರದಲ್ಲಿ ಗೋವಿಂದರಾಜು, ವರದಯ್ಯ, ದಾಸಪ್ಪ, ರಮೇಶ್ ಮತ್ತು ಲಕ್ಷ್ಮಣ ಎಂಬುವವರಿಗೆ ಸೇರಿದ 4 ಕುರಿಗಳು ಮತ್ತು 10 ಮೇಕೆಗಳು ಸಿಡಿಲಿಗೆ ಬಲಿಯಾಗಿದ್ದವು. ತಲಾ ಒಂದಕ್ಕೆ 4 ಸಾವಿರ ರೂಗಳಂತೆ ಪರಿಹಾರ ಧನ ನೀಡಲಾಯಿತು. 

 ತೋವಿನಕಟ್ಟೆಯಲ್ಲಿ ವೇಣುಗೋಪಾಲ್ ಎಂಬುವವರಿಗೆ ಸೇರಿದ ಹಸುವೊಂದು ಸಿಡಿಲಿಗೆ ಬಲಿಯಾಗಿತ್ತು. ಹಾಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ನೀಡಲಾದ 37.500 ರೂಗಳ ಪರಿಹಾರದ ಆದೇಶ ಪತ್ರವನ್ನು ಸಹ ಶಾಸಕ ಎಂ.ಟಿ.ಕೃಷ್ಣಪ್ಪ ಹಸುವಿನ ಮಾಲೀಕರಿಗೆ ವಿತರಣೆ ಮಾಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಳೆಗಾಲದಲ್ಲಿ ಮಳೆ, ಗುಡುಗು ಮತ್ತು ಸಿಡಿಲಿಗೆ ಸಾಕಷ್ಟು ಅನಾಹುತಗಳು ಸಂಭವಿಸುತ್ತಿವೆ. ಗ್ರಾಮಾಂತರ ಪ್ರದೇಶದಲ್ಲಿ ರೈತಾಪಿಗಳು ಜೀವನೋಪಾಯಕ್ಕಾಗಿ ಜಾನುವಾರುಗಳನ್ನು ಸಾಕಿರುತ್ತಾರೆ. ಇಂತಹ ಸಂಧರ್ಭದಲ್ಲಿ ಆಗುವ ಅನಾಹುತಗಳಿಗೆ ಸರ್ಕಾರ ಹೆಚ್ಚು ಪರಿಹಾರವನ್ನು ನೀಡಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಸರ್ಕಾರಕ್ಕೆ ಆಗ್ರಹಿಸಿದರು.

ಕುರಿಗಳಿಗೆ ತಲಾ 10 ಸಾವಿರ, ಮೇಕೆಗಳಿಗೆ ತಲಾ 15 ಸಾವಿರ ಮತ್ತು ಹಸು ಸೇರಿದಂತೆ ಇತರೆ ಜಾನುವಾರುಗಳಿಗೆ 80 ಸಾವಿರ ರೂಗಳನ್ನು ಪರಿಹಾರವಾಗಿ ನೀಡಬೇಕೆಂದು ಸರ್ಕಾರಕ್ಕೆ ಶಾಸಕ ಎಂ.ಟಿ.ಕೃಷ್ಣಪ್ಪ ಸಲಹೆ ನೀಡಿದ್ದಾರೆ. 

 28 ಟಿವಿಕೆ 3 – ತುರುವೇಕೆರೆ ತಾಲೂಕಿನಲ್ಲಿ ಸಿಡಿಲಿಗೆ ಬಲಿಯಾದ ಜಾನುವಾರುಗಳ ಮಾಲೀಕರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಪರಿಹಾರದ ಆದೇಶ ಪತ್ರವನ್ನು ವಿತರಣೆ ಮಾಡಿದರು. 

 ಪಶು ಸಂಗೋಪನಾ ಇಲಾಖೆಯಿಂದ ತಲಾ ಒಂದು ಸಾವಿರ ರೂ ಪರಿಹಾರ ಧನ ನೀಡಲಾಗುವುದು ಎಂದು ತಾಲೂಕು ಪಶುಸಂಗೋಪನಾ ಇಲಾಖಾ ಸಹಾಯಕ ನಿರ್ದೇಶಕರಾದ ಡಾ.ರೇವಣಸಿದ್ದಪ್ಪ ತಿಳಿಸಿದರು. 

 ಇದೇ ಸಂಧರ್ಭದಲ್ಲಿ ತಹಸೀಲ್ದಾರ್ ಕುಂ ಇ ಅಹಮದ್, ಇಓ ಶಿವರಾಜಯ್ಯ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ರವಿಕುಮಾರ್, ಜೆಡಿಎಸ್ ಮುಖಂಡ ಮಾದಿಹಳ್ಳಿ ಕಾಂತರಾಜ್ ಸೇರಿದಂತೆ ಹಲವರು ಇದ್ದರು.

ವರದಿ – ಎಸ್. ನಾಗಭೂಷಣ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...