ತುರುವೇಕೆರೆ | ನೊಳಂಬ ಲಿಂಗಾಯತ ವಿದ್ಯಾರ್ಥಿ ನಿಲಯ ಸ್ಥಾಪಿಸಲು ಕೆರಗೋಡಿ ರಂಗಾಪುರ ಶ್ರೀ ಆಗ್ರಹ

Date:

ನೊಳಂಬ ಲಿಂಗಾಯಿತ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನಗರ ಪ್ರದೇಶದಲ್ಲಿ ವಿದ್ಯಾರ್ಥಿ ನಿಲಯಗಳನ್ನು ತೆರೆಯಬೇಕು ಎಂದು ಕೆರಗೋಡಿ ರಂಗಾಪುರ ಮಠದ ಶ್ರೀಗುರುಪರದೇಶಿಕೇಂದ್ರ ಸ್ವಾಮೀಜಿ ಕರೆ ನೀಡಿದರು.

ತುರುವೇಕೆರೆ ಪಟ್ಟಣದ ಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನೊಳಂಬ ಲಿಂಗಾಯಿತ ಸಂಘದಿಂದ ಸುಮಾರು 50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ 9 ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದ ಅವರು, ಲಿಂಗಾಯಿತ ಸಮುದಾಯದ ಪೋಷಕರು ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಬೇಕಿದೆ. ಮಕ್ಕಳು ಶಿಕ್ಷಣದಲ್ಲಿ ಸಾಧನೆ ಮಾಡುವಂತೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಬೇಕಿದೆ. ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಮಟ್ಟದಲ್ಲಿ ವಿದ್ಯಾಭ್ಯಾಸದಲ್ಲಿ ತೊಡಗಿರುವ ನಮ್ಮ ಸಮುದಾಯ ಮಕ್ಕಳಿಗೆ ಬೆಂಗಳೂರು, ಮೈಸೂರು ನಗರದಲ್ಲಿ ನೊಳಂಬ ಲಿಂಗಾಯಿತ ಸಂಘ ಹಾಸ್ಟಲ್ ವ್ಯವಸ್ಥೆ ಕಲ್ಪಿಸಿದೆ. ಇಂತಹ ಹಾಸ್ಟಲ್‌ಗಳನ್ನು ರಾಜ್ಯದ ಪ್ರತಿಷ್ಟಿತ ನಗರಗಳಲ್ಲಿಯೂ ವಿಸ್ತರಿಸಬೇಕಿದೆ ಎಂದರು.

ಭಕ್ತರ ಸಹಾಯದಿಂದ ಮಠ ಮಂದಿರಗಳು ನಡೆಯುವಂತೆ ದಾನಿಗಳ ನೆರವಿನಿಂದ ಸಂಘ ಸಂಸ್ಥೆಗಳು ಸೇವೆ ಮಾಡುತ್ತಿವೆ. ನಮ್ಮ ಸಮುದಾಯ ಅಭಿವೃದ್ದಿಗೆ ನೊಳಂಬ ಲಿಂಗಾಯಿತ ಸಂಘ ಶ್ರಮಿಸುತ್ತಿದ್ದು ಸಮುದಾಯದ ಎಲ್ಲರೂ ಸಹಕಾರ ನೀಡಬೇಕು. ಸಮುದಾಯ ಅಭಿವೃದ್ದಿಗೆ ನಮ್ಮ ಸಹಕಾರ ಸದಾ ಇದ್ದು ತಿಪಟೂರು ತಾಲೂಕಿನಿಂದ ಸ್ಥಾಪನೆಯಾದ ನೊಳಂಬ ಲಿಂಗಾಯಿತ ಸಂಘಕ್ಕೆ ನಿವೇಶನ ಇಲ್ಲ. ಈ ಕುರಿತು ಕೇಂದ್ರ ಸಂಘದವರು ಮನವಿ ಮಾಡಿದ್ದು ಅತೀ ಶೀಘ್ರದಲ್ಲಿಯೇ ತಿಪಟೂರು ಪಟ್ಟಣದಲ್ಲಿ ನಿವೇಶನ ಕೊಡಿಸುವುದಾಗಿ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ ರಾಜ್ಯದ ಜಾತಿ ಗಣತಿಯನ್ನು ವೈಜ್ಞಾನಿಕವಾಗಿ ಮಾಡಬೇಕಿದೆ. ಸಿದ್ದರಾಮಯ್ಯ ಮಾಡಿಸಿರುವ ರಾಜ್ಯದ ಜಾತಿ ಗಣತಿಯಲ್ಲಿ ದೊಡ್ಡ ಸಮಾಜಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ದೊಡ್ಡ ಸಮಾಜವಾದ ಒಕ್ಕಲಿಗ, ಲಿಂಗಾಯಿತ ಸಮಾಜದಲ್ಲಿ ಹಲವು ಉಪ ಜಾತಿಗಳಿದ್ದು ಅವುಗಳನ್ನು ಒಂದೇ ಜಾತಿಗೆ ಸೇರಿಸಬೇಕು ಅದನ್ನು ಬಿಟ್ಟು ಉಪ ಜಾತಿಗಳನ್ನು ಮಾಡಿ ಒಡೆಯುತ್ತಿದ್ದಾರೆ. ಈ ಜಾತಿಗಣತಿಯನ್ನು ವಿರೋಧಿಸಬೇಕಿದೆ ಎಂದರು.

ಈ ಸಂಧರ್ಭದಲ್ಲಿ ಕಟ್ಟಡ ನಿರ್ಮಾಣಕ್ಕೆ ಉದಾರವಾಗಿ ಸಹಾಯ ಮಾಡಿದ ದಾನಿಗಳನ್ನು ಸನ್ಮಾನಿಸಲಾಯಿತು. ನೊಳಂಬ ಲಿಂಗಾಯಿತ ರಾಜ್ಯ ಸಂಘದ ಅಧ್ಯಕ್ಷ ಬಿಕೆ. ಚಂದ್ರಶೇಖರ್ ಇನ್ನಿರರು ಇದ್ದರು.

ವರದಿ- ಎಸ್. ನಾಗಭೂಷಣ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...