ತುರುವೇಕೆರೆ | ಮಳೆಗೆ ಕೆರೆಗಳು ಕೋಡಿ : ಸಂಚಾರಕ್ಕೆ ಅಡ್ಡಿ

Date:

ಹೇಮಾವತಿ ನದಿ ತುಂಬಿರುವ ಹಿನ್ನೆಲೆಯಲ್ಲಿ ತುರುವೇಕೆರೆ ತಾಲೂಕಿಗೆ ಹರಿಯುತ್ತಿರುವ ನೀರಿನ ದೆಸೆ ಹಾಗೂ ವರುಣನ ಕೃಪೆಯಿಂದಾಗಿ ಬಹುಪಾಲು ಕೆರೆ ಕಟ್ಟೆಗಳು ತುಂಬಿ ತುಳುಕುತ್ತಿವೆ.

ತುರುವೇಕೆರೆ ತಾಲೂಕಿನ ಮೂಲಕ ತುಮಕೂರು ಶಾಖಾ ನಾಲೆ ಮತ್ತು ನಾಗಮಂಗಲ ಶಾಖಾ ನಾಲೆಗಳ ಮೂಲಕ ಹೇಮಾವತಿ ನೀರು ಹರಿಯುತ್ತಿವೆ. ನಾಲಾ ನೀರಿನ ವ್ಯಾಪ್ತಿಯ ಗ್ರಾಮಗಳಲ್ಲಿನ 21 ಕೆರೆಗಳ ಪೈಕಿ 20 ಕೆರೆಗಳು ಹೇಮಾವತಿ ನಾಲಾ ನೀರು ಮತ್ತು ಮಳೆ ನೀರಿಗೆ ತುಂಬಿ ಹರಿಯುತ್ತಿದೆ. ಹೆಚ್ಚುವರಿಯಾಗಿ ಹರಿಯುತ್ತಿರುವ ನೀರು ಶಿಂಷಾ ನದಿಗೆ ಸೇರುತ್ತಿವೆ.

1000572825

ಕಳೆದ ವಾರ ತುರುವೇಕೆರೆ ಕೆರೆ, ಬೊಮ್ಮೇನಹಳ್ಳಿ, ಬಲಮಾದಿಹಳ್ಳಿ, ಕುಣಿಕೇನಹಳ್ಳಿ, ಪುರ ಚೆಂಡೂರು, ಕೊಂಡಜ್ಜಿ, ಹುಳಿಸಂದ್ರ, ಅಮ್ಮಸಂದ್ರ, ಅಕ್ಕಳಸಂದ್ರ, ಡಿ.ಶೆಟ್ಟಿಹಳ್ಳಿ, ಸಂಪಿಗೆ, ವೀರಸಾಗರ, ಸಂಪಿಗೆ ಹೊಸಹಳ್ಳಿ, ತಂಡಗ, ಕೋಳಾಲ, ಗೋಣಿತುಮಕೂರು, ಅರಿಶಿಣದಹಳ್ಳಿ ಅಣೆ, ಬಾಳೆಮಡು ಅಣೆ, ಮಲ್ಲಾಘಟ್ಟ ಕೆರೆ ಮತ್ತು ಸಾರಿಗೆಹಳ್ಳಿ ಕೆರೆಗಳು ತುಂಬಿವೆ. ಈಗ ಚಿಮ್ಮನಹಳ್ಳಿ ಕೆರೆಗೆ ನೀರು ಹರಿಸಲಾಗುತ್ತಿದೆ ಎಂದು ಹೇಮಾವತಿ ಇಲಾಖಾ ಮೂಲಗಳಿಂದ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲ್ಲಾಘಟ್ಟ ಕೆರೆ ಮತ್ತು ಸಾರಿಗೆಹಳ್ಳಿ ಕೆರೆಗಳು ಕಳೆದ ಮೂರ್ನಾಲ್ಕು ದಿನಗಳಿಂದ ತುಂಬಿ ರಸ್ತೆ ಮೇಲೆ ಹರಿಯುತ್ತಿದೆ. ಮಳೆ ಪ್ರಮಾಣ ಹೆಚ್ಚಾದರೆ ರಸ್ತೆ ಮೇಲೆ ಹರಿಯುವ ನೀರಿನ ಪ್ರಮಾಣವೂ ಹೆಚ್ಚಾಗಿ ಈ ಭಾಗದ ಗ್ರಾಮಗಳಿಗೆ ತೆರಳುವ ವಾಹನಗಳು, ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ, ರೈತರಿಗೆ, ಬಸ್ ಸಂಚಾರಕ್ಕೆ ಅಡಚಣೆಯಾಗಲಿದೆ. ಈ ಪರಿಸ್ಥಿತಿ ಪ್ರತಿ ವರ್ಷವೂ ಇರಲಿದೆ. ಶಾಶ್ವತವಾದ ಪರಿಹಾರವನ್ನು ಕಂಡು ಹಿಡಿಯುವ ಸಲುವಾಗಿ ಸಂಬಂಧಪಟ್ಟ ಅಧಿಕಾರಿಗಳು ಕೆರೆ ಕೋಡಿ ಹರಿಯುವ ರಸ್ತೆಯ ಮೇಲೆ ಸೇತುವೆ ನಿರ್ಮಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಮಾಚೇನಹಳ್ಳಿ ಮಲ್ಲಿಕಾರ್ಜುನ್ ಸೇರಿದಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ವರದಿ-ಎಸ್. ನಾಗಭೂಷಣ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...