ತುರುವೇಕೆರೆ | ಒಂದೇ ದಿನ  ಐವರ ಮೇಲೆ ಚಿರತೆ ದಾಳಿ :  ಭಯಭೀತರಾದ ಗ್ರಾಮಸ್ಥರು

Date:

ತುರುವೇಕೆರೆ  ತಾಲೂಕಿನ ಗೋಣಿತುಮಕೂರು, ದೇವೀಹಳ್ಳಿ ಮತ್ತು ನಡುವನಹಳ್ಳಿಯಲ್ಲಿ ಚಿರತೆಯ ದಾಳಿಗೆ 5 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

 ಬುಧವಾರ ಮಧ್ಯಾಹ್ನ 2.30 ರ ಸುಮಾರಿನಲ್ಲಿ ನಡುವನಹಳ್ಳಿಯ ವನಜಾಕ್ಷಮ್ಮ (43) ಎಂಬುವವರು ತಮ್ಮ ತೋಟದಲ್ಲಿ ಕೃಷಿ ಕಾಯಕದಲ್ಲಿ ತೊಡಗಿರುವ ವೇಳೆ ಚಿರತೆ ಏಕಾಏಕಿ ದಾಳಿ ನಡೆಸಿ ಈಕೆಯ ಕೈ ಮತ್ತು ತೋಳನ್ನು ಬಲವಾಗಿ ಕಚ್ಚಿದೆ. ವನಜಾಕ್ಷಮ್ಮ ಕೂಗಿಕೊಂಡ ಕೂಡಲೇ ಅಕ್ಕಪಕ್ಕದ ತೋಟದಲ್ಲಿದ್ದ ರೈತಾಪಿಗಳು ಗಲಾಟೆ ಮಾಡಿದ ಕೂಡಲೇ ಚಿರತೆ ಅಲ್ಲಿಂದ ಕಾಲು ಕಿತ್ತಿದೆ.

  ಮೂರು ಗಂಟೆಯ ವೇಳೆಗೆ ಗೋಣಿತುಮಕೂರಿನ ಹುಚ್ಚಮ್ಮ (70) ಎಂಬುವವರು ತಮ್ಮ ತೋಟದ ಬಳಿ ಮೇಕೆಗಳನ್ನು ಮೇಯಿಸುತ್ತಿದ್ದ ವೇಳೆ ದಿಢೀರನೆ ದಾಳಿ ಮಾಡಿದ ಚಿರತೆ ಹುಚ್ಚಮ್ಮರ ಕಿವಿ, ಮುಖವನ್ನು ಪರಚಿ ತೀವ್ರವಾಗಿ ಗಾಯ ಮಾಡಿದೆ. ಈಕೆಯೂ ಕೂಗಿಕೊಂಡಾಗ ಅಕ್ಕಪಕ್ಕದವರು ಬಂದ ವೇಳೆ ಚಿರತೆ ನಾಪತ್ತೆ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಗೋಣಿತುಮಕೂರಿನ ಹೊರವಲಯದಲ್ಲಿರುವ ಬೋರೇಗೌಡ (67) ಎಂಬುವವರ ಮನೆ ಬಳಿ ಬಂದ ಚಿರತೆ ಬೋರೇಗೌಡರ ಮೇಲೂ ದಾಳಿ ಮಾಡಿದೆ. ಅಲ್ಲದೇ ಅವರ ತಗಡಿನ ಶೆಡ್‌ ಒಳಗೆ ನುಗ್ಗಿದೆ.ಕೂಡಲೇ ಬೋರೇಗೌಡರು ಬಾಗಿಲು ಹಾಕಿದ್ದಾರೆ. ಚಿರತೆ ಸತತವಾಗಿ ದಾಳಿ ಮಾಡುತ್ತಿರುವ ಬಗ್ಗೆ ಮತ್ತು ಬೋರೇಗೌಡರ ಮನೆ ಬಳಿ ಬಂಧಿಯಾಗಿರುವ ಸುದ್ದಿ ಹರಡುತ್ತಿದ್ದಂತೆ ಮನೆ ಬಳಿ ಜನರು ಜಮಾಯಿಸಿದ್ದಾರೆ. ಆ ವೇಳೆಗೆ ಅರಣ್ಯ ಇಲಾಖಾ ಸಿಬ್ಬಂದಿ ಸಹ ದೌಡಾಯಿಸಿದ್ದರು. ಜನರ ಜಮಾವಣೆ ಮತ್ತು ಗಲಾಟೆ ಹೆಚ್ಚುತ್ತಿದ್ದಂತೆ ಗಾಬರಿಗೊಂಡ ಚಿರತೆ ತಗಡಿನ ಬಾಗಿಲನ್ನು ನೂಕಿ ಹೊರಬಂದು ನೂರಾರು ಜನರಿದ್ದ ಕಡೆಯೇ ಓಡಿ ಹೋಗಿದೆ. ಆ ವೇಳೆ ಅಲ್ಲಿದ್ದ ಸಣ್ಣ ನಿಂಗಯ್ಯ(50) ಎಂಬುವವರ ಮೇಲೆ ದಾಳಿ ಮಾಡಿದೆ. ಅವರ ಬೆನ್ನಿಗೆ ಕಚ್ಚಿ, ಉಗುರಿನಿಂದ ಗಾಯ ಮಾಡಿ ಪಲಾಯನ ಮಾಡಿದೆ. ಈ ಸಂಧರ್ಭಧಲ್ಲಿ ಜನರ ಜಂಗಾಬಲವೇ ಉಡುಗಿಹೋಗಿದೆ.

 ಈ ವೇಳೆ ತಹಸೀಲ್ದಾರ್‌ ಕುಂಇ ಅಹಮದ್‌ ಹಾಗೂ ಅವರ ಸಿಬ್ಬಂದಿ ಸಹ ಹಾಜರಿದ್ದರು. ಎಲ್ಲರೂ ಚಿರತೆಯ ದಾಳಿಗೆ ಕಕ್ಕಾಬಿಕ್ಕಿಯಾದರು. ಈ ಘಟನೆ ಆದ ಕೆಲವೇ ನಿಮಿಷಗಳಲ್ಲಿ ಗೋಣಿತುಮಕೂರಿನಿಂದ ಕೆಲವೇ ದೂರವಿರುವ ದೇವಿಹಳ್ಳಿಯ ಹೊರವಲಯದಲ್ಲಿ ತಮ್ಮ ಮನೆಯ ಬಳಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಶೇಖರಯ್ಯ (50) ಎಂಬುವವರ ಮೇಲೆ ದಿಡೀರನೇ ಎರಗಿ ಅವರ ಕಾಲನ್ನು ಬಲವಾಗಿ ಕಚ್ಚಿ ಗಾಯಗೊಳಿಸಿದೆ. ಅಲ್ಲದೇ ಅವರ ಮನೆಯೊಳಗೆ ಸೇರಿಕೊಂಡಿದೆ. ಕೂಡಲೇ ಜಾಗೃತರಾದ ಮನೆಯವರು ಚಿರತೆಯನ್ನು ಕೂಡಿ ಹಾಕಿದ್ದಾರೆ. 

  ಇಲ್ಲಿಯ ಸರ್ಕಾರಿ ಆಸ್ಪತ್ರೆಗೆ ಚಿರತೆಯಿಂದ ಗಾಯಗೊಂಡವರು ಪ್ರತಿ ಅರ್ಧಗಂಟೆಗೊಮ್ಮೆ ಚಿಕಿತ್ಸೆಗೆ ಆಗಮಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಹುಚ್ಚಮ್ಮ, ವನಜಾಕ್ಷಮ್ಮ, ಬೋರೇಗೌಡ, ಮತ್ತು ಶೇಖರಯ್ಯನವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. 

  ಚಿರತೆ ದಾಳಿಯಿಂದ ಗಾಯಗೊಂಡಿರುವ ಗಾಯಾಳುಗಳ ಖರ್ಚನ್ನು ಅರಣ್ಯ ಇಲಾಖೆಯಿಂದ ಭರಿಸಲಾಗುವುದು. ಅಲ್ಲದೇ ಯಾರಿಗೂ ಪ್ರಾಣಾಪಾಯವಿಲ್ಲವೆಂದು ವೈದ್ಯರು ಹೇಳಿದ್ದಾರೆ ಎಂದು ಚಿಕ್ಕನಾಯಕನಹಳ್ಳಿ ವಲಯ ಅರಣ್ಯಾಧಿಕಾರಿ ಅಮಿತ್ ತಿಳಿಸಿದ್ದಾರೆ.

 ಜನರ ಮೇಲೆ ದಾಳಿ ಮಾಡಿರುವ ಚಿರತೆ ಐದಾರು ಮೇಕೆಗಳ ಮೇಲೂ ದಾಳಿ ಮಾಡಿದೆ. ಮರಿ ಚಿರತೆಗಳು ಸೇರಿದಂತೆ ಐದಾರು ಚಿರತೆಗಳು ಇದ್ದು. ಅರಣ್ಯಾಧಿಕಾರಿ ಎಲ್ಲವನ್ನೂ ಸೆರೆ ಹಿಡಿಯಬೇಕೆಂದು ಗೋಣಿತುಮಕೂರು ಗ್ರಾಮದ ನಂದೀಶ್ ಕುಮಾರ್, ಚಂದನ್ ಮತ್ತು ರಂಗಸ್ವಾಮಿ ಒತ್ತಾಯಿಸಿದ್ದಾರೆ.

 ಮೈಸೂರಿನಿಂದ ಅರವಳಿಕೆ ತಜ್ಞರು ಬರುತ್ತಿದ್ದಾರೆ. ತಡರಾತ್ರಿವರೆಗೂ ಚಿರತೆ ಸೆರೆ ಕಾರ್ಯಚರಣೆ ನಡೆಯಲಿದೆ ಎಂದು ಅರಣ್ಯ ಇಲಾಖಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಅರಣ್ಯಾಧಿಕಾರಿ ಶಶಿಧರ್ ಮತ್ತು ಭರತ್ ಹಾಗು ಅರಣ್ಯ ಇಲಾಖಾ ಸಿಬ್ಬಂದಿಗಳು ದೇವಿಹಳ್ಳಿಯ ಶೇಖರಯ್ಯನವರ ಮನೆ ಬಳಿ ಬೀಡುಬಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...