ತುರುವೇಕೆರೆ | ಅಂಬೇಡ್ಕರ್‌ ಭವನದ  ಒತ್ತವರಿ ಜಾಗ ತೆರವು ಭರವಸೆ : ಅಹೋರಾತ್ರಿ ಧರಣಿ ಅಂತ್ಯ

Date:

ತುರುವೇಕೆರೆ ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಅಂಬೇಡ್ಕರ್‌ ಭವನದ ಜಾಗವನ್ನು ಒತ್ತುವರಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಒತ್ತುವರಿಯನ್ನು ತೆರವುಗೊಳಿಸುವುದಾಗಿ ತಹಸೀಲ್ದಾರ್‌ ನೀಡಿದ ಭರವಸೆಯ ಮೇರೆಗೆ ಸೋಮವಾರದಿಂದ ಪಟ್ಟಣ ಪಂಚಾಯಿತಿಯ ಆವರಣದಲ್ಲಿ ಆರಂಭಗೊಂಡಿದ್ದ ಅಹೋರಾತ್ರಿ ಧರಣಿ ಅಂತ್ಯವಾಯಿತು.

 ಅಂಬೇಡ್ಕರ್‌ ಭವನದ ಜಾಗವನ್ನು ದೇವರಾಜ್‌ ಎಂಬುವವರು ಒತ್ತುವರಿ ಮಾಡಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಾರೆಂದು ಆರೋಪಿಸಿ ತಾಲೂಕು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಪದಾದಿಕಾರಿಗಳು ತಾಲೂಕು ಸಂಚಾಲಕ ಬಾಣಸಂದ್ರ ಕೃಷ್ಣ ಮಾದಿಗ, ಜಿಲ್ಲಾ ಸಂಘಟಕ ಮುರುಳಿ ಕುಂದೂರು, ಬಡಾವಣೆ ಶಿವಣ್ಣ, ಸುನಿಲ್‌ ಸೇರಿದಂತೆ ಹಲವರ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಕೂಡಲೇ ಅಕ್ರಮವಾಗಿ ಕಟ್ಟಲಾಗಿರುವ ಕಟ್ಟಡವನ್ನು ತೆರವುಗೊಳಿಸುವಂತೆ ಆಗ್ರಹಿಸಿದರು. ಆದರೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕೆಲ ಕಾರಣಗಳಿಂದಾಗಿ ಕಟ್ಟಡ ತೆರವುಗೊಳಿಸಲು ಸಾಧ್ಯವಿಲ್ಲ. ಕಾಲಾವಕಾಶ ನೀಡಿ ಎಂದು ಮನವಿ ಮಾಡಿಕೊಂಡರು.

 ಆದರೆ ಪ್ರತಿಭಟನಾಕಾರರು ಅಕ್ರಮ ಕಟ್ಟಡವನ್ನು ಒಡೆಯುವ ತನಕ ತಮ್ಮ ಪ್ರತಿಭಟನೆ ನಡೆಸುವುದಾಗಿ ಘೋಷಿಸಿ ಅಹೋರಾತ್ರಿ ಧರಣಿ ನಡೆಸಿದರು. ರಾತ್ರಿಯೇ ತಹಸೀಲ್ದಾರ್‌ ಕುಂಇ ಅಹಮದ್‌ ರವರು ಧರಣಿ ನಿರತರೊಂದಿಗೆ ಮಾತನಾಡಿ ಮನವೊಲಿಸಲು ಪ್ರಯತ್ನಿಸಿದರು. ಆದರೆ ಪ್ರಯೋಜನವಾಗಲಿಲ್ಲ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಮಂಗಳವಾರ ಪ್ರತಿಭಟನೆಯ ರೂಪ ಬದಲಾಗತೊಡಗಿತು. ಜಿಲ್ಲಾ ದಲಿತ ಸಂಘರ್ಷ ಸಮಿತಿಯ(ಅಂಬೇಡ್ಕರ್‌ ವಾದ) ಸಂಚಾಲಕ ಕುಂದೂರು ತಿಮ್ಮಯ್ಯ ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಹಾಗೂ ಜಿಲ್ಲೆಯ ಕೆಲವು ತಾಲೂಕಿನಿಂದಲೂ ದಲಿತ ಮುಖಂಡರು ಆಗಮಿಸಿ ಪ್ರತಿಭಟನೆ ತೀವ್ರಗೋಳಿಸಿದರು. 

 ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಪುನಃ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್‌ ಕುಂ ಇ ಅಹಮದ್‌ ರವರು ಪಟ್ಟಣ ಪಂಚಾಯ್ತಿಯ ಪ್ರಭಾರ ಅಧ್ಯಕ್ಷೆ ಭಾಗ್ಯ ರವರ ಅಧ್ಯಕ್ಷತೆಯಲ್ಲಿ ಎಲ್ಲಾ ಸದಸ್ಯರ ತುರ್ತು ಸಭೆ ಕರೆದು ಚರ್ಚಿಸಿದರು. ಈ ವೇಳೆ ಎಲ್ಲರೂ ಸ್ಥಳಕ್ಕೆ ತೆರಳಿ ವಾಸ್ತವಾಂಶ ಅರಿಯುವುದು ಸರಿ ಎಂದು ನಿರ್ಧರಿಸಿದರು.

 ಈ ವೇಳೆ ಸ್ಥಳಕ್ಕೆ ತೆರಳಿದ ಅಧಿಕಾರಿಗಳಿಗೆ ಕಟ್ಟಡ ಕಟ್ಟುವ ಸಂಬಂಧ ಕಟ್ಟಡದ ಮಾಲೀಕರಾದ ದೇವರಾಜ್‌ ರವರು ಪಟ್ಟಣ ಪಂಚಾಯಿತಿಯಿಂದ ಯಾವುದೇ ಅನುಮತಿ ಪಡೆದಿಲ್ಲ ಎಂಬುದು ತಿಳಿಯಿತು. ಅಲ್ಲದೇ ಅವರ ನಿವೇಶನದ ಅಳತೆಗಿಂತ ಹೆಚ್ಚಿನ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದು ಗೊತ್ತಾಯಿತು. ಹೀಗಾಗಿ ದೇವರಾಜ್‌ ರವರು ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ತೆರವುಗೊಳಿಸುವ ನಿರ್ಧಾರಕ್ಕೆ ಬರಲಾಯಿತು. 

 ಸ್ಥಳ ವೀಕ್ಷಣೆ ಮಾಡಿದ ನಂತರ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮತ್ತು ಸದಸ್ಯರೊಂದಿಗೆ ಮಾತನಾಡಿದ ತಹಸೀಲ್ದಾರ್‌ ಕುಂಇ ಅಹಮದ್‌ ರವರು ಈ ಕ್ಷಣದಿಂದಲೇ ಒತ್ತುವರಿ ಮಾಡಿ ಕಟ್ಟಲಾಗಿರುವ ಕಟ್ಟಡವನ್ನು ತೆರವು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು. ಇದರಿಂದ ಸಮಾಧಾನಗೊಂಡ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಅಧಿಕಾರಿಗಳು ಕೊಟ್ಟ ಮಾತಿನಂತೆ ನಡೆದುಕೊಳ್ಳುವ ನಂಬಿಕೆ ಇರುವುದರಿಂದ ಕೂಡಲೇ ಪ್ರತಿಭಟನೆಯನ್ನು ಅಂತ್ಯಗೊಳಿಸಿರುವುದಾಗಿ ಘೋಷಿಸಿದರು.

 ಪ್ರತಿಭಟನೆಯಲ್ಲಿ ಮುಖಂಡರಾದ ಬಾಣಸಂದ್ರ ಕೃಷ್ಣ ಮಾದಿಗ, ಮುರುಳಿ ಕುಂದೂರು, ಜಿಲ್ಲಾ ಸಂಘಟನಾ ಸಂಚಾಲಕ ಕೆ.ಎಚ್.ರಂಗನಾಥ್‌ ಕಂಠಲಗೆರೆ, ಎರೆಕಟ್ಟೆ ರಮೇಶ್‌, ಇರ್ಫಾನ್‌, ಬಡಾವಣೆ ಶಿವರಾಜ್‌, ಕುಣಿಕೇನಹಳ್ಳಿ ಜಗದೀಶ್‌, ಮಾಯಸಂದ್ರ ಸುಬ್ರಹ್ಮಣ್ಯ, ಡೊಂಕಿಹಳ್ಳಿ ರಾಮಯ್ಯ, ಬೀಚನಹಳ್ಳಿ ರಾಮಣ್ಣ, ಸುನಿಲ್‌, ಆಕಾಶ್‌, ಕೀರ್ತಿ, ಅಮ್ಮಸಂದ್ರ ರೋಹಿತ್‌, ಭೋವಿ ಸಮಾಜದ ಅಧ್ಯಕ್ಷ ಮಹಲಿಂಗಯ್ಯ, ಪ್ರಸಾದ್‌, ಜಗದೀಶ್‌ (ರಾಯ), ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ವರದಿ -ಎಸ್. ನಾಗಭೂಷಣ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...