ತುರುವೇಕೆರೆ | ಮಳೆ ಆರ್ಭಟ : ಕೊಂಡಜ್ಜಿ ಕ್ರಾಸ್ – ಕಲ್ಲೂರ್ ಕ್ರಾಸ್ ರಸ್ತೆ ಬಂದ್

Date:

ತುರುವೇಕೆರೆ ತಾಲ್ಲೂಕಿನ ಹಲವಾರು ಕೆರೆಗಳು ಕೋಡಿ ಬಿದ್ದ ಪರಿಣಾಮ ನೀರು ರಸ್ತೆ ಮೇಲೆ ಹರಿದು ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ರಾತ್ರಿ ಸುರಿದ ಮಳೆಗೆ ಮನೆ ಗೋಡೆ ಕುಸಿದಿರುವ ಘಟನೆಯೂ ವರದಿಯಾಗಿದೆ.

 ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಹೋಬಳಿ ಡಿ.ಹೊಸಹಳ್ಳಿ ಗ್ರಾಮದ ಪಾರ್ವತಮ್ಮನವರ ವಾಸದ ಮನೆಯ ಒಂದು ಭಾಗದ ಗೋಡೆ ಬುಧವಾರ ರಾತ್ರಿ ಕುಸಿದು ಬಿದ್ದಿದೆ. ಅದೃಷ್ಠವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಧವಸ, ಧಾನ್ಯ ಸೇರಿದಂತೆ ಹಲವು ಪರಿಕರಗಳು ಹಾಳಾಗಿವೆ.

1000588435

 ತುರುವೇಕೆರೆ ಪಟ್ಟಣದ 13 ನೇ ವಾರ್ಡ್ ನಲ್ಲಿರಾಜಕಾಲುವೆ ಮುಚ್ಚಿರುವುದರಿಂದ ಮಳೆ ನೀರು ಇಲ್ಲಿನ ವೆಂಕಟೇಶ್, ಕೆಂಪೇಗೌಡ, ಶೈಲಮ್ಮ, ಮರಿಯಪ್ಪ ಸೇರಿದಂತೆ ಹಲವು ಮನೆಗಳಿಗೆ ಮಳೆ ನೀರು ನುಗ್ಗಿ ಮನೆಯ ದಿನ ನಿತ್ಯದ ಪರಿಕರಗಳೆಲ್ಲ ಹಾನಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ತಹಶೀಲ್ದಾರ್ ಎನ್.ಎ.ಕುಂಞಅಹಮದ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಆಶಾ, ಸದಸ್ಯ ಅಂಜನ್ ಕುಮಾರ್, ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ಶಿರಸ್ತೆದಾರ್ ಸುನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ರಾಜಕಾಲುವೆಯ ಒತ್ತುವರಿ ತೆರವು ಮಾಡಿಸಿ, ಕಾಲುವೆ ನೀರು ಸರಾಗವಾಗಿ ಹೋಗುವಂತೆ ಮಾಡಿಸಿದರು.

 ಮನೆಯೊಳಗೆ ನೀರು ನುಗ್ಗಿ ತೊಂದರೆಯಾಗಿರುವ ಅಲ್ಲದೇ ಮನೆಯೊಳಗಿನ ನೆಲದಿಂದಲೇ ನೀರು ಜಿನುಗುತ್ತಿರುವ ಮನೆಗಳಲ್ಲಿ ವಾಸವಿರುವ ನಾಲ್ಕೖದು ಮನೆಗಳವರಿಗೆ ಶಾಲಾ ಕೊಠಡಿಯಲ್ಲಿ ತಾತ್ಕಾಲಿಕ ವಾಸಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಅವರೆಲ್ಲರಿಗೂ ಊಟೋಪಚಾರದ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ ಎಂದು ತಹಸೀಲ್ದಾರ್ ಅಹಮದ್ ತಿಳಿಸಿದ್ದಾರೆ. 

1000588434

 ತಾಲ್ಲೂಕಿನ ಕೊಂಡಜ್ಜಿ ಕ್ರಾಸ್, ಸೊಪ್ಪನಹಳ್ಳಿ ಮಧ್ಯೆ ಕೊಂಡಜ್ಜಿ ಹಳ್ಳ ರಭಸವಾಗಿ ರಸ್ತೆ ಮೇಲೆ ಹರಿಯುತ್ತಿರುವುದರಿಂದ ದಂಡಿನಶಿವರ ಪೊಲೀಸರು ಮತ್ತು ಕೊಂಡಜ್ಜಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಬ್ಯಾರಿಕೇಡ್ ಹಾಕಿಸಿ ರಸ್ತೆ ಬಂದ್ ಮಾಡಿಸಿದ್ದಾರೆ. ಕಳೆದ ಎರಡು ವರ್ಷದ ಹಿಂದೆ ಇದೇ ಜಾಗದಲ್ಲಿ ಹಳ್ಳದಾಟುವಾಗ ಕಾರು ಕೊಚ್ಚಿ ಹೋಗಿ ಚಾಲಕ ಸಾವನ್ನಪ್ಪಿದ್ದರು. ಆದ ಕಾರಣ ಗೋರಾಘಟ್ಟ-ಕಲ್ಲೂರ್ ಕ್ರಾಸ್ ಭಾಗದ ಬಸ್ ಸೇರಿದಂತೆ ಇನ್ನಿತರ ವಾಹನಗಳ ಸಂಚಾರ ನಿಷೇಧಿಸಲಾಗಿದೆಂದು ತಿಳಿದುಬಂದಿದೆ.

 ಮಲ್ಲಾಘಟ್ಟ ಕೆರೆ ಕೋಡಿ ನೀರು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪಟ್ಟಣದ ಪೊಲೀಸರು ಇಲ್ಲಿನ ರಸ್ತೆ ನಿರ್ಭಂದಿಸಿ ಬ್ಯಾರಿಕೇಡ್ ಹಾಕಿದ್ದಾರೆ. ಸಾರಿಗೇಹಳ್ಳಿ ಕೆರೆ ಕೋಡಿಯಲ್ಲಿ ನೀರು ಹೆಚ್ಚಾಗಿ ರಸ್ತೆ ಮೇಲೆ ಹರಿಯುತ್ತಿದೆ. 

1000588431

 ತುರುವೇಕೆರೆ ಪಟ್ಟಣದ ಮುನಿಯೂರು ಗೇಟ್ ಬಳಿಯ ಶಿಂಷಾ ನದಿ ತುಂಬಿ ಮುನಿಯೂರು ಗದ್ದೆ ಬಯಲಿನವರೆವಿಗೂ ನೀರು ಆವರಿಸಿಕೊಂಡು ಅಪಾಯ ಮಟ್ಟದಲ್ಲಿ ತುಂಬಿ ಹರಿಯುತ್ತಿದೆ. ಶಿಂಷಾ ನದಿ ರಸ್ತೆ ಸೇತುವೆ ಎರಡೂ ಕಡೆ ಯಾವುದೇ ತಡೆಗೋಡೆ ನಿರ್ಮಿಸದೇ ಇರುವ ಕಾರಣ ವಾಹನ ಸವಾರರು ಮತ್ತು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

 ತಾಲ್ಲೂಕಿನ ಜಡೆಯ ಕೆರೆ ತುಂಬಿದ್ದು ಬುಧವಾರ ರಾತ್ರಿ ಕೆರೆ ಏರಿ ಮಧ್ಯೆ ಬಿರುಕು ಉಂಟಾಗಿ ಇಡೀ ಕೆರೆಯೇ ಒಡೆದು ಹೋಗುವ ಸ್ಥಿತಿಯಲ್ಲಿದ್ದಾಗ ಗ್ರಾಮಸ್ಥರು ಹೇಮಾವತಿ ನಾಲಾ ಎಂಜಿಯರ್ ಗೆ ಮಾಹಿತಿ ತಿಳಿಸಿ ಜೆಸಿಬಿ ಮೂಲಕ ಕೋಡಿ ಒಡೆಸಿ ನೀರನ್ನು ಹೊರಗೆ ಬಿಡಿಸಿದರೆಂದು ತಿಳಿದುಬಂದಿದೆ.

ವರದಿ –  ಎಸ್. ನಾಗಭೂಷಣ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...