ತುರುವೇಕೆರೆ | ಅನುಭವದಲ್ಲಿದ್ದ ಜಮೀನು ಬೇರೆಯವರ ಹೆಸರಿಗೆ : ತಾಲೂಕು ಕಚೇರಿ ಆವರಣದಲ್ಲೇ ವಿಷ ಸೇವಿಸಿದ ರೈತ

Date:

ತನ್ನ ಅನುಭವದಲ್ಲಿದ್ದ ಜಮೀನನ್ನು ಬೇರೆಯವರ ಹೆಸರಿಗೆ ಕಂದಾಯ ಇಲಾಖಾ ಅಧಿಕಾರಿಗಳು ದಾಖಲಾತಿ ಸೃಷ್ಠಿಸಿ ತನಗೆ ವಂಚಿಸಿದ್ದಾರೆಂದು ಆರೋಪಿಸಿ ತಾಲೂಕಿನ ದೊಡ್ಡಾಘಟ್ಟದ ರೈತ ವಿಕಲ ಚೇತನ ಜಯಕುಮಾರ್‌ (50) ಎಂಬುವವರು ತಾಲೂಕು ಕಚೇರಿಯ ಆವರಣದಲ್ಲೇ ವಿಷ ಸೇವಿಸಿರುವ ಘಟನೆ ವರದಿಯಾಗಿದೆ.

 ಗುಬ್ಬಿ  ತಾಲೂಕಿನ ದೊಡ್ಡಾಘಟ್ಟದ ನಿವಾಸಿ ಲಕ್ಕಪ್ಪ ಎಂಬುವವರ ಮಗ ಜಯಕುಮಾರ್‌ ಎಂಬುವವರು ತಮ್ಮ ಪಿತ್ರಾರ್ಜಿತ ಆಸ್ತಿಯನ್ನು ಅನುಭವಿಸುತ್ತಿದ್ದರು. ತಮ್ಮ ಜೀವನೋಪಾಯಕ್ಕಾಗಿ ಅಮ್ಮಸಂದ್ರದಲ್ಲಿ ಸಣ್ಣ ಟೀ ಅಂಗಡಿಯನ್ನು ಇಟ್ಟುಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದಾರೆಂದು ಹೇಳಲಾಗಿದೆ. 

 ಈ ಮಧ್ಯೆ ತಮ್ಮ ತಂದೆಯವರ ಹೆಸರಿನಲ್ಲಿದ್ದ ಸುಮಾರು 1.02 ಗುಂಟೆ ಜಮೀನು ಮತ್ತು ೧೧ ಗುಂಟೆ ಜಮೀನನ್ನು ಅದೇ ಗ್ರಾಮದ ಕೃಷ್ಣಪ್ಪ ಮತ್ತು ಗಂಗಮ್ಮ ಎಂಬುವವರ ಹೆಸರಿಗೆ ಮಾಡಲಾಗಿದೆ ಎಂದು ಹೇಳಲಾಗಿದೆ. ಕಳೆದ ತಿಂಗಳ ತನಕವೂ ತಮ್ಮ ತಂದೆಯವರ ಹೆಸರಿನಲ್ಲಿ ಬರುತ್ತಿದ್ದ ದಾಖಲೆಗಳು ಇತ್ತೀಚೆಗೆ ಕೃಷ್ಣಪ್ಪ ಮತ್ತು ಗಂಗಮ್ಮ ಎಂಬುವವರ ಹೆಸರಿಗೆ ಮಾಡಲಾಗಿದೆ ಎಂದು ಸದರಿ ಜಯಕುಮಾರ್‌ ಗೆ ತಿಳಿದುಬಂದಿದೆ. ಈ ಸಂಬಂಧ ಜಯಕುಮಾರ್‌, ಕಂದಾಯ ಇಲಾಖಾ ಅಧಿಕಾರಿಗಳಿಗೆ ತಕರಾರು ಅರ್ಜಿಯನ್ನೂ ಸಹ ನೀಡಿದ್ದಾರೆ, ಅಲ್ಲದೇ ನ್ಯಾಯಾಲಯದ ಮೊರೆಯನ್ನೂ ಸಹ ಹೊಕ್ಕಿದ್ದಾರೆ ಎಂದು ತಿಳಿದುಬಂದಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಮಂಗಳವಾರ ತಾಲೂಕು ಕಛೇರಿಗೆ ಬಂದಿದ್ದ ಜಯಕುಮಾರ್‌ ತಮ್ಮ ಜಮೀನಿಗೆ ಸಂಬಂಧಿಸಿದಂತೆ ಪಹಣಿ ತೆಗೆದುಕೊಂಡ ವೇಳೆ ತಮ್ಮ ಅನುಭವದಲ್ಲಿರುವ ಮತ್ತು ತಮ್ಮ ತಂದೆಯ ಹೆಸರಿನಲ್ಲಿದ್ದ ಜಮೀನು ಅದೇ ಗ್ರಾಮದ ಕೃಷ್ಣಪ್ಪ ಮತ್ತು ಗಂಗಮ್ಮ ಎಂಬುವವರ ಹೆಸರಿಗೆ ಆಗಿರುವುದನ್ನು ಕಂಡು ಹೌಹಾರಿದ್ದಾರೆ. ಅಲ್ಲಿಯೇ ಇದ್ದ ಕಂದಾಯ ಇಲಾಖಾ ಅಧಿಕಾರಿ ಲೋಕೇಶ್‌ ಎಂಬುವವರನ್ನು ಕೇಳಲಾಗಿ ಈ ಸ್ವತ್ತು ಕೃಷ್ಣಪ್ಪ ಮತ್ತು ಗಂಗಮ್ಮ ನವರ ಹೆಸರಿಗೆ ಆಗಿ ಹೋಗಿದೆ. ಈಗೇನೂ ಮಾಡಲು ಸಾಧ್ಯವಿಲ್ಲ. ಸಿವಿಲ್‌ ನ್ಯಾಯಾಲಯಕ್ಕೆ ಹೋಗಿ ಇತ್ಯರ್ಥಪಡಿಸಿಕೊಳ್ಳಿ ಎಂದು ಹೇಳಿದ್ದಾರೆ. ಇದರಿಂದ ಗಾಬರಿಗೊಂಡ ಜಯಕುಮಾರ್‌ ತಮ್ಮೊಂದಿಗೆ ತಂದಿದ್ದ ವಿಷವನ್ನು ಕಛೇರಿಯ ಆವರಣದಲ್ಲೇ ಕುಡಿದರು ಎಂದು ಹೇಳಲಾಗಿದೆ.

 ವಿಷ ಕುಡಿದ ಕೆಲವೇ ನಿಮಿಷಗಳಲ್ಲಿ ತಮ್ಮ ಗ್ರಾಮದ ಕುಮಾರಸ್ವಾಮಿ ಎನ್ನುವವರಿಗೆ ಕರೆ ಮಾಡಿ ತಮಗೆ ಜಮೀನಿನ ವಿಚಾರದಲ್ಲಿ ಅನ್ಯಾಯವಾಗಿದೆ. ಹಾಗಾಗಿ ತಾವು ವಿಷ ಕುಡಿಯುತ್ತಿರುವುದಾಗಿ ಹೇಳಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಕುಮಾರಸ್ವಾಮಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಬೇರೆ ಆಸ್ಪತ್ರೆಗೆ ದಾಖಲಿಸಲು ವೈದ್ಯರು ಸೂಚಿಸಿದ್ದಾರೆ. 

 ತುಮಕೂರಿನಲ್ಲಿ ಜಿಲ್ಲಾಧಿಕಾರಿಗಳ ಸಭೆಗೆ ತೆರಳಿದ್ದ ತಹಸೀಲ್ದಾರ್‌ ಎನ್. ಎ. ಕುಂಇ ಅಹಮದ್‌ ರವರು ವಿಷಯ ತಿಳಿದ ಕೂಡಲೇ ಕಂದಾಯ ಇಲಾಖಾಧಿಕಾರಿಗಳಾದ ಶಿವಕುಮಾರ್ ಮತ್ತು ಮಲ್ಲಿಕಾರ್ಜುನ್ ರವರನ್ನು ಸರ್ಕಾರಿ ಆಸ್ಪತ್ರೆಗೆ ಕಳಿಸಿ ವಾಸ್ತವಾಂಶವನ್ನು ಸಂಗ್ರಹಿಸಿದ್ದಾರೆ. ‌

 ಸದ್ಯ ರೈತ ಜಯಕುಮಾರ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ. 

ವರದಿ – ಎಸ್. ನಾಗಭೂಷಣ್ ತುರುವೇಕೆರೆ 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...