ಚಂದ್ರಯಾನ ಕುರಿತ ಟ್ವೀಟ್ : ನಟ ಪ್ರಕಾಶ್ ರಾಜ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು

Date:

  • ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಬಾಗಲಕೋಟೆಯಲ್ಲಿ ದೂರು
  • ಚಂದ್ರಯಾನ-3 ಕುರಿತು ಅಪಹಾಸ್ಯ ಮಾಡಿದ್ದಾರೆಂದು ಆರೋಪ

ಚಂದ್ರಯಾನ -3 ಕುರಿತು ಅಪಹಾಸ್ಯದ ರೀತಿಯ ಫೋಟೋ ಟ್ವೀಟ್ ಮಾಡಿದ್ದಾರೆಂದು ಆರೋಪಿಸಿ ನಟ ಪ್ರಕಾಶ್ ರಾಜ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಪೊಲೀಸರಿಗೆ ದೂರು ಸಲ್ಲಿಸಲಾಗಿದೆ.

ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪೊಲೀಸ್‌ ಠಾಣೆಗೆ ಶ್ರೀರಾಮ ಸೇನೆಯ ಮುಖಂಡ ಶಿವಾನಂದ ಗಾಯಕ್‌ವಾಡ್ ಎಂಬವರು ದೂರು ನೀಡಿದ್ದು, ಇಸ್ರೋ ವಿಜ್ಞಾನಿಗಳನ್ನು ಅಪಹಾಸ್ಯ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಮನವಿ ಸಲ್ಲಿಸಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಬನಹಟ್ಟಿ ಠಾಣೆಯ ಸಬ್ ಇನ್ಸ್‌ಪೆಕ್ಟರ್, ‘ಟ್ವಿಟರ್‌ನಲ್ಲಿ ಚಂದ್ರಯಾನ -3 ಕುರಿತು ಅಪಹಾಸ್ಯ ಮಾಡಿದ್ದಾರೆಂದು ಮನವಿ ನೀಡಿದ್ದಾರೆ. ಅದನ್ನು ಸ್ವೀಕರಿಸಿದ್ದೇವೆ. ಎಫ್‌ಐಆರ್ ದಾಖಲಾಗಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಂದ್ರಯಾನ – 3 ಭಾರತದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಆಗಸ್ಟ್ 23 ರ ಸಂಜೆ 06:04ಕ್ಕೆ ಚಂದ್ರನ ಅಂಗಳದಲ್ಲಿ ವಿಕ್ರಮ್ ಲ್ಯಾಂಡರ್‌ ಲ್ಯಾಂಡ್ ಆಗಲಿದೆ. ಇದು ಯಶಸ್ಸಿಯಾಗಲೆಂದು ಹಲವೆಡೆ ಪೂಜೆ, ಪುನಸ್ಕಾರ ನಡೆಸಲಾಗುತ್ತಿದೆ.

ಈ ನಡುವೆ, ಚಂದ್ರಯಾನ – 3 ಬಗ್ಗೆ ಪ್ರಕಾಶ್ ರಾಜ್ ಮಾಡಿರುವ ಟ್ವೀಟ್‌ ಸೋಷಿಯಲ್‌ ಮೀಡಿಯಾದಲ್ಲಿ ವಿವಾದಕ್ಕೆಡೆ ಮಾಡಿಕೊಟ್ಟಿತ್ತು.

‘ಬ್ರೇಕಿಂಗ್ ನ್ಯೂಸ್: ಚಂದ್ರನ ಅಂಗಳದಿಂದ ವಿಕ್ರಮ್‌ಲ್ಯಾಂಡರ್‌ನಿಂದ ಬಂದ ಮೊದಲ ಫೋಟೋ.. ವಾವ್’ ಎಂದು ಟ್ವೀಟ್ ಮಾಡುವುದರ ಜೊತೆಗೆ ವ್ಯಕ್ತಿಯೊಬ್ಬರು ಎರಡು ಮಗ್‌ಗಳ ನಡುವೆ ಚಹಾವನ್ನು ಸುರಿಯುವ ವ್ಯಂಗ್ಯಚಿತ್ರ ಹಂಚಿಕೊಂಡಿದ್ದರು. ಇದು ಹಲವರ ಕಣ್ಣು ಕೆಂಪಗಾಗಿಸಿತ್ತು.

ವಿವಾದಿತ ಟ್ವೀಟ್ ಮೂಲಕ ದೇಶಕ್ಕೆ ಅಪಮಾನ ಮಾಡುತ್ತಿದ್ದಾರೆಂದು ಆರೋಪಿಸಿದರೆ, ಇದಕ್ಕೆ ಮತ್ತೊಂದು ಟ್ವೀಟ್ ಮಾಡಿದ್ದ ಪ್ರಕಾಶ್ ರೈ, ‘ದ್ವೇಷಿಸುವವರಿಗೆ ದ್ವೇಷ ಮಾತ್ರ ಕಾಣ ಸಿಗುತ್ತದೆ’ ಎಂದು ಹೇಳಿದ್ದರು.

‘ದ್ವೇಷಿಸುವವರಿಗೆ ದ್ವೇಷ ಮಾತ್ರ ಕಾಣುತ್ತದೆ. ನಾನು ಆರ್ಮ್‌ಸ್ಟ್ರಾಂಗ್ ಸಮಯದ ಹಾಸ್ಯವನ್ನು ಉಲ್ಲೇಖಿಸುತ್ತಿದ್ದೆ. ಕೇರಳದ ಚಾಯ್‌ವಾಲಾಗಳ ಬಗ್ಗೆ ತಿಳಿಸಿದ್ದೇನೆ. ಟ್ರೋಲ್‌ ಮಾಡುವವರು ಯಾವ ಚಾಯ್‌ವಾಲಾ ಎಂದು ತಿಳಿದುಕೊಂಡಿದ್ದಾರೆ? ನಿಮಗೆ ಜೋಕ್ ಸಿಗದಿದ್ದರೆ, ಜೋಕ್ ನಿಮ್ಮ ಬಗ್ಗೆಯೇ ಇರುತ್ತದೆ. ಅಭಿವೃದ್ಧಿ ಹೊಂದಿ’ ಎಂದು ಟ್ವೀಟ್ ಬಗ್ಗೆ ವಿವಾದ ಉಂಟು ಮಾಡಿದವರಿಗೆ ಪ್ರಕಾಶ್​ ರಾಜ್​ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...