ಬೆಳಗಾವಿ | ಇಬ್ಬರು ದಲಿತ ಯುವಕರನ್ನು ಮರಕ್ಕೆ ಕಟ್ಟಿ ಹಲ್ಲೆ: ದೂರು-ಪ್ರತಿದೂರು ದಾಖಲು

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೊಡಚಿ ಎಂಬ ಗ್ರಾಮದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರು ಯುವಕರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.

ಹಲ್ಲೆಗೊಳಗಾಗಿರುವ ಓರ್ವ ಸಂತ್ರಸ್ತ ಯುವಕನ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಘಟನೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ದೂರುಗಳು ಕಟಕೋಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಹಲ್ಲೆ ಮಾಡಿದವರು ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಹಲ್ಲೆಗೊಳಗಾಗಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಾರೆ ಎಂದು ತಿಳಿದು ಬಂದಿದೆ. ಎರಡೂ ಸಮುದಾಯದ ಮಂದಿ ಕಟಕೋಳ ಪೊಲೀಸ್ ಠಾಣೆಯಲ್ಲಿ ದೂರು- ಪ್ರತಿದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈರಣ್ಣ ವಿಠಲ ನಾಯ್ಕರ (18) ಹಾಗೂ ಲಕ್ಷ್ಮಣ ಮಲ್ಲಪ್ಪ ಚಿಪ್ಪಲಕಟ್ಟಿ (19) ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ.

ಆಗಸ್ಟ್ 5ರಂದು ಈ ಹಲ್ಲೆ ಘಟನೆ ನಡೆದಿರುವುದಾಗಿ ತಿಳಿದು ಬಂದಿದ್ದು, ವಿಡಿಯೋ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್ ಆದ ಬಳಿಕ ಆ.11ರಂದು ಕಟಕೋಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಲಿಂಗಾಯತ ಸಮಾಜದ ಈರಣ್ಣ ಸಂಗಪ್ಪ ಪಾಕನಟ್ಟಿ, ಬಸನಗೌಡ ನಿಂಗನಗೌಡ ಪಾಟೀಲ, ಪ್ರದೀಪ ಈರಣ್ಣ ಪಾಕನಟ್ಟಿ, ಮಹಾಂತೇಶ ಲಕ್ಷ್ಮಣ ಪಾಕನಟ್ಟಿ, ಸಚಿನ್‌ ದಾನಪ್ಪ ಪಾಕನಟ್ಟಿ, ನಿಂಗರಾಜ ಈರಪ್ಪ ಪಾಕನಟ್ಟಿ, ಸಂಗಪ್ಪ ನಿಂಗಪ್ಪ ಪಾಕನಟ್ಟಿ ಅವರ ವಿರುದ್ಧ ಕೊಲೆ ಯತ್ನ, ಮಾರಣಾಂತಿಕ ಹಲ್ಲೆ ಹಾಗೂ ಜಾತಿ ನಿಂದನೆ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಕಟಕೋಳ ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯ ಸಂಬಂಧ ವಿಠಲ ಲಕ್ಷ್ಮಣ ನಾಯ್ಕರ ಎನ್ನುವವರು ದೂರು ನೀಡಿದ್ದಾರೆ. ‌ದೂರಿನಲ್ಲಿ, “ಆರೋಪಿಗಳು ಹಾಗೂ ನಮ್ಮ ಜಮೀನು ಅಕ್ಕಪಕ್ಕದಲ್ಲಿವೆ. ಜಮೀನಿಗೆ ಹೋಗಲು ದಾರಿ ಏಕೆ ಬಿಡುವುದಿಲ್ಲ ಎಂದು ಜಗಳ ತೆಗೆದು ಬಳಿಕ ಆರೋಪಿಗಳು ಯುವಕರನ್ನು ಮರಕ್ಕೆ ಕಟ್ಟಿ ಹೊಡೆದಿದ್ದಾರೆ. ಕುಡಗೋಲು ತೋರಿಸಿ ಕೊಲೆ ಬೆದರಿಕೆ ಹಾಕಿದ್ದಾರೆ. ಅಲ್ಲದೇ, ಕೀಳು ಪದ ಬಳಸಿ ಜಾತಿ ನಿಂದನೆ ಮಾಡಿದ್ದಾರೆ’ ಎಂದು ಉಲ್ಲೇಖಿಸಿದ್ದಾರೆ.

ಈ ದೂರಿಗೆ ಪ್ರತಿ ದೂರು ನೀಡಿರುವ ಲಿಂಗಾಯತ ಸಮುದಾಯದ ರಮೇಶ್ ಲಕ್ಷ್ಮಣ್ ಪಾಕನಟ್ಟಿ ಎಂಬುವವರು, “ಈ ಘಟನೆ ಜಮೀನು ವಿವಾದಕ್ಕೆ ಸಂಬಂಧಿಸಿಲ್ಲ. ಈ ಇಬ್ಬರೂ ಯುವಕರು ನನ್ನ 14 ವರ್ಷದ ಅಪ್ರಾಪ್ತ ಮಗಳಿಗೆ ಕಿರುಕುಳ ನೀಡುತ್ತಿದ್ದರು. ಆಕೆ ಶಾಲೆಗೆ ಹೋಗುವಾಗ ಬರುವಾಗ ಬೈಕ್‌ ಮೂಲಕ ಬೆನ್ನಟ್ಟಿ ಬರುತ್ತಿದ್ದರು. ಪ್ರೀತಿಸುವಂತೆ ಕಾಡಿಸುತ್ತಿದ್ದರು. ಮೊಬೈಲ್ ನಂಬರ್ ಕೊಡು, ಇಲ್ಲದಿದ್ದರೆ ಸುಮ್ಮನೇ ಬಿಡುವುದಿಲ್ಲವೆಂದು ಬೆದರಿಕೆ ಹಾಕುತ್ತಿದ್ದರು” ಎಂದು ದೂರಿನಲ್ಲಿ ಉಲ್ಲೇಖ ಮಾಡಿರುವುದಾಗಿ ತಿಳಿದುಬಂದಿದೆ.

ಎರಡೂ ಕಡೆಯ ದೂರನ್ನು ಸ್ವೀಕರಿಸಿರುವ ಕಟಕೋಳ ಪೊಲೀಸರು, ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...