ಅಧಿವೇಶನ | ವಿಧಾನ ಪರಿಷತ್‌ನಲ್ಲೂ ಎರಡು ಮಹತ್ವದ ವಿಧೇಯಕ ಅಂಗೀಕಾರ

Date:

ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದ್ದ ಎರಡು ಮಹತ್ವದ ವಿಧೇಯಕಗಳನ್ನು ಮಂಗಳವಾರ ವಿಧಾನ ಪರಿಷತ್‌ನಲ್ಲೂ ಸುದೀರ್ಘ ಚರ್ಚೆಯ ನಂತರ ಅಂಗೀಕರಿಸಲಾಗಿದೆ.

ಕರ್ನಾಟಕ ಸಾರ್ವಜನಿಕ ಸಂಗ್ರಹಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕ 2023 ಹಾಗೂ ಕರ್ನಾಟಕ ಸರಕು ಮತ್ತು ಸೇವೆಗಳ (ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆ ಅಂಗೀಕಾರ ಮಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ ಕೆ ಪಾಟೀಲ್ ಅವರು ಮಸೂದೆಗಳನ್ನು ಮಂಡಿಸಿ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡರು.

ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ಕಾಯ್ದೆ ಮೇಲೆ ಅನೇಕ ಸದಸ್ಯರು ಮಾತನಾಡಿದರು. ಸದಸ್ಯರಾದ ಡಿ.ಎಸ್.ಅರುಣ್, ನವೀನ್‌, ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಮುನಿರಾಜು ಗೌಡ ಸೇರಿದಂತೆ ಮತ್ತಿತರರು ಚರ್ಚೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಿದರು. ಇನ್ನು ಜೆಡಿಎಸ್‌ ಪರವಾಗಿ ಮರಿತಿಬ್ಬೇಗೌಡ, ಟಿ.ಎ.ಶರವಣ, ಭೋಜೇಗೌಡ ಸೇರಿ ಹಲವು ಸದಸ್ಯರು ಈ ಬಗ್ಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಣ್ಣ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಸೋರಿಕೆಯಾಗುತ್ತಿರುವ ತೆರಿಗೆಯನ್ನು ತಡೆಗಟ್ಟಲು ಬಿಗಿ ಕ್ರಮ ಕೈಗೊಳ್ಳಬೇಕು” ಎಂಬ ಸಲಹೆಗಳು ವ್ಯಕ್ತವಾದವು.

ಸಚಿವ ಎಚ್‌ ಕೆ ಪಾಟೀಲ್‌ ಉತ್ತರಿಸಿ, “ವಿಧೇಯಕ ತಿದ್ದುಪಡಿಯಿಂದ ಯಾರು ಕೂಡ ಆತಂಕ ಪಡಬೇಕಾದ ಅಗತ್ಯವಿಲ್ಲ. ಎಲ್ಲರನ್ನು ಗಮನದಲ್ಲಿಟ್ಟುಕೊಂಡೇ ತಿದ್ದುಪಡಿ ಮಾಡಲಾಗಿದೆ. ಸದಸ್ಯರ ಅಭಿಪ್ರಾಯ ಮನ್ನಿಸಲಾಗುವುದು” ಎಂದರು. ಬಳಿಕ ವಿಧೇಯಕವನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ಅಂಗೀಕಾರ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...